<p><strong>ಬೆಂಗಳೂರು: </strong>ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಾಮೂಹಿಕ ನಾಯಕತ್ವದಡಿಯೇ ಹೋಗುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ರಾಜ್ಯದ ಮುಖಂಡರಿಗೆ ಸಲಹೆ ಮಾಡಿದ್ದಾರೆ.<br /> ಗಡ್ಕರಿ ಜತೆ ಚರ್ಚಿಸಲು ನಾಗಪುರಕ್ಕೆ ಮಂಗಳವಾರ ತೆರಳಿದ್ದ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರರಿಗೆ ಈ ಸಲಹೆ ನೀಡಿದ್ದಾರೆ ಎಂದು ಗೊತ್ತಾಗಿದೆ.<br /> <br /> ಸಂಜೆ ನಗರಕ್ಕೆ ವಾಪಸಾದ ನಂತರ ಸುದ್ದಿಗಾರರ ಜತೆ ಮಾತನಾಡಿದ ಸದಾನಂದ ಗೌಡ ಅವರು ಎಲ್ಲರೂ ಒಟ್ಟಿಗೇ ಹೋಗಲು ವರಿಷ್ಠರು ಸಲಹೆ ನೀಡಿದ್ದು, ಆ ಪ್ರಕಾರ ನಡೆದುಕೊಳ್ಳುವುದಾಗಿ ಹೇಳಿದರು. ಯಡಿಯೂರಪ್ಪ ನೇತೃತ್ವದಲ್ಲೇ ಚುನಾವಣೆ ಎದುರಿಸಬೇಕೆಂದು ಅವರ ಬೆಂಬಲಿಗ ಕೆಲ ಸಚಿವರು ಇತ್ತೀಚೆಗೆ ನಾಗಪುರಕ್ಕೆ ತೆರಳಿ ಗಡ್ಕರಿ ಅವರಿಗೆ ಮನವಿ ಮಾಡಿದ್ದರು. <br /> <br /> ಈ ವಿಷಯದಲ್ಲಿ ಮುಖಂಡರಲ್ಲಿಯೂ ಗೊಂದಲ ಉಂಟಾಗಿತ್ತು. ಕೊನೆಗೆ ಮುಖ್ಯಮಂತ್ರಿ ಸದಾನಂದ ಗೌಡ ಅವರು ಗಡ್ಕರಿ ಅವರನ್ನು ಭೇಟಿ ಮಾಡಿಯೇ ಈ ವಿವಾದ ಬಗೆಹರಿಸಿಕೊಳ್ಳಲು ನಿರ್ಧರಿಸಿ, ನಾಗಪುರಕ್ಕೆ ತೆರಳಿದರು. ಜ್ವರದ ಕಾರಣ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ನಾಗಪುರಕ್ಕೆ ಹೋಗಲಿಲ್ಲ. <br /> <br /> ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖಂಡರಾದ ಸಂತೋಷ್, ಸತೀಶ್ ತೆರಳಿದ್ದರು.<br /> `ಒಬ್ಬರ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಬೇಡ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಿ~ ಎನ್ನುವ ಸಲಹೆಯನ್ನು ಗಡ್ಕರಿ ನೀಡಿದರು. ಇದೇ ವೇಳೆ ಯಡಿಯೂರಪ್ಪ ಅವರನ್ನು ಕಡೆಗಣಿಸುವಂತಿಲ್ಲ. <br /> ಅವರನ್ನೂ ಜತೆಗೆ ಕರೆದೊಯ್ಯಬೇಕೆನ್ನುವ ಸಲಹೆಯನ್ನೂ ಅವರು ನೀಡಿದ್ದಾರೆ ಎಂದು ಗೊತ್ತಾಗಿದೆ.<br /> <br /> <strong>ಯಡಿಯೂರಪ್ಪ ಮನವಿ:</strong> `ಸುಳ್ಳು ಆರೋಪಗಳ ಹಿನ್ನೆಲೆಯಲ್ಲಿ ನಾನು ಅಗ್ನಿಪರೀಕ್ಷೆ ಎದುರಿಸುತ್ತಿದ್ದು, ಕೊಪ್ಪಳ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿ~ ಎಂದು ಯಡಿಯೂರಪ್ಪ ಮನವಿ ಮಾಡಿದರು ಎನ್ನಲಾಗಿದೆ.<br /> `ಬಳ್ಳಾರಿಯ ಶ್ರೀರಾಮುಲು ಸೇರಿದಂತೆ ಯಾರೇ ಚುನಾವಣೆಗೆ ಸ್ಪರ್ಧಿಸಿದರೂ ನಾನು ಸಮರ್ಥವಾಗಿ ಅದನ್ನು ಎದುರಿಸಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ. <br /> <br /> ಹೀಗಾಗಿ ನನ್ನ ನೇತೃತ್ವದಲ್ಲೇ ಚುನಾವಣೆ ನಡೆಯಲಿ~ ಎನ್ನುವ ಮನವಿ ಮಾಡಿದರು ಎನ್ನಲಾಗಿದೆ. ಸದ್ಯದಲ್ಲೇ ಎಲ್ಲ ಆರೋಪಗಳಿಂದ ಮುಕ್ತವಾಗುವ ವಿಶ್ವಾಸ ಇದ್ದು, ಮುಂದಿನ ಸಾರ್ವತ್ರಿಕ ಚುನಾವಣೆ ಕೂಡ ತಮ್ಮ ನೇತೃತ್ವದಲ್ಲೇ ನಡೆಯಲಿ ಎನ್ನುವ ಮನವಿಯನ್ನೂ ಮಾಡಿದರು ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೊಪ್ಪಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸಾಮೂಹಿಕ ನಾಯಕತ್ವದಡಿಯೇ ಹೋಗುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ರಾಜ್ಯದ ಮುಖಂಡರಿಗೆ ಸಲಹೆ ಮಾಡಿದ್ದಾರೆ.<br /> ಗಡ್ಕರಿ ಜತೆ ಚರ್ಚಿಸಲು ನಾಗಪುರಕ್ಕೆ ಮಂಗಳವಾರ ತೆರಳಿದ್ದ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರರಿಗೆ ಈ ಸಲಹೆ ನೀಡಿದ್ದಾರೆ ಎಂದು ಗೊತ್ತಾಗಿದೆ.<br /> <br /> ಸಂಜೆ ನಗರಕ್ಕೆ ವಾಪಸಾದ ನಂತರ ಸುದ್ದಿಗಾರರ ಜತೆ ಮಾತನಾಡಿದ ಸದಾನಂದ ಗೌಡ ಅವರು ಎಲ್ಲರೂ ಒಟ್ಟಿಗೇ ಹೋಗಲು ವರಿಷ್ಠರು ಸಲಹೆ ನೀಡಿದ್ದು, ಆ ಪ್ರಕಾರ ನಡೆದುಕೊಳ್ಳುವುದಾಗಿ ಹೇಳಿದರು. ಯಡಿಯೂರಪ್ಪ ನೇತೃತ್ವದಲ್ಲೇ ಚುನಾವಣೆ ಎದುರಿಸಬೇಕೆಂದು ಅವರ ಬೆಂಬಲಿಗ ಕೆಲ ಸಚಿವರು ಇತ್ತೀಚೆಗೆ ನಾಗಪುರಕ್ಕೆ ತೆರಳಿ ಗಡ್ಕರಿ ಅವರಿಗೆ ಮನವಿ ಮಾಡಿದ್ದರು. <br /> <br /> ಈ ವಿಷಯದಲ್ಲಿ ಮುಖಂಡರಲ್ಲಿಯೂ ಗೊಂದಲ ಉಂಟಾಗಿತ್ತು. ಕೊನೆಗೆ ಮುಖ್ಯಮಂತ್ರಿ ಸದಾನಂದ ಗೌಡ ಅವರು ಗಡ್ಕರಿ ಅವರನ್ನು ಭೇಟಿ ಮಾಡಿಯೇ ಈ ವಿವಾದ ಬಗೆಹರಿಸಿಕೊಳ್ಳಲು ನಿರ್ಧರಿಸಿ, ನಾಗಪುರಕ್ಕೆ ತೆರಳಿದರು. ಜ್ವರದ ಕಾರಣ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ನಾಗಪುರಕ್ಕೆ ಹೋಗಲಿಲ್ಲ. <br /> <br /> ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖಂಡರಾದ ಸಂತೋಷ್, ಸತೀಶ್ ತೆರಳಿದ್ದರು.<br /> `ಒಬ್ಬರ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಬೇಡ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಿ~ ಎನ್ನುವ ಸಲಹೆಯನ್ನು ಗಡ್ಕರಿ ನೀಡಿದರು. ಇದೇ ವೇಳೆ ಯಡಿಯೂರಪ್ಪ ಅವರನ್ನು ಕಡೆಗಣಿಸುವಂತಿಲ್ಲ. <br /> ಅವರನ್ನೂ ಜತೆಗೆ ಕರೆದೊಯ್ಯಬೇಕೆನ್ನುವ ಸಲಹೆಯನ್ನೂ ಅವರು ನೀಡಿದ್ದಾರೆ ಎಂದು ಗೊತ್ತಾಗಿದೆ.<br /> <br /> <strong>ಯಡಿಯೂರಪ್ಪ ಮನವಿ:</strong> `ಸುಳ್ಳು ಆರೋಪಗಳ ಹಿನ್ನೆಲೆಯಲ್ಲಿ ನಾನು ಅಗ್ನಿಪರೀಕ್ಷೆ ಎದುರಿಸುತ್ತಿದ್ದು, ಕೊಪ್ಪಳ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿ~ ಎಂದು ಯಡಿಯೂರಪ್ಪ ಮನವಿ ಮಾಡಿದರು ಎನ್ನಲಾಗಿದೆ.<br /> `ಬಳ್ಳಾರಿಯ ಶ್ರೀರಾಮುಲು ಸೇರಿದಂತೆ ಯಾರೇ ಚುನಾವಣೆಗೆ ಸ್ಪರ್ಧಿಸಿದರೂ ನಾನು ಸಮರ್ಥವಾಗಿ ಅದನ್ನು ಎದುರಿಸಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ. <br /> <br /> ಹೀಗಾಗಿ ನನ್ನ ನೇತೃತ್ವದಲ್ಲೇ ಚುನಾವಣೆ ನಡೆಯಲಿ~ ಎನ್ನುವ ಮನವಿ ಮಾಡಿದರು ಎನ್ನಲಾಗಿದೆ. ಸದ್ಯದಲ್ಲೇ ಎಲ್ಲ ಆರೋಪಗಳಿಂದ ಮುಕ್ತವಾಗುವ ವಿಶ್ವಾಸ ಇದ್ದು, ಮುಂದಿನ ಸಾರ್ವತ್ರಿಕ ಚುನಾವಣೆ ಕೂಡ ತಮ್ಮ ನೇತೃತ್ವದಲ್ಲೇ ನಡೆಯಲಿ ಎನ್ನುವ ಮನವಿಯನ್ನೂ ಮಾಡಿದರು ಎಂದು ಗೊತ್ತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>