<p><strong>ಶಿವಮೊಗ್ಗ: </strong>ಕೈಮಗ್ಗ ನೇಕಾರಿಕೆ ಉಳಿಸಲು ಸರ್ವೋದಯ ದಿನದಂದು ಹೆಗ್ಗೋಡು ಸಮೀಪದ ಹೊನ್ನೆಸರದ ಚರಕದ ಶ್ರಮಜೀವಿ ಆಶ್ರಮದಲ್ಲಿ ರಂಗಕರ್ಮಿ ಹಾಗೂ ಚರಕ ಸಂಸ್ಥೆಯ ಮುಖ್ಯಸ್ಥ ಪ್ರಸನ್ನ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದರು.<br /> <br /> ಪ್ರಸನ್ನ ಜತೆ ಚರಕ ಸಂಸ್ಥೆಯ ಕಾರ್ಮಿಕರು ಹಾಗೂ ನೇಕಾರರ ಪರ ಕೆಲಸ ಮಾಡುತ್ತಿರುವ ದೊಡ್ಡಬಳ್ಳಾಪುರದ ನರಸಿಂಹಮೂರ್ತಿ, ಬೆಂಗಳೂರಿನ ಸುನೀತಾ ಉಪವಾಸ ಸತ್ಯಾಗ್ರಹ ಕುಳಿತಿದ್ದಾರೆ.<br /> <br /> ಪ್ರಸನ್ನ ಮಾತನಾಡಿ, ‘ಉಪವಾಸ ಕೈ ಬಿಡಿ ಎಂದು ಸರ್ಕಾರದ ಹಲವು ಅಧಿಕಾರಿಗಳು, ರಾಜಕಾರಣಿಗಳು, ಸಾಹಿತಿಗಳು, ಕಲಾವಿದರು ತಮ್ಮ ಜತೆ ಮಾತನಾಡುತ್ತಿದ್ದಾರೆ. ಎಲ್ಲರಿಗೂ ಸಮಸ್ಯೆ ಬಗೆಹರಿಸುವ ಬಗ್ಗೆ ಪ್ರಾಮಾಣಿಕವಾದ ಆಸಕ್ತಿ ಇದೆ. ಆದರೆ, ಯಾರಿಗೂ ಕೈಮಗ್ಗ ನೇಕಾರರ ಸಮಸ್ಯೆ ಅರ್ಥವಾಗುತ್ತಿಲ್ಲ’ ಎಂದು ಆಕ್ಷೇಪಿಸಿದರು.<br /> <br /> ಕೈಮಗ್ಗ ಕ್ಷೇತ್ರಕ್ಕೆ ಕಾನೂನಿನ ಬೆಂಬಲ ಇದೆ ಎಂಬುದೇ ಇವರಿಗೆ ತಿಳಿದಿಲ್ಲ. ‘ಕೈಮಗ್ಗ ಮೀಸಲಾತಿ ಅಧಿನಿಯಮ–1985’ ಪ್ರಕಾರ ವಿದ್ಯುತ್ ಮಗ್ಗ ಬಳಕೆ ಮಾಡುವುದು ಕಾನೂನುಬಾಹಿರ. ಆದರೆ, ಸರ್ಕಾರವೇ ಈ ಕಾನೂನನ್ನು ಮುರಿದಿದೆ’ ಎಂದು ದೂರಿದರು.<br /> <br /> ಸತ್ಯಾಗ್ರಹಕ್ಕೆ ಸಾಹಿತಿ ನಾ.ಡಿಸೋಜ ಗುರುವಾರ ಬೆಳಿಗ್ಗೆ ಚಾಲನೆ ನೀಡಿದರು. ವಿಮರ್ಶಕ ಡಿ.ಎಸ್.ನಾಗಭೂಷಣ್, ಚರಕ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಗೌರಮ್ಮ ಈ ಸಂದರ್ಭಕ್ಕೆ ಸಾಕ್ಷಿಯಾಗಿದ್ದರು.<br /> <br /> <strong>ಮೈಸೂರು ವರದಿ:</strong> ನೇಕಾರರ ಹೋರಾಟವನ್ನು ಬೆಂಬಲಿಸಿ ಮೈಸೂರಿನಲ್ಲಿ ದೇಸಿ ಬಳಗ ಮೈಸೂರು ಸಂಘಟನೆಯ ಕಾರ್ಯಕರ್ತರು ಮಾನಸಗಂಗೋತ್ರಿಯ ಮಹಾತ್ಮ ಗಾಂಧಿ ಪ್ರತಿಮೆಯ ಎದುರು ಗುರುವಾರ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಕೈಮಗ್ಗ ನೇಕಾರಿಕೆ ಉಳಿಸಲು ಸರ್ವೋದಯ ದಿನದಂದು ಹೆಗ್ಗೋಡು ಸಮೀಪದ ಹೊನ್ನೆಸರದ ಚರಕದ ಶ್ರಮಜೀವಿ ಆಶ್ರಮದಲ್ಲಿ ರಂಗಕರ್ಮಿ ಹಾಗೂ ಚರಕ ಸಂಸ್ಥೆಯ ಮುಖ್ಯಸ್ಥ ಪ್ರಸನ್ನ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದರು.<br /> <br /> ಪ್ರಸನ್ನ ಜತೆ ಚರಕ ಸಂಸ್ಥೆಯ ಕಾರ್ಮಿಕರು ಹಾಗೂ ನೇಕಾರರ ಪರ ಕೆಲಸ ಮಾಡುತ್ತಿರುವ ದೊಡ್ಡಬಳ್ಳಾಪುರದ ನರಸಿಂಹಮೂರ್ತಿ, ಬೆಂಗಳೂರಿನ ಸುನೀತಾ ಉಪವಾಸ ಸತ್ಯಾಗ್ರಹ ಕುಳಿತಿದ್ದಾರೆ.<br /> <br /> ಪ್ರಸನ್ನ ಮಾತನಾಡಿ, ‘ಉಪವಾಸ ಕೈ ಬಿಡಿ ಎಂದು ಸರ್ಕಾರದ ಹಲವು ಅಧಿಕಾರಿಗಳು, ರಾಜಕಾರಣಿಗಳು, ಸಾಹಿತಿಗಳು, ಕಲಾವಿದರು ತಮ್ಮ ಜತೆ ಮಾತನಾಡುತ್ತಿದ್ದಾರೆ. ಎಲ್ಲರಿಗೂ ಸಮಸ್ಯೆ ಬಗೆಹರಿಸುವ ಬಗ್ಗೆ ಪ್ರಾಮಾಣಿಕವಾದ ಆಸಕ್ತಿ ಇದೆ. ಆದರೆ, ಯಾರಿಗೂ ಕೈಮಗ್ಗ ನೇಕಾರರ ಸಮಸ್ಯೆ ಅರ್ಥವಾಗುತ್ತಿಲ್ಲ’ ಎಂದು ಆಕ್ಷೇಪಿಸಿದರು.<br /> <br /> ಕೈಮಗ್ಗ ಕ್ಷೇತ್ರಕ್ಕೆ ಕಾನೂನಿನ ಬೆಂಬಲ ಇದೆ ಎಂಬುದೇ ಇವರಿಗೆ ತಿಳಿದಿಲ್ಲ. ‘ಕೈಮಗ್ಗ ಮೀಸಲಾತಿ ಅಧಿನಿಯಮ–1985’ ಪ್ರಕಾರ ವಿದ್ಯುತ್ ಮಗ್ಗ ಬಳಕೆ ಮಾಡುವುದು ಕಾನೂನುಬಾಹಿರ. ಆದರೆ, ಸರ್ಕಾರವೇ ಈ ಕಾನೂನನ್ನು ಮುರಿದಿದೆ’ ಎಂದು ದೂರಿದರು.<br /> <br /> ಸತ್ಯಾಗ್ರಹಕ್ಕೆ ಸಾಹಿತಿ ನಾ.ಡಿಸೋಜ ಗುರುವಾರ ಬೆಳಿಗ್ಗೆ ಚಾಲನೆ ನೀಡಿದರು. ವಿಮರ್ಶಕ ಡಿ.ಎಸ್.ನಾಗಭೂಷಣ್, ಚರಕ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಗೌರಮ್ಮ ಈ ಸಂದರ್ಭಕ್ಕೆ ಸಾಕ್ಷಿಯಾಗಿದ್ದರು.<br /> <br /> <strong>ಮೈಸೂರು ವರದಿ:</strong> ನೇಕಾರರ ಹೋರಾಟವನ್ನು ಬೆಂಬಲಿಸಿ ಮೈಸೂರಿನಲ್ಲಿ ದೇಸಿ ಬಳಗ ಮೈಸೂರು ಸಂಘಟನೆಯ ಕಾರ್ಯಕರ್ತರು ಮಾನಸಗಂಗೋತ್ರಿಯ ಮಹಾತ್ಮ ಗಾಂಧಿ ಪ್ರತಿಮೆಯ ಎದುರು ಗುರುವಾರ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>