<p><strong>ಬೆಂಗಳೂರು:</strong> ಹಿರಿಯ ಲೇಖಕಿ ಡಾ.ನಿರುಪಮಾ (82) ಅವರು ಗುರುವಾರ ಬೆಳಿಗ್ಗೆ ನಿಧನರಾದರು. ಅವರು ಕೆಲ ಕಾಲದಿಂದ ಗಂಟಲಿನ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅಂತ್ಯಕ್ರಿಯೆ ನಗರದ ಹರಿಶ್ಚಂದ್ರ ಘಾಟ್ನಲ್ಲಿ ಗುರುವಾರ ಮಧ್ಯಾಹ್ನ ನಡೆಯಿತು.<br /> <br /> ಕಥೆ, ಕಾದಂಬರಿ, ಚರಿತ್ರೆ, ಕಾನೂನು ಹಾಗೂ ಮಕ್ಕಳ ಸಾಹಿತ್ಯ ಸೇರಿದಂತೆ ಬಹುತೇಕ ಎಲ್ಲ ಸಾಹಿತ್ಯ ಪ್ರಕಾರಗಳಲ್ಲಿ ಕೃಷಿ ಮಾಡಿದ್ದ ಅವರು, 118ಕ್ಕೂ ಹೆಚ್ಚು ಕೃತಿಗಳನ್ನು ರಚಿಸ್ದ್ದಿದರು. ಕನ್ನಡದ ಜತೆಗೆ ತೆಲುಗು, ಬಂಗಾಳಿ, ಇಂಗ್ಲಿಷ್, ಹಿಂದಿ, ಸಂಸ್ಕೃತ ಭಾಷೆಗಳ ಮೇಲೂ ಅವರಿಗೆ ಹಿಡಿತವಿತ್ತು. ಈ ಭಾಷೆಗಳಿಂದ ಕನ್ನಡಕ್ಕೆ ಮತ್ತು ಕನ್ನಡದಿಂದ ವಿವಿಧ ಭಾರತೀಯ ಭಾಷೆಗಳಿಗೆ ಅವರು ಹಲವು ಕೃತಿಗಳನ್ನು ಅನುವಾದಿಸ್ದ್ದಿದರು.<br /> <br /> `ಸಾಹಿತ್ಯದ ಸೊಬಗು', `ರಾಷ್ಟ್ರೀಯತೆ ಮತ್ತು ಕಾವ್ಯ', `ಸ್ವಾತಂತ್ರ್ಯಾನಂತರದ ಭಾರತೀಯ ಲೇಖಕಿಯರು' ಅವರ ಇತ್ತೀಚಿನ ಕೃತಿಗಳಾಗಿದ್ದು, ಅವರ `ಮಹಾಭಾರತ' ಕೃತಿ ಹೆಚ್ಚು ಜನಪ್ರಿಯವಾಗಿದೆ. 1974ರಲ್ಲಿ `ಆರತಿ ಪಬ್ಲಿಕೇಶನ್' ಪ್ರಕಾಶನ ಸಂಸ್ಥೆಯನ್ನು ಸ್ಥಾಪಿಸಿದ್ದ ಅವರು ಹೊಸ ಲೇಖಕಿಯರ ಕೃತಿಗಳನ್ನು ಹೊರತಂದು, ಪ್ರೋತ್ಸಾಹ ನೀಡುತ್ತಿದ್ದರು. 1999ರಲ್ಲಿ ಅಂದಿನ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರಿಂದ `ದಕ್ಷಿಣ ಭಾರತದ ಅತ್ಯುತ್ತಮ ಮಹಿಳಾ ಪ್ರಕಾಶಕಿ' ಪ್ರಶಸ್ತಿ ಪಡೆದಿದ್ದರು.<br /> <br /> ಮಕ್ಕಳ ಸಾಹಿತ್ಯದ ಕುರಿತು ವಿಶೇಷ ಆಸಕ್ತಿ ಹೊಂದಿದ್ದ ಅವರು, `ಧಾರವಾಡ ಮಕ್ಕಳ ಮನೆ' ಪ್ರಶಸ್ತಿ, ಯುನಿಸೆಫ್ನ `ಮಕ್ಕಳ ಸಾಹಿತ್ಯ ಪ್ರಶಸ್ತಿ'ಗಳನ್ನು ತಮ್ಮದಾಗಿಸಿಕೊಂಡಿದ್ದರು. ರಾಜ್ಯೋತ್ಸವ ಪ್ರಶಸ್ತಿ, `ಅತ್ತಿಮಬ್ಬೆ' ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ `ಅನುಪಮಾ' ಪ್ರಶಸ್ತಿ, `ಲಿಪಿ ಪ್ರಾಜ್ಞೆ' ಪ್ರಶಸ್ತಿ, ಮಿಥಿಕ್ ಸೊಸೈಟಿಯ `ಸಂಶೋಧಕಿ' ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿದೆ. ಅವರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬ ಮಗಳು ಇದ್ದಾರೆ.<br /> ನಿರುಪಮಾ ಅವರ ನಿಧನಕ್ಕೆ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಸಂತಾಪ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಿರಿಯ ಲೇಖಕಿ ಡಾ.ನಿರುಪಮಾ (82) ಅವರು ಗುರುವಾರ ಬೆಳಿಗ್ಗೆ ನಿಧನರಾದರು. ಅವರು ಕೆಲ ಕಾಲದಿಂದ ಗಂಟಲಿನ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅಂತ್ಯಕ್ರಿಯೆ ನಗರದ ಹರಿಶ್ಚಂದ್ರ ಘಾಟ್ನಲ್ಲಿ ಗುರುವಾರ ಮಧ್ಯಾಹ್ನ ನಡೆಯಿತು.<br /> <br /> ಕಥೆ, ಕಾದಂಬರಿ, ಚರಿತ್ರೆ, ಕಾನೂನು ಹಾಗೂ ಮಕ್ಕಳ ಸಾಹಿತ್ಯ ಸೇರಿದಂತೆ ಬಹುತೇಕ ಎಲ್ಲ ಸಾಹಿತ್ಯ ಪ್ರಕಾರಗಳಲ್ಲಿ ಕೃಷಿ ಮಾಡಿದ್ದ ಅವರು, 118ಕ್ಕೂ ಹೆಚ್ಚು ಕೃತಿಗಳನ್ನು ರಚಿಸ್ದ್ದಿದರು. ಕನ್ನಡದ ಜತೆಗೆ ತೆಲುಗು, ಬಂಗಾಳಿ, ಇಂಗ್ಲಿಷ್, ಹಿಂದಿ, ಸಂಸ್ಕೃತ ಭಾಷೆಗಳ ಮೇಲೂ ಅವರಿಗೆ ಹಿಡಿತವಿತ್ತು. ಈ ಭಾಷೆಗಳಿಂದ ಕನ್ನಡಕ್ಕೆ ಮತ್ತು ಕನ್ನಡದಿಂದ ವಿವಿಧ ಭಾರತೀಯ ಭಾಷೆಗಳಿಗೆ ಅವರು ಹಲವು ಕೃತಿಗಳನ್ನು ಅನುವಾದಿಸ್ದ್ದಿದರು.<br /> <br /> `ಸಾಹಿತ್ಯದ ಸೊಬಗು', `ರಾಷ್ಟ್ರೀಯತೆ ಮತ್ತು ಕಾವ್ಯ', `ಸ್ವಾತಂತ್ರ್ಯಾನಂತರದ ಭಾರತೀಯ ಲೇಖಕಿಯರು' ಅವರ ಇತ್ತೀಚಿನ ಕೃತಿಗಳಾಗಿದ್ದು, ಅವರ `ಮಹಾಭಾರತ' ಕೃತಿ ಹೆಚ್ಚು ಜನಪ್ರಿಯವಾಗಿದೆ. 1974ರಲ್ಲಿ `ಆರತಿ ಪಬ್ಲಿಕೇಶನ್' ಪ್ರಕಾಶನ ಸಂಸ್ಥೆಯನ್ನು ಸ್ಥಾಪಿಸಿದ್ದ ಅವರು ಹೊಸ ಲೇಖಕಿಯರ ಕೃತಿಗಳನ್ನು ಹೊರತಂದು, ಪ್ರೋತ್ಸಾಹ ನೀಡುತ್ತಿದ್ದರು. 1999ರಲ್ಲಿ ಅಂದಿನ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರಿಂದ `ದಕ್ಷಿಣ ಭಾರತದ ಅತ್ಯುತ್ತಮ ಮಹಿಳಾ ಪ್ರಕಾಶಕಿ' ಪ್ರಶಸ್ತಿ ಪಡೆದಿದ್ದರು.<br /> <br /> ಮಕ್ಕಳ ಸಾಹಿತ್ಯದ ಕುರಿತು ವಿಶೇಷ ಆಸಕ್ತಿ ಹೊಂದಿದ್ದ ಅವರು, `ಧಾರವಾಡ ಮಕ್ಕಳ ಮನೆ' ಪ್ರಶಸ್ತಿ, ಯುನಿಸೆಫ್ನ `ಮಕ್ಕಳ ಸಾಹಿತ್ಯ ಪ್ರಶಸ್ತಿ'ಗಳನ್ನು ತಮ್ಮದಾಗಿಸಿಕೊಂಡಿದ್ದರು. ರಾಜ್ಯೋತ್ಸವ ಪ್ರಶಸ್ತಿ, `ಅತ್ತಿಮಬ್ಬೆ' ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ `ಅನುಪಮಾ' ಪ್ರಶಸ್ತಿ, `ಲಿಪಿ ಪ್ರಾಜ್ಞೆ' ಪ್ರಶಸ್ತಿ, ಮಿಥಿಕ್ ಸೊಸೈಟಿಯ `ಸಂಶೋಧಕಿ' ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿದೆ. ಅವರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬ ಮಗಳು ಇದ್ದಾರೆ.<br /> ನಿರುಪಮಾ ಅವರ ನಿಧನಕ್ಕೆ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಸಂತಾಪ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>