<p>ಬಳ್ಳಾರಿ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಂಪಿಯಲ್ಲಿ ಮುಂದಿನ ವರ್ಷದ ಜನವರಿ 15ರಿಂದ 20ರ ಅವಧಿಯಲ್ಲಿ ಮೂರು ದಿನಗಳ ಕಾಲ ಉತ್ಸವ ಆಚರಿಸುವ ಸಾಧ್ಯತೆಗಳಿದ್ದು, ಕೇಂದ್ರ ಪ್ರವಾಸೋದ್ಯಮ ಸಚಿವ ಚಿರಂಜೀವಿ ಅವರಿಗೆ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆನಂದ್ಸಿಂಗ್ ತಿಳಿಸಿದರು.<br /> <br /> ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 5ರ ನಂತರ ಕೇಂದ್ರ ಸಚಿವ ಚಿರಂಜೀವಿ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ, ಅಧಿಕೃತವಾಗಿ ಆಹ್ವಾನ ನೀಡಲಾಗುವುದು. <br /> <br /> ಆಗಲೇ ಹಂಪಿ ಉತ್ಸವ ಕುರಿತ ಅಂತಿಮ ದಿನಾಂಕ ಪ್ರಕಟಿಸಲಾಗುವುದು. ಮುಂದಿನ ವರ್ಷದಿಂದ ನಿಗದಿಯಂತೆ ನವೆಂಬರ್ ತಿಂಗಳಲ್ಲೇ ಉತ್ಸವ ಆಚರಿಸಲಾಗುವುದು ಎಂದರು. ಡಿಸೆಂಬರ್ 10ರೊಳಗೆ ಹಂಪಿಯ ಸ್ಮಾರಕಗಳೆದುರು `ಹಂಪಿ ಬೈ ನೈಟ್~ ಧ್ವನಿ-ಬೆಳಕು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. <br /> <br /> ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ನಂದಿ ಬೆಟ್ಟಕ್ಕೆ ರೋಪ್ ವೇ ಅಳವಡಿಸಲು ಹೈದರಾಬಾದ್ ಮೂಲದ ಕಂಪೆನಿಯೊಂದು ಮುಂದೆ ಬಂದಿದ್ದು, ಈ ಕುರಿತೂ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಳ್ಳಾರಿ: ಜಿಲ್ಲೆಯ ಇತಿಹಾಸ ಪ್ರಸಿದ್ಧ ಹಂಪಿಯಲ್ಲಿ ಮುಂದಿನ ವರ್ಷದ ಜನವರಿ 15ರಿಂದ 20ರ ಅವಧಿಯಲ್ಲಿ ಮೂರು ದಿನಗಳ ಕಾಲ ಉತ್ಸವ ಆಚರಿಸುವ ಸಾಧ್ಯತೆಗಳಿದ್ದು, ಕೇಂದ್ರ ಪ್ರವಾಸೋದ್ಯಮ ಸಚಿವ ಚಿರಂಜೀವಿ ಅವರಿಗೆ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆನಂದ್ಸಿಂಗ್ ತಿಳಿಸಿದರು.<br /> <br /> ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 5ರ ನಂತರ ಕೇಂದ್ರ ಸಚಿವ ಚಿರಂಜೀವಿ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ, ಅಧಿಕೃತವಾಗಿ ಆಹ್ವಾನ ನೀಡಲಾಗುವುದು. <br /> <br /> ಆಗಲೇ ಹಂಪಿ ಉತ್ಸವ ಕುರಿತ ಅಂತಿಮ ದಿನಾಂಕ ಪ್ರಕಟಿಸಲಾಗುವುದು. ಮುಂದಿನ ವರ್ಷದಿಂದ ನಿಗದಿಯಂತೆ ನವೆಂಬರ್ ತಿಂಗಳಲ್ಲೇ ಉತ್ಸವ ಆಚರಿಸಲಾಗುವುದು ಎಂದರು. ಡಿಸೆಂಬರ್ 10ರೊಳಗೆ ಹಂಪಿಯ ಸ್ಮಾರಕಗಳೆದುರು `ಹಂಪಿ ಬೈ ನೈಟ್~ ಧ್ವನಿ-ಬೆಳಕು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. <br /> <br /> ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ನಂದಿ ಬೆಟ್ಟಕ್ಕೆ ರೋಪ್ ವೇ ಅಳವಡಿಸಲು ಹೈದರಾಬಾದ್ ಮೂಲದ ಕಂಪೆನಿಯೊಂದು ಮುಂದೆ ಬಂದಿದ್ದು, ಈ ಕುರಿತೂ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>