<p><strong>ಬೆಂಗಳೂರು:</strong> ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹೇರಲು ಆತ್ಮಹತ್ಯೆಗೆ ಯತ್ನಿಸುವವರ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆಯಲ್ಲಿ ‘ಆತ್ಮಹತ್ಯೆ ನಿಗ್ರಹ ದಳ’ (ಎಎಸ್ಎಸ್) ರಚನೆಯಾಗಿದೆ.<br /> <br /> ಬೆಳಗಾವಿಯ ರೈತನ ಆತ್ಮಹತ್ಯೆ ಹಾಗೂ ಬೆಂಗಳೂರಿನಲ್ಲಿ ಶಿಕ್ಷಕರ ಆತ್ಮಹತ್ಯೆ ಯತ್ನ ಪ್ರಕರಣಗಳ ನಂತರ ಎಎಸ್ಎಸ್ ಸ್ಥಾಪನೆ ಬಗ್ಗೆ ಚಿಂತನೆ ನಡೆದಿತ್ತು.<br /> <br /> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ನಡೆದ ಐಪಿಎಸ್ ಅಧಿಕಾರಿಗಳ ಸಭೆಯಲ್ಲಿ ‘ಆತ್ಮಹತ್ಯೆ ನಿಗ್ರಹ ದಳ’ ಸ್ಥಾಪನೆ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮೌಖಿಕ ಸೂಚನೆ ನೀಡಿದ್ದರು. ಸಿಎಂ ನಿರ್ದೇಶನದಂತೆ ಇಲಾಖೆಯಲ್ಲಿ ಈ ದಳ ಅಸ್ತಿತ್ವಕ್ಕೆ ಬಂದಿದೆ.<br /> <br /> ‘ಪ್ರತಿಭಟನೆಗಳು ನಡೆಯುವ ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಆತ್ಮಹತ್ಯೆ ನಿಗ್ರಹ ದಳ ಕಾರ್ಯನಿರ್ವಹಿಸುತ್ತದೆ. ಈ ತಂಡಕ್ಕೆ ಯಾವ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂಬುದನ್ನು ಆಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಆಯುಕ್ತರಿಗೆ ಬಿಡಲಾಗಿದೆ. ಪ್ರತಿ ತಂಡದಲ್ಲಿ ಒಬ್ಬರು ವೈದ್ಯರೂ ಇರುತ್ತಾರೆ’ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಎಂ.ಎನ್.ರೆಡ್ಡಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ಹೇರಲು ಆತ್ಮಹತ್ಯೆಗೆ ಯತ್ನಿಸುವವರ ನಿಯಂತ್ರಣಕ್ಕಾಗಿ ಪೊಲೀಸ್ ಇಲಾಖೆಯಲ್ಲಿ ‘ಆತ್ಮಹತ್ಯೆ ನಿಗ್ರಹ ದಳ’ (ಎಎಸ್ಎಸ್) ರಚನೆಯಾಗಿದೆ.<br /> <br /> ಬೆಳಗಾವಿಯ ರೈತನ ಆತ್ಮಹತ್ಯೆ ಹಾಗೂ ಬೆಂಗಳೂರಿನಲ್ಲಿ ಶಿಕ್ಷಕರ ಆತ್ಮಹತ್ಯೆ ಯತ್ನ ಪ್ರಕರಣಗಳ ನಂತರ ಎಎಸ್ಎಸ್ ಸ್ಥಾಪನೆ ಬಗ್ಗೆ ಚಿಂತನೆ ನಡೆದಿತ್ತು.<br /> <br /> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ನಡೆದ ಐಪಿಎಸ್ ಅಧಿಕಾರಿಗಳ ಸಭೆಯಲ್ಲಿ ‘ಆತ್ಮಹತ್ಯೆ ನಿಗ್ರಹ ದಳ’ ಸ್ಥಾಪನೆ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮೌಖಿಕ ಸೂಚನೆ ನೀಡಿದ್ದರು. ಸಿಎಂ ನಿರ್ದೇಶನದಂತೆ ಇಲಾಖೆಯಲ್ಲಿ ಈ ದಳ ಅಸ್ತಿತ್ವಕ್ಕೆ ಬಂದಿದೆ.<br /> <br /> ‘ಪ್ರತಿಭಟನೆಗಳು ನಡೆಯುವ ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಆತ್ಮಹತ್ಯೆ ನಿಗ್ರಹ ದಳ ಕಾರ್ಯನಿರ್ವಹಿಸುತ್ತದೆ. ಈ ತಂಡಕ್ಕೆ ಯಾವ ಸಿಬ್ಬಂದಿಯನ್ನು ನೇಮಕ ಮಾಡಬೇಕು ಎಂಬುದನ್ನು ಆಯಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಆಯುಕ್ತರಿಗೆ ಬಿಡಲಾಗಿದೆ. ಪ್ರತಿ ತಂಡದಲ್ಲಿ ಒಬ್ಬರು ವೈದ್ಯರೂ ಇರುತ್ತಾರೆ’ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಎಂ.ಎನ್.ರೆಡ್ಡಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>