<p><strong>ಮಡಿಕೇರಿ: </strong>ಕೊಡಗು ಜಿಲ್ಲೆಯ ಮೂಲಕ ಹಾದು ಹೋಗುವ ಮೈಸೂರು–ಕೇರಳದ ಕೊಯಿಕ್ಕೋಡ್ ಹೈಟೆನ್ಷನ್ ವಿದ್ಯುತ್ ಮಾರ್ಗದ ಕಾಮಗಾರಿ ಸ್ಥಗಿತಗೊಳಿಸಲು ಕಾವೇರಿ ಸೇನೆ ಹಾಗೂ ಬಸವಣ್ಣ ದೇವರ ಬನ ಸಂರಕ್ಷಣಾ ಟ್ರಸ್ಟ್ ಪದಾಧಿಕಾರಿಗಳು ಆಗ್ರಹಿಸಿದರು.<br /> <br /> ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ದೇವಮಚ್ಚಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಕಾಮಗಾರಿಯ ಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಸಂಘಟನೆಯ ಪ್ರಮುಖರು, ಪವರ್ ಗ್ರೀಡ್ ಸಂಸ್ಥೆಯ ವಿರುದ್ಧ ಹರಿಹಾಯ್ದರು.<br /> <br /> ಬಸವಣ್ಣ ದೇವರ ಬನ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಡಾ.ಬಿ.ಸಿ. ನಂಜಪ್ಪ ಮಾತನಾಡಿ, ಕೊಡಗಿನ ಅರಣ್ಯ ಪ್ರದೇಶವನ್ನು ಲೂಟಿ ಮಾಡುವ ಉದ್ದೇಶದಿಂದ ವಿದ್ಯುತ್ ಕಾಮಗಾರಿ ಆರಂಭಿಸಲಾಗಿದೆ. ಕಾಮಗಾರಿ ಅನುಷ್ಠಾನಕ್ಕಾಗಿ ಲಕ್ಷಾಂತರ ಮರಗಳನ್ನು ಕಡಿಯಲಾಗುತ್ತಿದೆ. ಇದರಿಂದ ಕಾವೇರಿ ಜಲಮೂಲಕ್ಕೆ ಧಕ್ಕೆ ಉಂಟಾಗಲಿದೆ ಎಂದು ಆರೋಪಿಸಿದರು.<br /> <br /> ಕಾವೇರಿ ಸೇನೆ ಸಂಚಾಲಕ ರವಿ ಚಂಗಪ್ಪ ಮಾತನಾಡಿ, ವಿವಿಧ ಯೋಜನೆಗಳ ಹೆಸರಿನಲ್ಲಿ ಕೊಡಗಿನ ಪರಿಸರವನ್ನು ನಾಶ ಮಾಡಲು ಸರ್ಕಾರ ಹೊರಟಿದೆ. ಜನರು ಒಗ್ಗಟ್ಟಾಗಿ ಹೋರಾಟ ಮಾಡಲು ಮುಂದೆ ಬರಬೇಕು ಎಂದರು.<br /> ಈ ಹೋರಾಟವನ್ನು ಹತ್ತಿಕ್ಕುವ ಉದ್ದೇಶದಿಂದ ನಮ್ಮ ಮೇಲೆ ವಿನಾಕಾರಣ ಮೊಕದ್ದಮೆ ದಾಖಲಿಸುವ ಪ್ರಯತ್ನವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ: </strong>ಕೊಡಗು ಜಿಲ್ಲೆಯ ಮೂಲಕ ಹಾದು ಹೋಗುವ ಮೈಸೂರು–ಕೇರಳದ ಕೊಯಿಕ್ಕೋಡ್ ಹೈಟೆನ್ಷನ್ ವಿದ್ಯುತ್ ಮಾರ್ಗದ ಕಾಮಗಾರಿ ಸ್ಥಗಿತಗೊಳಿಸಲು ಕಾವೇರಿ ಸೇನೆ ಹಾಗೂ ಬಸವಣ್ಣ ದೇವರ ಬನ ಸಂರಕ್ಷಣಾ ಟ್ರಸ್ಟ್ ಪದಾಧಿಕಾರಿಗಳು ಆಗ್ರಹಿಸಿದರು.<br /> <br /> ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ದೇವಮಚ್ಚಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಕಾಮಗಾರಿಯ ಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಸಂಘಟನೆಯ ಪ್ರಮುಖರು, ಪವರ್ ಗ್ರೀಡ್ ಸಂಸ್ಥೆಯ ವಿರುದ್ಧ ಹರಿಹಾಯ್ದರು.<br /> <br /> ಬಸವಣ್ಣ ದೇವರ ಬನ ಸಂರಕ್ಷಣಾ ಟ್ರಸ್ಟ್ ಅಧ್ಯಕ್ಷ ಡಾ.ಬಿ.ಸಿ. ನಂಜಪ್ಪ ಮಾತನಾಡಿ, ಕೊಡಗಿನ ಅರಣ್ಯ ಪ್ರದೇಶವನ್ನು ಲೂಟಿ ಮಾಡುವ ಉದ್ದೇಶದಿಂದ ವಿದ್ಯುತ್ ಕಾಮಗಾರಿ ಆರಂಭಿಸಲಾಗಿದೆ. ಕಾಮಗಾರಿ ಅನುಷ್ಠಾನಕ್ಕಾಗಿ ಲಕ್ಷಾಂತರ ಮರಗಳನ್ನು ಕಡಿಯಲಾಗುತ್ತಿದೆ. ಇದರಿಂದ ಕಾವೇರಿ ಜಲಮೂಲಕ್ಕೆ ಧಕ್ಕೆ ಉಂಟಾಗಲಿದೆ ಎಂದು ಆರೋಪಿಸಿದರು.<br /> <br /> ಕಾವೇರಿ ಸೇನೆ ಸಂಚಾಲಕ ರವಿ ಚಂಗಪ್ಪ ಮಾತನಾಡಿ, ವಿವಿಧ ಯೋಜನೆಗಳ ಹೆಸರಿನಲ್ಲಿ ಕೊಡಗಿನ ಪರಿಸರವನ್ನು ನಾಶ ಮಾಡಲು ಸರ್ಕಾರ ಹೊರಟಿದೆ. ಜನರು ಒಗ್ಗಟ್ಟಾಗಿ ಹೋರಾಟ ಮಾಡಲು ಮುಂದೆ ಬರಬೇಕು ಎಂದರು.<br /> ಈ ಹೋರಾಟವನ್ನು ಹತ್ತಿಕ್ಕುವ ಉದ್ದೇಶದಿಂದ ನಮ್ಮ ಮೇಲೆ ವಿನಾಕಾರಣ ಮೊಕದ್ದಮೆ ದಾಖಲಿಸುವ ಪ್ರಯತ್ನವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>