ಸಾಗರ: ಇತ್ತೀಚಿನ ದಿನಗಳಲ್ಲಿ ಬಹಿರಂಗ ಸಭೆಗಳಲ್ಲಿ ನಿರಂತರವಾಗಿ ರಾಜ್ಯ ಸರ್ಕಾರದ ಆಡಳಿತದ ವಿರುದ್ಧ ಚಾಟಿ ಬೀಸುತ್ತಿದ್ದ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ತಾಳಗುಪ್ಪದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸರ್ಕಾರಕ್ಕೆ ಶಹಭಾಸ್ಗಿರಿ ನೀಡಿದರು.
‘ಸರ್ಕಾರಿ ವೈದ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಷ್ಕರ ಹೂಡಿದಾಗ ಎದುರಾದ ಸಂಕಟದ ಸ್ಥಿತಿಯನ್ನು ಬಗೆಹರಿಸಲು ನೀವೇ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ಇದಕ್ಕೆ ಸ್ಪಂದಿಸಿದ ಅವರು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿದ್ದಾರೆ. ಈ ವಿಷಯದಲ್ಲಿ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಹೇಳಲೇಬೇಕು’ ಎಂದರು.