‘ಉಮಾಶ್ರಿ ಅವರು ಪಿತ್ತ ಮತ್ತು ‘ಆಸಿಡಿಟಿ’ಯಿಂದ ಬಳಲುತ್ತಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಯಾವುದೆ ತೊಂದರೆಯಿಲ್ಲ. ಭಯ ಪಡುವ ಅಗತ್ಯವಿಲ್ಲ. ಅವರಿಗೆ ಎರಡು ದಿನಗಳ ವಿಶ್ರಾಂತಿ ಅಗತ್ಯವಿದೆ. ವಿಶ್ರಾಂತಿ ನಂತರ ಗುಣಮುಖರಾಗುತ್ತಾರೆ ಎಂದು ಜಿಲ್ಲಾ ಆಸ್ಪತ್ರೆ ಸ್ಥಾನಿಕ ವೈದ್ಯಾಧಿಕಾರಿ ಶಿವನಗೌಡ ಪಾಟಿಲ್ ತಿಳಿಸಿದರು.