<p><strong>ಹಾವೇರಿ:</strong> ಜಿಲ್ಲೆಯ ಹಿರೇಕೆರೂರು ಮತ್ತು ಬ್ಯಾಡಗಿ ತಾಲ್ಲೂಕುಗಳಲ್ಲಿ ತಲಾ ಒಬ್ಬರು ಸೇರಿ ಒಟ್ಟು ಇಬ್ಬರು ಮಕ್ಕಳು ಡೆಂಗೆ ಜ್ವರದಿಂದ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಭವಿಸಿದೆ.<br /> <br /> ಹಿರೇಕೆರೂರಿನ ಗೊಡಚಿಕೊಂಡ ಗ್ರಾಮದದಲ್ಲಿ ಡೆಂಗೆ ಜ್ವರದಿಂದ ಬಳಲುತ್ತಿದ್ದ ಬಾಲಕಿ ತನುಜಾ ಗುತ್ತೆಪ್ಪ ಕಟ್ಟಿಮನಿ (4) ಹಾಗೂ ಬ್ಯಾಡಗಿ ತಾಲ್ಲೂಕಿನ ಚಿಕ್ಕಬಾಸೂರ ಗ್ರಾಮದ ಬಾಲಕ ವಿಕಾಸ ನಾಗನಗೌಡ ಕಾಡನಗೌಡ್ರ (8) ಮೃತಪಟ್ಟವರು.<br /> <br /> ಒಂದು ವಾರದಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದ ತನಿಜಾಳನ್ನು ಹಿರೇಕೆರೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.<br /> <br /> ಚಿಕಿತ್ಸೆ ಫಲಕಾರಿಯಾಗದೆ ತನುಜಾ ಶುಕ್ರವಾರ ತಡರಾತ್ರಿ ಆಸ್ಪತ್ರೆಯಲ್ಲಿ ಅಸುನೀಗಿದಳು. ಗುತ್ತೆಪ್ಪ ಕಟ್ಟಿಮನಿ ಇವರ ಇನ್ನಿಬ್ಬರು ಮಕ್ಕಳಾದ ಒಂದೂವರೆ ವರ್ಷದ ಚೇತನಾ ಹಾಗೂ ಆರು ವರ್ಷದ ನಯನಾ ಕೂಡ ಶಂಕಿತ ಡೆಂಗೆ ಜ್ವರದಿಂದ ಬಳಲುತ್ತ್ದ್ದಿದು, ಚಿಕಿತ್ಸೆ ಪಡೆಯುತ್ತಿದ್ದಾರೆ.<br /> <br /> ವಿಕಾಸ ನಾಗನಗೌಡ ರಜೆ ಕಳೆಯಲು ಶಿವಮೊಗ್ಗ ಜಿಲ್ಲೆಯ ಲಕ್ಕವಳ್ಳಿಯಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದ. ವಾಪಸ್ ಬಂದಾಗ ಆತನಿಗೆ ಜ್ವರ ಕಾಣಿಸಿಕೊಂಡಿತ್ತು. ಹಾವೇರಿಯಲ್ಲಿ ಚಿಕಿತ್ಸೆ ಕೊಡಿಸಿದರೂ ಜ್ವರ ಕಡಿಮೆಯಾಗಲಿಲ್ಲ.<br /> <br /> ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಇದು ಸೇರಿ ತಾಲ್ಲೂಕಿನಲ್ಲಿ ಡೆಂಗೆ ಜ್ವರಕ್ಕೆ ಬಲಿಯಾದವರ ಸಂಖೆ ಎರಡಕ್ಕೆ ಏರಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ.ಆರ್. ಲಮಾಣಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಜಿಲ್ಲೆಯ ಹಿರೇಕೆರೂರು ಮತ್ತು ಬ್ಯಾಡಗಿ ತಾಲ್ಲೂಕುಗಳಲ್ಲಿ ತಲಾ ಒಬ್ಬರು ಸೇರಿ ಒಟ್ಟು ಇಬ್ಬರು ಮಕ್ಕಳು ಡೆಂಗೆ ಜ್ವರದಿಂದ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಭವಿಸಿದೆ.<br /> <br /> ಹಿರೇಕೆರೂರಿನ ಗೊಡಚಿಕೊಂಡ ಗ್ರಾಮದದಲ್ಲಿ ಡೆಂಗೆ ಜ್ವರದಿಂದ ಬಳಲುತ್ತಿದ್ದ ಬಾಲಕಿ ತನುಜಾ ಗುತ್ತೆಪ್ಪ ಕಟ್ಟಿಮನಿ (4) ಹಾಗೂ ಬ್ಯಾಡಗಿ ತಾಲ್ಲೂಕಿನ ಚಿಕ್ಕಬಾಸೂರ ಗ್ರಾಮದ ಬಾಲಕ ವಿಕಾಸ ನಾಗನಗೌಡ ಕಾಡನಗೌಡ್ರ (8) ಮೃತಪಟ್ಟವರು.<br /> <br /> ಒಂದು ವಾರದಿಂದ ವಿಪರೀತ ಜ್ವರದಿಂದ ಬಳಲುತ್ತಿದ್ದ ತನಿಜಾಳನ್ನು ಹಿರೇಕೆರೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.<br /> <br /> ಚಿಕಿತ್ಸೆ ಫಲಕಾರಿಯಾಗದೆ ತನುಜಾ ಶುಕ್ರವಾರ ತಡರಾತ್ರಿ ಆಸ್ಪತ್ರೆಯಲ್ಲಿ ಅಸುನೀಗಿದಳು. ಗುತ್ತೆಪ್ಪ ಕಟ್ಟಿಮನಿ ಇವರ ಇನ್ನಿಬ್ಬರು ಮಕ್ಕಳಾದ ಒಂದೂವರೆ ವರ್ಷದ ಚೇತನಾ ಹಾಗೂ ಆರು ವರ್ಷದ ನಯನಾ ಕೂಡ ಶಂಕಿತ ಡೆಂಗೆ ಜ್ವರದಿಂದ ಬಳಲುತ್ತ್ದ್ದಿದು, ಚಿಕಿತ್ಸೆ ಪಡೆಯುತ್ತಿದ್ದಾರೆ.<br /> <br /> ವಿಕಾಸ ನಾಗನಗೌಡ ರಜೆ ಕಳೆಯಲು ಶಿವಮೊಗ್ಗ ಜಿಲ್ಲೆಯ ಲಕ್ಕವಳ್ಳಿಯಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದ. ವಾಪಸ್ ಬಂದಾಗ ಆತನಿಗೆ ಜ್ವರ ಕಾಣಿಸಿಕೊಂಡಿತ್ತು. ಹಾವೇರಿಯಲ್ಲಿ ಚಿಕಿತ್ಸೆ ಕೊಡಿಸಿದರೂ ಜ್ವರ ಕಡಿಮೆಯಾಗಲಿಲ್ಲ.<br /> <br /> ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ. ಇದು ಸೇರಿ ತಾಲ್ಲೂಕಿನಲ್ಲಿ ಡೆಂಗೆ ಜ್ವರಕ್ಕೆ ಬಲಿಯಾದವರ ಸಂಖೆ ಎರಡಕ್ಕೆ ಏರಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಬಿ.ಆರ್. ಲಮಾಣಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>