‘ಜಾರಕಿಹೊಳಿ ಅವರು ರಾಜ್ಯದ ಪ್ರತಿಯೊಂದು ತಾಲ್ಲೂಕುಗಳಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರು ಕಾಂಗ್ರೆಸ್ ಪಕ್ಷ ತೊರೆದರೆ ರಾಜ್ಯ ಮತ್ತೊಂದು ಉತ್ತರ ಪ್ರದೇಶವಾಗಲಿದೆ. ದಲಿತರು ಹಾಗೂ ಅಲ್ಪಸಂಖ್ಯಾತರು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ತೊರೆದಿರುವುದರಿಂದ ಅಲ್ಲಿ ಪಕ್ಷ ತಲೆ ಎತ್ತಲು ಕೂಡ ಒದ್ದಾಡುತ್ತಿದೆ. ರಾಜ್ಯದಲ್ಲಿ ಆ ರೀತಿ ಆಗಬಾರದೆಂದರೆ, ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದರು.