<p><strong>ಔರಾದ್: </strong>ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ಬದಲಾವಣೆ ವಿಷಯ ಹೈಕಮಾಂಡ್ಗೆ ಬಿಟ್ಟದ್ದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ ಶೆಟ್ಟರ ಹೇಳಿದರು.</p>.<p>ಬುಧವಾರ ಸಂಜೆ ಇಲ್ಲಿ ಬಸವಜಯಂತಿ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಪ್ರಶ್ನೆಗೆ ಈ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ನಾಳೆ (ಗುರುವಾರ) ಬೆಂಗಳೂರಿಗೆ ಧರ್ಮೇಂದ್ರ ಪ್ರಧಾನ್ ಬರಲಿದ್ದು, ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದರು. ಈ ಬಗ್ಗೆ ಪಕ್ಷದ ರಾಜ್ಯ ಅಧ್ಯಕ್ಷ ಈಶ್ವರಪ್ಪ ನೀಡಿದ ಹೇಳಿಕೆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.</p>.<p><strong>ಸೋಮಣ್ಣ ಹೇಳಿಕೆ:</strong> ಸದಾನಂದಗೌಡ ಅವರನ್ನು ಬದಲಿಸಿದರೆ ಅವರ ಜೊತೆ 13 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ವಸತಿ ಸಚಿವ ವಿ. ಸೋಮಣ್ಣ, ಜಾರಕಿಹೊಳಿ ಅಂಥವರು ಪಕ್ಷ ಒಡೆಯುವ ಕೆಲಸ ಮಾಡುತ್ತಾರೆ. ಅವರು ಸಚಿವರಾಗಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಸಿಎಂ ಸದಾನಂದಗೌಡ ಅವರು ಶಾಸಕಾಂಗ ಸಭೆ ಕರೆಯದೇ ಇರುವುದು ಅವರ ವಿರುದ್ಧ ಅಸಮಾಧಾನಕ್ಕೆ ಕಾರಣ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್: </strong>ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ಬದಲಾವಣೆ ವಿಷಯ ಹೈಕಮಾಂಡ್ಗೆ ಬಿಟ್ಟದ್ದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ ಶೆಟ್ಟರ ಹೇಳಿದರು.</p>.<p>ಬುಧವಾರ ಸಂಜೆ ಇಲ್ಲಿ ಬಸವಜಯಂತಿ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಪ್ರಶ್ನೆಗೆ ಈ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ನಾಳೆ (ಗುರುವಾರ) ಬೆಂಗಳೂರಿಗೆ ಧರ್ಮೇಂದ್ರ ಪ್ರಧಾನ್ ಬರಲಿದ್ದು, ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದರು. ಈ ಬಗ್ಗೆ ಪಕ್ಷದ ರಾಜ್ಯ ಅಧ್ಯಕ್ಷ ಈಶ್ವರಪ್ಪ ನೀಡಿದ ಹೇಳಿಕೆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.</p>.<p><strong>ಸೋಮಣ್ಣ ಹೇಳಿಕೆ:</strong> ಸದಾನಂದಗೌಡ ಅವರನ್ನು ಬದಲಿಸಿದರೆ ಅವರ ಜೊತೆ 13 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ವಸತಿ ಸಚಿವ ವಿ. ಸೋಮಣ್ಣ, ಜಾರಕಿಹೊಳಿ ಅಂಥವರು ಪಕ್ಷ ಒಡೆಯುವ ಕೆಲಸ ಮಾಡುತ್ತಾರೆ. ಅವರು ಸಚಿವರಾಗಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಸಿಎಂ ಸದಾನಂದಗೌಡ ಅವರು ಶಾಸಕಾಂಗ ಸಭೆ ಕರೆಯದೇ ಇರುವುದು ಅವರ ವಿರುದ್ಧ ಅಸಮಾಧಾನಕ್ಕೆ ಕಾರಣ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>