<p><strong>ಬೆಂಗಳೂರು:</strong> ‘ಕೋಮು ಸಾಮರಸ್ಯ ಹಾಳು ಮಾಡಲು ಬಿಜೆಪಿಯವರು ಪದೇ ಪದೇ ಪ್ರಯತ್ನಿಸುತ್ತಿದ್ದಾರೆ. ಇದನ್ನು ತಡೆಯಲು ಪರಿವರ್ತನಾ ಯಾತ್ರೆ ಮತ್ತು ಟಿಪ್ಪು ಸುಲ್ತಾನ್ ಜಯಂತಿ ಸಂದರ್ಭದಲ್ಲಿ ಸೂಕ್ತ ನಿಗಾ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>.<p>ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಗುರುವಾರ ಸಭೆ ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p>.<p>‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಇದು ಚುನಾವಣಾ ವರ್ಷವಾಗಿರುವುದರಿಂದ ಕೋಮು ಭಾವನೆ ಕೆರಳಿಸುವ ಪ್ರಯತ್ನಕ್ಕೆ ಕೆಲವರು ಕೈ ಹಾಕಬಹುದು. ಅಂಥವರ ಬಗ್ಗೆ ನಿಗಾ ವಹಿಸಬೇಕು, ಸಮಾಜ ಘಾತುಕ ಶಕ್ತಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ’ ಎಂದರು.</p>.<p>‘ಕರ್ನಾಟಕದ ಜನರು ಟಿಪ್ಪು ಜಯಂತಿಯನ್ನು ಒಪ್ಪಿದ್ದಾರೆ. ಮೊದಲ ವರ್ಷ ಬಿಜೆಪಿ, ಆರ್ಎಸ್ಎಸ್ನವರ ಪ್ರಚೋದನೆಯಿಂದ ಕೊಡಗಿನಲ್ಲಿ ಸ್ವಲ್ಪ ಗಲಾಟೆಯಾಗಿದ್ದು ಬಿಟ್ಟರೆ ಎಲ್ಲ ಕಡೆ ಶಾಂತಿಯುತವಾಗಿ ನಡೆದಿದೆ. ಈ ವರ್ಷವೂ ಟಿಪ್ಪು ಜಯಂತಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ, ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್. ರಾಜು, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ, ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಭಾಗವಹಿಸಿದ್ದರು.</p>.<p><strong>ಅಶೋಕ್ ಭೂ ಹಗರಣದ ತನಿಖೆ</strong><br /> ‘ಆರ್. ಅಶೋಕ್ ಅವರು ಭಾಗಿಯಾಗಿದ್ದಾರೆ ಎನ್ನಲಾದ ಭೂ ಹಗರಣದ ಕುರಿತು ತನಿಖೆ ನಡೆಸುವ ಬಗ್ಗೆ ಕಾನೂನು ತಜ್ಞರ ಜೊತೆ ಸಮಾಲೋಚಿಸಲಾಗುವುದು’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>ಬೆಂಗಳೂರು ದಕ್ಷಿಣ ತಾಲ್ಲೂಕು ಬಗರ್ಹುಕುಂ ಸಾಗುವಳಿ ಸಕ್ರಮ ಸಮಿತಿ ಅಧ್ಯಕ್ಷರಾಗಿ ಸಾವಿರಾರು ಎಕರೆ ಭೂಮಿಯನ್ನು ಅಕ್ರಮವಾಗಿ ಹಂಚಿದ್ದಾರೆ ಎಂಬ ಆರೋಪ ಇದೆ. ಬಿಬಿಎಂಪಿ ಕೇಂದ್ರ ಸ್ಥಾನದಿಂದ 18 ಕಿ.ಮೀ. ವ್ಯಾಪ್ತಿಯಲ್ಲಿ ಜಮೀನು ಮಂಜೂರು ಮಾಡಬಾರದು ಎಂಬ ನಿಯಮ ಇದ್ದರೂ ಅದನ್ನು ಉಲ್ಲಂಘಿಸಿದ್ದಾರೆ. ಆ ಜಮೀನು ವಶಪಡಿಸಿಕೊಳ್ಳಲು ಮತ್ತು ಕಾನೂನು ಬಾಹಿರವಾಗಿ ಜಮೀನು ಹಂಚಿಕೆ ಮಾಡಿದವರ ವಿರುದ್ಧ ಏನು ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆ ಪರಿಶೀಲಿಸಲಾಗುವುದು ಎಂದರು.</p>.<p>**</p>.<p>ಪರಿವರ್ತನಾ ರ್ಯಾಲಿ ನಡೆಸಲು 75 ದಿನ ಅವಕಾಶ ನೀಡಲಾಗಿದೆ. ಎಲ್ಲಿಯಾದರೂ ಕಾನೂನು ಸುವ್ಯಸ್ಥೆಗೆ ಧಕ್ಕೆಯಾದರೆ ಅದಕ್ಕೆ ಬಿಜೆಪಿಯೇ ಹೊಣೆ<br /> <em><strong>– ರಾಮಲಿಂಗಾರೆಡ್ಡಿ, ಗೃಹ ಸಚಿವ</strong></em></p>.<p><em><strong>**</strong></em></p>.<p><strong>ನ.6ರ ಬಳಿಕ ರಸ್ತೆಗುಂಡಿ ತಪಾಸಣೆ</strong></p>.<p>ನಗರದ ವಿವಿಧೆಡೆ ರಸ್ತೆಗುಂಡಿಗಳ ತಪಾಸಣೆಗೆ ನ.6ರ ಬಳಿಕ ಅನಿರೀಕ್ಷಿತ ಭೇಟಿ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.</p>.<p>ಗುಂಡಿಗಳನ್ನು ಮುಚ್ಚಲು ನ.6ರವರಗೆ ಸಮಯ ನೀಡಬೇಕು ಎಂದು ಬಿಬಿಎಂಪಿ ಮೇಯರ್ ಸಮಯ ಕೇಳಿದ್ದರು. ಆ ಬಳಿಕ ನಾನು ತಪಾಸಣೆ ನಡೆಸುತ್ತೇನೆ. ಯಾವುದೇ ರಸ್ತೆಯಲ್ಲಿ ಗುಂಡಿಗಳು ಕಂಡು ಬಂದರೆ ಸಂಬಂಧಪಟ್ಟ ಎಂಜಿನಿಯರುಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೋಮು ಸಾಮರಸ್ಯ ಹಾಳು ಮಾಡಲು ಬಿಜೆಪಿಯವರು ಪದೇ ಪದೇ ಪ್ರಯತ್ನಿಸುತ್ತಿದ್ದಾರೆ. ಇದನ್ನು ತಡೆಯಲು ಪರಿವರ್ತನಾ ಯಾತ್ರೆ ಮತ್ತು ಟಿಪ್ಪು ಸುಲ್ತಾನ್ ಜಯಂತಿ ಸಂದರ್ಭದಲ್ಲಿ ಸೂಕ್ತ ನಿಗಾ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.</p>.<p>ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಗುರುವಾರ ಸಭೆ ನಡೆಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.</p>.<p>‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಇದು ಚುನಾವಣಾ ವರ್ಷವಾಗಿರುವುದರಿಂದ ಕೋಮು ಭಾವನೆ ಕೆರಳಿಸುವ ಪ್ರಯತ್ನಕ್ಕೆ ಕೆಲವರು ಕೈ ಹಾಕಬಹುದು. ಅಂಥವರ ಬಗ್ಗೆ ನಿಗಾ ವಹಿಸಬೇಕು, ಸಮಾಜ ಘಾತುಕ ಶಕ್ತಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ’ ಎಂದರು.</p>.<p>‘ಕರ್ನಾಟಕದ ಜನರು ಟಿಪ್ಪು ಜಯಂತಿಯನ್ನು ಒಪ್ಪಿದ್ದಾರೆ. ಮೊದಲ ವರ್ಷ ಬಿಜೆಪಿ, ಆರ್ಎಸ್ಎಸ್ನವರ ಪ್ರಚೋದನೆಯಿಂದ ಕೊಡಗಿನಲ್ಲಿ ಸ್ವಲ್ಪ ಗಲಾಟೆಯಾಗಿದ್ದು ಬಿಟ್ಟರೆ ಎಲ್ಲ ಕಡೆ ಶಾಂತಿಯುತವಾಗಿ ನಡೆದಿದೆ. ಈ ವರ್ಷವೂ ಟಿಪ್ಪು ಜಯಂತಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ, ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್. ರಾಜು, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ, ನಗರ ಪೊಲೀಸ್ ಆಯುಕ್ತ ಸುನಿಲ್ ಕುಮಾರ್ ಭಾಗವಹಿಸಿದ್ದರು.</p>.<p><strong>ಅಶೋಕ್ ಭೂ ಹಗರಣದ ತನಿಖೆ</strong><br /> ‘ಆರ್. ಅಶೋಕ್ ಅವರು ಭಾಗಿಯಾಗಿದ್ದಾರೆ ಎನ್ನಲಾದ ಭೂ ಹಗರಣದ ಕುರಿತು ತನಿಖೆ ನಡೆಸುವ ಬಗ್ಗೆ ಕಾನೂನು ತಜ್ಞರ ಜೊತೆ ಸಮಾಲೋಚಿಸಲಾಗುವುದು’ ಎಂದು ಸಿದ್ದರಾಮಯ್ಯ ಹೇಳಿದರು.</p>.<p>ಬೆಂಗಳೂರು ದಕ್ಷಿಣ ತಾಲ್ಲೂಕು ಬಗರ್ಹುಕುಂ ಸಾಗುವಳಿ ಸಕ್ರಮ ಸಮಿತಿ ಅಧ್ಯಕ್ಷರಾಗಿ ಸಾವಿರಾರು ಎಕರೆ ಭೂಮಿಯನ್ನು ಅಕ್ರಮವಾಗಿ ಹಂಚಿದ್ದಾರೆ ಎಂಬ ಆರೋಪ ಇದೆ. ಬಿಬಿಎಂಪಿ ಕೇಂದ್ರ ಸ್ಥಾನದಿಂದ 18 ಕಿ.ಮೀ. ವ್ಯಾಪ್ತಿಯಲ್ಲಿ ಜಮೀನು ಮಂಜೂರು ಮಾಡಬಾರದು ಎಂಬ ನಿಯಮ ಇದ್ದರೂ ಅದನ್ನು ಉಲ್ಲಂಘಿಸಿದ್ದಾರೆ. ಆ ಜಮೀನು ವಶಪಡಿಸಿಕೊಳ್ಳಲು ಮತ್ತು ಕಾನೂನು ಬಾಹಿರವಾಗಿ ಜಮೀನು ಹಂಚಿಕೆ ಮಾಡಿದವರ ವಿರುದ್ಧ ಏನು ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆ ಪರಿಶೀಲಿಸಲಾಗುವುದು ಎಂದರು.</p>.<p>**</p>.<p>ಪರಿವರ್ತನಾ ರ್ಯಾಲಿ ನಡೆಸಲು 75 ದಿನ ಅವಕಾಶ ನೀಡಲಾಗಿದೆ. ಎಲ್ಲಿಯಾದರೂ ಕಾನೂನು ಸುವ್ಯಸ್ಥೆಗೆ ಧಕ್ಕೆಯಾದರೆ ಅದಕ್ಕೆ ಬಿಜೆಪಿಯೇ ಹೊಣೆ<br /> <em><strong>– ರಾಮಲಿಂಗಾರೆಡ್ಡಿ, ಗೃಹ ಸಚಿವ</strong></em></p>.<p><em><strong>**</strong></em></p>.<p><strong>ನ.6ರ ಬಳಿಕ ರಸ್ತೆಗುಂಡಿ ತಪಾಸಣೆ</strong></p>.<p>ನಗರದ ವಿವಿಧೆಡೆ ರಸ್ತೆಗುಂಡಿಗಳ ತಪಾಸಣೆಗೆ ನ.6ರ ಬಳಿಕ ಅನಿರೀಕ್ಷಿತ ಭೇಟಿ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.</p>.<p>ಗುಂಡಿಗಳನ್ನು ಮುಚ್ಚಲು ನ.6ರವರಗೆ ಸಮಯ ನೀಡಬೇಕು ಎಂದು ಬಿಬಿಎಂಪಿ ಮೇಯರ್ ಸಮಯ ಕೇಳಿದ್ದರು. ಆ ಬಳಿಕ ನಾನು ತಪಾಸಣೆ ನಡೆಸುತ್ತೇನೆ. ಯಾವುದೇ ರಸ್ತೆಯಲ್ಲಿ ಗುಂಡಿಗಳು ಕಂಡು ಬಂದರೆ ಸಂಬಂಧಪಟ್ಟ ಎಂಜಿನಿಯರುಗಳನ್ನು ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>