‘ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಬಗ್ಗೆ ವಿಶ್ವವೇ ಮೆಚ್ಚುತ್ತಿದೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಗುರವಾಗಿ ಮಾತನಾಡುತ್ತಿದ್ದಾರೆ. ಇದರಿಂದ ಅವರಿಗೆ ಲಾಭ ಆಗುವುದಿಲ್ಲ, ಬದಲಿಗೆ ಜನ ಇಟ್ಟಿರುವ ಅಲ್ಪಸ್ವಲ್ಪ ವಿಶ್ವಾಸವನ್ನೂ ಕಳೆದುಕೊಳ್ಳಲಿದ್ದಾರೆ. ಇನ್ನು ಐದಾರು ತಿಂಗಳಲ್ಲಿ ಮನೆಗೆ ಹೋಗುತ್ತಿರುವವರ ಬಗ್ಗೆ ನಾನು ಹೆಚ್ಚಿಗೆ ಮಾತನಾಡುವುದಿಲ್ಲ’ ಎಂದು ವ್ಯಂಗ್ಯವಾಡಿದರು.