ನದಿ ಪಾತ್ರದ ನಡುಗಡ್ಡೆ ಗ್ರಾಮಗಳಾದ ಜಲದುರ್ಗ, ಹಂಚಿನಾಳ, ಯಳಗುಂದಿ, ಯರಗೋಡಿ, ಕಡದರಗಡ್ಡಿಗಳು ಸಂಪರ್ಕ ಕಳೆದುಕೊಂಡಿವೆ. ನಡುಗಡ್ಡೆಯಲ್ಲಿರುವ ಮ್ಯಾದರಗಡ್ಡಿ, ಓಂಕಾರದೊಡ್ಡಿ, ಕರಕಲಗಡ್ಡಿ ಸಂತ್ರಸ್ತರು ಪಡಿತರಕ್ಕೂ ಪರದಾಡುತ್ತಿದ್ದಾರೆ. ವಿಷಯ ತಿಳಿದು ಉಪ ವಿಭಾಗಾಧಿಕಾರಿ ದಿವ್ಯಾಪ್ರಭು ನೇತೃತ್ವದ ಅಧಿಕಾರಿಗಳ ತಂಡ ಗುರುವಾರ ಅಲ್ಲಿಗೆ ಭೇಟಿ ನೀಡಿತು. ಮ್ಯಾದರಗಡ್ಡಿ, ಓಂಕಾರದೊಡ್ಡಿ, ಕರಕಲದೊಡ್ಡಿ ಜನ ಅಲ್ಲಿಂದ ಹೊರ ಬರಲು ನಿರಾಕರಿಸಿದ್ದಾರೆ. ಕಳೆದ 12 ವರ್ಷಗಳಿಂದ ತಾಲ್ಲೂಕು ಆಡಳಿತ ಶಾಶ್ವತ ವ್ಯವಸ್ಥೆ ಮಾಡದಿರುವ ಬಗ್ಗೆ ದುರುಗಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.