ಎಲ್ಲ ತಾಂತ್ರಿಕ ಅಡೆತಡೆಗಳನ್ನು ಈಗ ನಿವಾರಿಸಿದ್ದು ಸೋಮವಾರ ಅಥವಾ ಮಂಗಳವಾರ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ. ಇದಕ್ಕೆ ಯಾವುದೇ ಪಕ್ಷ ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಇಲ್ಲವಾದ್ದರಿಂದ ಪ್ರಸಕ್ತ ಅಧಿವೇಶನದಲ್ಲೇ ಉಭಯ ಸದನಗಳಲ್ಲೂ ಒಪ್ಪಿಗೆಗೆ ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಒಂದೊಮ್ಮೆ ಈಗ ಮಸೂದೆ ಮಂಡನೆ ಸಾಧ್ಯವಾಗದಿದ್ದರೆ, ಬಜೆಟ್ ಅಧಿವೇಶನದಲ್ಲಿ ಖಂಡಿತವಾಗಿ ಮಂಡನೆಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಮಸೂದೆಗೆ ತಿದ್ದುಪಡಿ ಆಗುವವರೆಗೆ ನೇಮಕಾತಿ ಮತ್ತಿತರ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಲು ಸಾಧ್ಯವಿಲ್ಲ. ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 104 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಕೋರುವುದರಲ್ಲಿ ಅರ್ಥವಿಲ್ಲ ಎಂದರು.