ಬೆಂಗಳೂರು: ‘ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಬಹುಮತದ ಯಶಸ್ಸು ಸಂಪೂರ್ಣವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಅಮಿತ್ ಷಾ ಅವರಿಗೆ ಸಲ್ಲುತ್ತದೆ’ ಎಂದು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯಿಸಿದರು.
ಚುನಾವಣೆ ಫಲಿತಾಂಶದ ನಂತರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದ ಜನ ಕಾಂಗ್ರೆಸ್ ಪಕ್ಷ ವನ್ನು ತಿರಸ್ಕರಿಸುತ್ತಿದ್ದಾರೆ ಎಂಬುದನ್ನು ಈ ಫಲಿತಾಂಶ ಸಾಬೀತು ಮಾಡಿದೆ. ಜನರು ಬಿಜೆಪಿ ಬಗ್ಗೆ ಹೊಂದಿರುವ ಭರವಸೆಯನ್ನು ತೋರಿಸುತ್ತಿದೆ’ ಎಂದರು.