ಸಿರಗುಪ್ಪ: ‘ವಿ.ಸೋಮಣ್ಣ ಕಾಂಗ್ರೆಸ್ ಸೇರುವ ವಿಷಯ ಕೇವಲ ಊಹಾಪೋಹ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಳ್ಳಾರಿ ಜಿಲ್ಲೆ ಸಿರಗುಪ್ಪದಲ್ಲಿ ಕುಡಿಯುವ ನೀರು ಯೋಜನೆ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಲೋಕಾಯುಕ್ತರ ಹೆಸರನ್ನು ಮತ್ತಷ್ಟು ಸ್ಪಷ್ಟನೆಗಳೊಂದಿಗೆ ಮತ್ತೆ ರಾಜ್ಯಪಾಲರಿಗೆ ಕಳಿಸುತ್ತೇವೆ. ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ವೀರಶೈವರಿಗೆ ತಪ್ಪಿಸಲು ಹುನ್ನಾರ ನಡೆದಿದೆ ಎಂಬ ವಿಚಾರದಲ್ಲಿ ಹುರುಳಿಲ್ಲ’ ಎಂದು ಸಿದ್ದರಾಮಯ್ಯ ತಿಳಿಸಿದರು.