ಬೆಂಗಳೂರು: ಕೇರಳದ ಕೊಟ್ಟಾಯಂನಲ್ಲಿ ಕಂಡು ಬಂದಿರುವ ಹಕ್ಕಿ ಜ್ವರ ರಾಜ್ಯದಲ್ಲಿ ಹರಡದಂತೆ ತಡೆಯಲು ಮುಂಜಾಗ್ರತೆ ವಹಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಟಿ.ಬಿ. ಜಯಚಂದ್ರ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದುವರೆಗೆ ರಾಜ್ಯದಲ್ಲೆಲ್ಲೂ ಈ ರೋಗ ಕಂಡು ಬಂದಿಲ್ಲ. ಆದರೂ, ಎಲ್ಲ ಇಲಾಖೆಗಳಿಗೆ ಮಾಹಿತಿ ನೀಡಲಾಗಿದೆ’ ಎಂದರು. ಗಡಿ ಭಾಗದ ಮಡಿಕೇರಿ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದೂ ತಿಳಿಸಿದರು.