<p><strong>ಬೆಂಗಳೂರು:</strong> ಉತ್ತರ ಕರ್ನಾಟಕದ ಜಿಲ್ಲೆಗಳಿಂದ ರಾಜ್ಯದ ಪ್ರಮುಖ ಬಂದರುಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶ ಹೊಂದಿರುವ ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗಕ್ಕೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ ನೀಡಲು ನಿರಾಕರಿಸಿದೆ.</p>.<p>ಕೇಂದ್ರ ಅರಣ್ಯ ಹಾಗೂ ಪರಿಸರ ಸಚಿವರ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ನಡೆದ ಸಮಿತಿಯ 48ನೇ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಭಾರತೀಯ ವನ್ಯಜೀವಿ ಸಂಸ್ಥೆಯ (ಡಬ್ಲ್ಯೂಐಐ) ಪ್ರತಿನಿಧಿ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿ ಹಾಗೂ ವನ್ಯಜೀವಿ ವಿಭಾಗದ ಪ್ರತಿನಿಧಿಯನ್ನೊಳಗೊಂಡ ಸಮಿತಿ ಸ್ಥಳ ಪರಿಶೀಲನೆ ನಡೆಸಿ 30 ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸಮಿತಿ ನಿರ್ದೇಶನ ನೀಡಿದೆ.</p>.<p>ಸಭೆಯ ನಡಾವಳಿ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.</p>.<p>‘ಸೂಕ್ಷ್ಮ ಪರಿಸರ ವ್ಯವಸ್ಥೆಯ ಪಶ್ಚಿಮ ಘಟ್ಟಗಳ ನಡುವೆ ಹಾದು ಹೋಗಲಿರುವ ಈ ರೈಲು ಮಾರ್ಗದಿಂದ ಇಡೀ ಪರಿಸರ ವ್ಯವಸ್ಥೆಗೆ ಭಾರಿ ಧಕ್ಕೆ ಉಂಟಾಗಲಿದೆ. ವನ್ಯಜೀವಿಗಳಿಗೂ ಅಪಾಯವಿದೆ’ ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಗಿದೆ.</p>.<p>‘ಮೂರು ಆನೆ ಕಾರಿಡಾರ್ಗಳ 595.64 ಹೆಕ್ಟೇರ್ ಅರಣ್ಯ ಭೂಮಿ ಈ ಯೋಜನೆಗೆ ಬಳಕೆಯಾಗಲಿದೆ. ಈ ಯೋಜನೆಗೆ ಮುಖ್ಯ ವನ್ಯಜೀವಿ ವಾರ್ಡನ್ ನೇತೃತ್ವದ ಸಮಿತಿ ಷರತ್ತುಬದ್ಧ ಅನುಮತಿ ನೀಡಿತ್ತು. ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳಿಂದ ವರದಿ ತರಿಸಿಕೊಂಡು ಅರಣ್ಯ ನಾಶ ತಡೆಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿತ್ತು. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ಟಿಸಿಎ) ಈ ಯೋಜನೆಗೆ ಒಪ್ಪಿಗೆ ನೀಡಿಲ್ಲ’ ಎಂದು ಕೇಂದ್ರ ಅರಣ್ಯ ಸಚಿವಾಲಯದ ಐಜಿಎಫ್ (ವನ್ಯಜೀವಿ) ಗಮನ ಸೆಳೆದರು.</p>.<p>‘ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ದಟ್ಟವಾಗಿದೆ. ಪಶ್ಚಿಮಘಟ್ಟ ಹಾದುಹೋಗಿರುವ ಇದು ಪಾರಂಪರಿಕ ತಾಣವೂ ಹೌದು. ಹುಲಿ ಸಂತತಿ ಅಭಿವೃದ್ಧಿಗೆ ಸಾಕಷ್ಟು ಅವಕಾಶ ಇದೆ. ಒಂದು ವೇಳೆ ಈ ಯೋಜನೆ ಅನುಷ್ಠಾನಗೊಳಿಸಿದರೆ, ಹುಲಿ ಸಂರಕ್ಷಣೆ ಕಾರ್ಯಕ್ಕೆ ಹಿನ್ನಡೆಯಾಗಲಿದೆ’ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಈ ರೈಲು ಮಾರ್ಗ ನಿರ್ಮಾಣದ ವೇಳೆ 2 ಲಕ್ಷಕ್ಕೂ ಅಧಿಕ ಮರಗಳ ಹನನ ಆಗಲಿದೆ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಾದೇಶಿಕ ಉನ್ನತಾಧಿಕಾರ ಸಮಿತಿ (ಆರ್ಇಸಿ) ಕಳೆದ ವರ್ಷ ಏಪ್ರಿಲ್ನಲ್ಲಿ ಅಭಿಪ್ರಾಯಪಟ್ಟಿತ್ತು. ಬಳಿಕ ಷರತ್ತುಬದ್ಧ ಅನುಮತಿ ನೀಡಿತ್ತು.</p>.<p>ಹಳಿಗೆ ಏರದ ಯೋಜನೆ: 1998ರಲ್ಲಿ ಈ ರೈಲು ಮಾರ್ಗದ ಯೋಜನೆ ಸಿದ್ಧವಾಗಿತ್ತು. ಬಳ್ಳಾರಿ ಮತ್ತು ಹೊಸಪೇಟೆಯ ಕಬ್ಬಿಣದ ಅದಿರು ಗಣಿಗಳಿಂದ ಅದಿರು ಸಾಗಿಸುವುದಕ್ಕಾಗಿ ಈ ಯೋಜನೆ ರೂಪಿಸಲಾಗಿತ್ತು.</p>.<p>ಈ ಯೋಜನೆಯನ್ನು ವಿರೋಧಿಸಿ ರಾಜ್ಯದ ಸರ್ಕಾರೇತರ ಸಂಘಟನೆಗಳಾದ ಪರಿಸರ ಸಂರಕ್ಷಣಾ ಕೇಂದ್ರ ಮತ್ತು ವೈಲ್ಡರ್ನೆಸ್ ಕ್ಲಬ್ಗಳು 2006ರಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದವು. ಯೋಜನೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.</p>.<p>ಸುಪ್ರೀಂ ಕೋರ್ಟ್ ನೇಮಿಸಿದ್ದ ಕೇಂದ್ರ ಉನ್ನತಾಧಿಕಾರ ಸಮಿತಿಯು (ಸಿಇಸಿ) ಈ ಯೋಜನೆಗೆ ಅನುಮೋದನೆ ನೀಡಲು 2015ರಲ್ಲಿ ನಿರಾಕರಿಸಿತ್ತು. ‘ಈ ಮಾರ್ಗ ನಿರ್ಮಾಣದಿಂದ ಪಶ್ಚಿಮ ಘಟ್ಟಗಳ ಅರಣ್ಯ, ವನ್ಯಜೀವಿಗಳು ಮತ್ತು ಜೀವ ವೈವಿಧ್ಯದ ಮೇಲೆ ಭಾರಿ ಪರಿಣಾಮ ಉಂಟಾಗಲಿದೆ. ಸರಿಪಡಿಸಲಾಗದಷ್ಟು ಹಾನಿ ಆಗಲಿದೆ’ ಎಂದು ಸಿಇಸಿ ಹೇಳಿತ್ತು.</p>.<p>ಎನ್ಜಿಟಿ ಹಸಿರು ನಿಶಾನೆ: ಈ ಯೋಜನೆಗೆ ಸಂಬಂಧಿಸಿದ ಎಲ್ಲ ಅರ್ಜಿಗಳು ಮತ್ತು ಸಿಇಸಿಯ ಅಭಿಪ್ರಾಯಗಳನ್ನು 2015ರ ಅಕ್ಟೊಬರ್ 5ರಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್ಜಿಟಿ) ಸುಪ್ರೀಂ ಕೋರ್ಟ್ ವರ್ಗಾಯಿಸಿತ್ತು. ಮಾರ್ಗ ನಿರ್ಮಾಣಕ್ಕೆ ಎನ್ಜಿಟಿ 2016ರ ಫೆಬ್ರುವರಿ 10ರಂದು ಹಸಿರು ನಿಶಾನೆ ತೋರಿತ್ತು.</p>.<p>‘ಅರಣ್ಯ (ಸಂರಕ್ಷಣೆ) ಕಾಯ್ದೆ 1980ರ ಸೆಕ್ಷನ್ 2ರ ಪ್ರಕಾರ, ರಾಜ್ಯ ಸರ್ಕಾರ ಭೂಪರಿವರ್ತನೆ ಆದೇಶ ಹೊರಡಿಸಬಹುದು. ಆದರೆ, ಅದಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ಪಡೆದುಕೊಳ್ಳಬೇಕು’ ಎಂದು ಅದು ತಿಳಿಸಿತ್ತು.</p>.<p>ಈ ಯೋಜನೆ ಪೂರ್ಣಗೊಳಿಸಲು ಅವಕಾಶ ಕಲ್ಪಿಸುವಂತೆ 2016ರ ಅಕ್ಟೋಬರ್ 24ರಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿತ್ತು. ಬಳಿಕ ಸಚಿವಾಲಯವು ಸಮಿತಿ ರಚಿಸಿತ್ತು.</p>.<p><strong>ಯೋಜನೆಗೆ ಬಳಕೆಯಾಗಲಿರುವ ಅರಣ್ಯ ಭೂಮಿ</strong></p>.<p>ವಲಯ; ಹೆಕ್ಟೇರ್; ಎಷ್ಟು ಮರ ಕಡಿತ<br /> ಕಾರವಾರ; 249.58; 71,266<br /> ಯಲ್ಲಾಪುರ; 304.05; 1,19,439<br /> ಧಾರವಾಡ; 42; 11,745</p>.<p><strong>ಈ ಪ್ರದೇಶದ ಪ್ರಮುಖ ವನ್ಯಜೀವಿಗಳು</strong></p>.<p>ಹುಲಿ, ಆನೆ, ಜಿಂಕೆ, ಕಡವೆ, ಕಾಡುಕೋಣ, ಮುಳ್ಳು ಹಂದಿ, ಚಿರತೆ, ಮಳೆ ಹಕ್ಕಿ (ಹಾರ್ನ್ಬಿಲ್), ನವಿಲು, ಕಾಳಿಂಗ ಸರ್ಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉತ್ತರ ಕರ್ನಾಟಕದ ಜಿಲ್ಲೆಗಳಿಂದ ರಾಜ್ಯದ ಪ್ರಮುಖ ಬಂದರುಗಳಿಗೆ ಸಂಪರ್ಕ ಕಲ್ಪಿಸುವ ಉದ್ದೇಶ ಹೊಂದಿರುವ ಹುಬ್ಬಳ್ಳಿ–ಅಂಕೋಲಾ ರೈಲು ಮಾರ್ಗಕ್ಕೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ ನೀಡಲು ನಿರಾಕರಿಸಿದೆ.</p>.<p>ಕೇಂದ್ರ ಅರಣ್ಯ ಹಾಗೂ ಪರಿಸರ ಸಚಿವರ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ನಡೆದ ಸಮಿತಿಯ 48ನೇ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಭಾರತೀಯ ವನ್ಯಜೀವಿ ಸಂಸ್ಥೆಯ (ಡಬ್ಲ್ಯೂಐಐ) ಪ್ರತಿನಿಧಿ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿ ಹಾಗೂ ವನ್ಯಜೀವಿ ವಿಭಾಗದ ಪ್ರತಿನಿಧಿಯನ್ನೊಳಗೊಂಡ ಸಮಿತಿ ಸ್ಥಳ ಪರಿಶೀಲನೆ ನಡೆಸಿ 30 ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸಮಿತಿ ನಿರ್ದೇಶನ ನೀಡಿದೆ.</p>.<p>ಸಭೆಯ ನಡಾವಳಿ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.</p>.<p>‘ಸೂಕ್ಷ್ಮ ಪರಿಸರ ವ್ಯವಸ್ಥೆಯ ಪಶ್ಚಿಮ ಘಟ್ಟಗಳ ನಡುವೆ ಹಾದು ಹೋಗಲಿರುವ ಈ ರೈಲು ಮಾರ್ಗದಿಂದ ಇಡೀ ಪರಿಸರ ವ್ಯವಸ್ಥೆಗೆ ಭಾರಿ ಧಕ್ಕೆ ಉಂಟಾಗಲಿದೆ. ವನ್ಯಜೀವಿಗಳಿಗೂ ಅಪಾಯವಿದೆ’ ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಗಿದೆ.</p>.<p>‘ಮೂರು ಆನೆ ಕಾರಿಡಾರ್ಗಳ 595.64 ಹೆಕ್ಟೇರ್ ಅರಣ್ಯ ಭೂಮಿ ಈ ಯೋಜನೆಗೆ ಬಳಕೆಯಾಗಲಿದೆ. ಈ ಯೋಜನೆಗೆ ಮುಖ್ಯ ವನ್ಯಜೀವಿ ವಾರ್ಡನ್ ನೇತೃತ್ವದ ಸಮಿತಿ ಷರತ್ತುಬದ್ಧ ಅನುಮತಿ ನೀಡಿತ್ತು. ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳಿಂದ ವರದಿ ತರಿಸಿಕೊಂಡು ಅರಣ್ಯ ನಾಶ ತಡೆಗೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿತ್ತು. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್ಟಿಸಿಎ) ಈ ಯೋಜನೆಗೆ ಒಪ್ಪಿಗೆ ನೀಡಿಲ್ಲ’ ಎಂದು ಕೇಂದ್ರ ಅರಣ್ಯ ಸಚಿವಾಲಯದ ಐಜಿಎಫ್ (ವನ್ಯಜೀವಿ) ಗಮನ ಸೆಳೆದರು.</p>.<p>‘ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ದಟ್ಟವಾಗಿದೆ. ಪಶ್ಚಿಮಘಟ್ಟ ಹಾದುಹೋಗಿರುವ ಇದು ಪಾರಂಪರಿಕ ತಾಣವೂ ಹೌದು. ಹುಲಿ ಸಂತತಿ ಅಭಿವೃದ್ಧಿಗೆ ಸಾಕಷ್ಟು ಅವಕಾಶ ಇದೆ. ಒಂದು ವೇಳೆ ಈ ಯೋಜನೆ ಅನುಷ್ಠಾನಗೊಳಿಸಿದರೆ, ಹುಲಿ ಸಂರಕ್ಷಣೆ ಕಾರ್ಯಕ್ಕೆ ಹಿನ್ನಡೆಯಾಗಲಿದೆ’ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಈ ರೈಲು ಮಾರ್ಗ ನಿರ್ಮಾಣದ ವೇಳೆ 2 ಲಕ್ಷಕ್ಕೂ ಅಧಿಕ ಮರಗಳ ಹನನ ಆಗಲಿದೆ ಎಂದು ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಾದೇಶಿಕ ಉನ್ನತಾಧಿಕಾರ ಸಮಿತಿ (ಆರ್ಇಸಿ) ಕಳೆದ ವರ್ಷ ಏಪ್ರಿಲ್ನಲ್ಲಿ ಅಭಿಪ್ರಾಯಪಟ್ಟಿತ್ತು. ಬಳಿಕ ಷರತ್ತುಬದ್ಧ ಅನುಮತಿ ನೀಡಿತ್ತು.</p>.<p>ಹಳಿಗೆ ಏರದ ಯೋಜನೆ: 1998ರಲ್ಲಿ ಈ ರೈಲು ಮಾರ್ಗದ ಯೋಜನೆ ಸಿದ್ಧವಾಗಿತ್ತು. ಬಳ್ಳಾರಿ ಮತ್ತು ಹೊಸಪೇಟೆಯ ಕಬ್ಬಿಣದ ಅದಿರು ಗಣಿಗಳಿಂದ ಅದಿರು ಸಾಗಿಸುವುದಕ್ಕಾಗಿ ಈ ಯೋಜನೆ ರೂಪಿಸಲಾಗಿತ್ತು.</p>.<p>ಈ ಯೋಜನೆಯನ್ನು ವಿರೋಧಿಸಿ ರಾಜ್ಯದ ಸರ್ಕಾರೇತರ ಸಂಘಟನೆಗಳಾದ ಪರಿಸರ ಸಂರಕ್ಷಣಾ ಕೇಂದ್ರ ಮತ್ತು ವೈಲ್ಡರ್ನೆಸ್ ಕ್ಲಬ್ಗಳು 2006ರಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದವು. ಯೋಜನೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.</p>.<p>ಸುಪ್ರೀಂ ಕೋರ್ಟ್ ನೇಮಿಸಿದ್ದ ಕೇಂದ್ರ ಉನ್ನತಾಧಿಕಾರ ಸಮಿತಿಯು (ಸಿಇಸಿ) ಈ ಯೋಜನೆಗೆ ಅನುಮೋದನೆ ನೀಡಲು 2015ರಲ್ಲಿ ನಿರಾಕರಿಸಿತ್ತು. ‘ಈ ಮಾರ್ಗ ನಿರ್ಮಾಣದಿಂದ ಪಶ್ಚಿಮ ಘಟ್ಟಗಳ ಅರಣ್ಯ, ವನ್ಯಜೀವಿಗಳು ಮತ್ತು ಜೀವ ವೈವಿಧ್ಯದ ಮೇಲೆ ಭಾರಿ ಪರಿಣಾಮ ಉಂಟಾಗಲಿದೆ. ಸರಿಪಡಿಸಲಾಗದಷ್ಟು ಹಾನಿ ಆಗಲಿದೆ’ ಎಂದು ಸಿಇಸಿ ಹೇಳಿತ್ತು.</p>.<p>ಎನ್ಜಿಟಿ ಹಸಿರು ನಿಶಾನೆ: ಈ ಯೋಜನೆಗೆ ಸಂಬಂಧಿಸಿದ ಎಲ್ಲ ಅರ್ಜಿಗಳು ಮತ್ತು ಸಿಇಸಿಯ ಅಭಿಪ್ರಾಯಗಳನ್ನು 2015ರ ಅಕ್ಟೊಬರ್ 5ರಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್ಜಿಟಿ) ಸುಪ್ರೀಂ ಕೋರ್ಟ್ ವರ್ಗಾಯಿಸಿತ್ತು. ಮಾರ್ಗ ನಿರ್ಮಾಣಕ್ಕೆ ಎನ್ಜಿಟಿ 2016ರ ಫೆಬ್ರುವರಿ 10ರಂದು ಹಸಿರು ನಿಶಾನೆ ತೋರಿತ್ತು.</p>.<p>‘ಅರಣ್ಯ (ಸಂರಕ್ಷಣೆ) ಕಾಯ್ದೆ 1980ರ ಸೆಕ್ಷನ್ 2ರ ಪ್ರಕಾರ, ರಾಜ್ಯ ಸರ್ಕಾರ ಭೂಪರಿವರ್ತನೆ ಆದೇಶ ಹೊರಡಿಸಬಹುದು. ಆದರೆ, ಅದಕ್ಕೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯ ಅನುಮತಿ ಪಡೆದುಕೊಳ್ಳಬೇಕು’ ಎಂದು ಅದು ತಿಳಿಸಿತ್ತು.</p>.<p>ಈ ಯೋಜನೆ ಪೂರ್ಣಗೊಳಿಸಲು ಅವಕಾಶ ಕಲ್ಪಿಸುವಂತೆ 2016ರ ಅಕ್ಟೋಬರ್ 24ರಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿತ್ತು. ಬಳಿಕ ಸಚಿವಾಲಯವು ಸಮಿತಿ ರಚಿಸಿತ್ತು.</p>.<p><strong>ಯೋಜನೆಗೆ ಬಳಕೆಯಾಗಲಿರುವ ಅರಣ್ಯ ಭೂಮಿ</strong></p>.<p>ವಲಯ; ಹೆಕ್ಟೇರ್; ಎಷ್ಟು ಮರ ಕಡಿತ<br /> ಕಾರವಾರ; 249.58; 71,266<br /> ಯಲ್ಲಾಪುರ; 304.05; 1,19,439<br /> ಧಾರವಾಡ; 42; 11,745</p>.<p><strong>ಈ ಪ್ರದೇಶದ ಪ್ರಮುಖ ವನ್ಯಜೀವಿಗಳು</strong></p>.<p>ಹುಲಿ, ಆನೆ, ಜಿಂಕೆ, ಕಡವೆ, ಕಾಡುಕೋಣ, ಮುಳ್ಳು ಹಂದಿ, ಚಿರತೆ, ಮಳೆ ಹಕ್ಕಿ (ಹಾರ್ನ್ಬಿಲ್), ನವಿಲು, ಕಾಳಿಂಗ ಸರ್ಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>