‘ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಈ ಹಿಂದೆಯೂ ಬಹಿಷ್ಕಾರ ಹಾಕಿದ್ದರು. ಆಗ ಹಿರಿಯ ಅಧಿಕಾರಿಗಳು ಶಾಂತಿ ಸಭೆ ನಡೆಸಿದ್ದರು. ಇನ್ನು ಮುಂದೆ ಯಾವುದೇ ತಾರತಮ್ಯ ಮಾಡುವುದಿಲ್ಲ. ಬಹಿಷ್ಕಾರ ಹಾಕುವುದಿಲ್ಲ ಎಂದು ಮೇಲ್ವರ್ಗದವರು ತಿಳಿಸಿದ್ದರು. ಆದರೆ, ಈಗ ಅದನ್ನೇ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಯಾವುದೇ ಹೋಟೆಲ್, ಸಲೂನ್ಗಳಿಗೆ ಪ್ರವೇಶ ನೀಡುತ್ತಿಲ್ಲ. ಇದನ್ನು ಪ್ರಶ್ನಿಸಿದರೆ ಬೆದರಿಕೆ ಹಾಕುತ್ತಾರೆ’ ಎಂದು ಗ್ರಾಮದ ದಲಿತರು ದೂರಿದರು.