ಕಲಬುರ್ಗಿ: ಜಿಲ್ಲೆಯಾದ್ಯಂತ ಐದು ದಿನ ಸುರಿದ ಧಾರಾಕಾರ ಮಳೆಯಿಂದ ಅಂದಾಜು 35,086 ಹೆಕ್ಟೇರ್ ಬೆಳೆ ಹಾನಿಯಾಗಿದೆ.
ಕೃಷಿ ಇಲಾಖೆಯು ಮುಂಗಾರು ಹಂಗಾಮಿಗೆ 5.69 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಿತ್ತು. ಆದರೆ ತೊಗರಿ ಬೆಳೆಯುವ ರೈತರ ಸಂಖ್ಯೆ ಹೆಚ್ಚಾದ ಪರಿಣಾಮ ಬಿತ್ತನೆ ಪ್ರದೇಶ 5,89,064 ಹೆಕ್ಟೇರ್ಗೆ ವಿಸ್ತರಣೆಯಾಗಿತ್ತು. ಈ ಪೈಕಿ 3,97,025 ಹೆಕ್ಟೇರ್ನಲ್ಲಿ ತೊಗರಿ ಬಿತ್ತನೆ ಮಾಡಲಾಗಿತ್ತು. ಧಾರಾಕಾರ ಮಳೆಯಿಂದಾಗಿ 35,086 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಇದರಲ್ಲಿ ತೊಗರಿ ಪ್ರದೇಶ 25,655 ಹೆಕ್ಟೇರ್ ಆಗಿದೆ.
‘ಚಿಂಚೋಳಿ ಮತ್ತು ಆಳಂದ ತಾಲ್ಲೂಕುಗಳಲ್ಲಿ ಉದ್ದು, ಸೋಯಾಬಿನ್, ಕಲಬುರ್ಗಿ, ಚಿತ್ತಾಪುರ, ಸೇಡಂ, ಜೇವರ್ಗಿ ಮತ್ತು ಅಫಜಲಪುರ ತಾಲ್ಲೂಕುಗಳಲ್ಲಿ ತೊಗರಿ ಸೇರಿದಂತೆ ಇತರೆ ಬೆಳೆಗಳು ಪ್ರವಾಹದಿಂದ ನಾಶವಾಗಿವೆ. ಪ್ರಾಥಮಿಕ ಸಮೀಕ್ಷೆ ಪ್ರಕಾರ 35ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ಹಾನಿ ಮಾಹಿತಿ ಲಭ್ಯವಾಗಿದೆ.