<p><strong>ಬೆಂಗಳೂರು:</strong> ‘ಸಾಮಾಜಿಕ ಪರಿವರ್ತನೆಗೆ ಪ್ರಯತ್ನಿಸಿದ ದಾಸಶ್ರೇಷ್ಠರ ಕೀರ್ತನೆಗಳ ದಾಸ ಸಾಹಿತ್ಯದ 50 ಸಂಪುಟಗಳನ್ನು ಪುನರ್ ಮುದ್ರಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.<br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದಲ್ಲಿ ಬುಧವಾರ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಸಂಶೋಧಕ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ಮತ್ತು ಲೇಖಕ ಕಾ.ತ.ಚಿಕ್ಕಣ್ಣ ಅವರಿಗೆ ‘ಕನಕ ಶ್ರೀ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.<br /> <br /> ‘ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ದಾಸ ಸಾಹಿತ್ಯದ ಸಂಪುಟಗಳನ್ನು ಪ್ರಕಟಿಸಲಾಗಿತ್ತು. ಆ ಸಂಪುಟಗಳ ಪ್ರತಿಗಳು ಮತ್ತೆ ಜನರಿಗೆ ಸಿಗುವಂತಾಗಬೇಕು. ಇದಕ್ಕಾಗಿ ಸಂಪುಟಗಳನ್ನು ಪುನರ್ ಮುದ್ರಿಸಲಾಗುವುದು. ಅಲ್ಲದೆ ದಾಸ ಸಾಹಿತ್ಯವನ್ನು ಇತರೆ ಭಾಷೆಗಳಿಗೆ ಭಾಷಾಂತರಿಸಲು ಯೋಜನೆ ಹಾಕಿಕೊಳ್ಳಲಾಗುವುದು. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಿಗೆ ಸೂಚಿಸಿದ್ದೇನೆ. ಈ ಕಾರ್ಯಕ್ಕೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ’ ಎಂದರು.<br /> <br /> ‘ಸಮಾಜದಲ್ಲಿ ಎಲ್ಲ ಕಾಲಕ್ಕೂ ಮೌಢ್ಯಗಳು ತುಂಬಿರುತ್ತವೆ. ಆದರೆ, ಯಾವುದು ಮೌಢ್ಯ, ಯಾವುದು ನಂಬಿಕೆ ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾದ್ದು ಅಗತ್ಯ. ಸಮಾಜದಲ್ಲಿ ಅಸಮಾನತೆ, ಮೌಢ್ಯಗಳ ವಿರುದ್ಧ ತನ್ನ ಕೀರ್ತನೆಗಳಲ್ಲಿ ದನಿ ಎತ್ತಿದವರು ಕನಕದಾಸರು. ಅವರ ಚಿಂತನೆಗಳು ಸಾರ್ವಕಾಲಿಕ’ ಎಂದು ಹೇಳಿದರು.<br /> <br /> ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ಮಾತನಾಡಿ, ‘ದಾಸರ ಕೃತಿಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಸರ್ಕಾರ ಮಾಡಬೇಕು. ದಾಸ ಸಾಹಿತ್ಯ ದೇಶ ಹಾಗೂ ವಿದೇಶಿ ಭಾಷೆಗಳಿಗೆ ಭಾಷಾಂತರವಾಗಬೇಕು’ ಎಂದರು.<br /> <br /> 2013ನೇ ಸಾಲಿನ ಪ್ರಶಸ್ತಿಯನ್ನು ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ಅವರಿಗೆ ಮತ್ತು 2012ನೇ ಸಾಲಿನ ಪ್ರಶಸ್ತಿಯನ್ನು ಕಾ.ತ.ಚಿಕ್ಕಣ್ಣ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ರೂ 5 ಲಕ್ಷ ನಗದು, ಕನಕದಾಸರ ಪುತ್ಥಳಿ, ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಾಮಾಜಿಕ ಪರಿವರ್ತನೆಗೆ ಪ್ರಯತ್ನಿಸಿದ ದಾಸಶ್ರೇಷ್ಠರ ಕೀರ್ತನೆಗಳ ದಾಸ ಸಾಹಿತ್ಯದ 50 ಸಂಪುಟಗಳನ್ನು ಪುನರ್ ಮುದ್ರಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.<br /> <br /> ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಗರದಲ್ಲಿ ಬುಧವಾರ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಸಂಶೋಧಕ ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ಮತ್ತು ಲೇಖಕ ಕಾ.ತ.ಚಿಕ್ಕಣ್ಣ ಅವರಿಗೆ ‘ಕನಕ ಶ್ರೀ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.<br /> <br /> ‘ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ದಾಸ ಸಾಹಿತ್ಯದ ಸಂಪುಟಗಳನ್ನು ಪ್ರಕಟಿಸಲಾಗಿತ್ತು. ಆ ಸಂಪುಟಗಳ ಪ್ರತಿಗಳು ಮತ್ತೆ ಜನರಿಗೆ ಸಿಗುವಂತಾಗಬೇಕು. ಇದಕ್ಕಾಗಿ ಸಂಪುಟಗಳನ್ನು ಪುನರ್ ಮುದ್ರಿಸಲಾಗುವುದು. ಅಲ್ಲದೆ ದಾಸ ಸಾಹಿತ್ಯವನ್ನು ಇತರೆ ಭಾಷೆಗಳಿಗೆ ಭಾಷಾಂತರಿಸಲು ಯೋಜನೆ ಹಾಕಿಕೊಳ್ಳಲಾಗುವುದು. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಿಗೆ ಸೂಚಿಸಿದ್ದೇನೆ. ಈ ಕಾರ್ಯಕ್ಕೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ’ ಎಂದರು.<br /> <br /> ‘ಸಮಾಜದಲ್ಲಿ ಎಲ್ಲ ಕಾಲಕ್ಕೂ ಮೌಢ್ಯಗಳು ತುಂಬಿರುತ್ತವೆ. ಆದರೆ, ಯಾವುದು ಮೌಢ್ಯ, ಯಾವುದು ನಂಬಿಕೆ ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾದ್ದು ಅಗತ್ಯ. ಸಮಾಜದಲ್ಲಿ ಅಸಮಾನತೆ, ಮೌಢ್ಯಗಳ ವಿರುದ್ಧ ತನ್ನ ಕೀರ್ತನೆಗಳಲ್ಲಿ ದನಿ ಎತ್ತಿದವರು ಕನಕದಾಸರು. ಅವರ ಚಿಂತನೆಗಳು ಸಾರ್ವಕಾಲಿಕ’ ಎಂದು ಹೇಳಿದರು.<br /> <br /> ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ಮಾತನಾಡಿ, ‘ದಾಸರ ಕೃತಿಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ಸರ್ಕಾರ ಮಾಡಬೇಕು. ದಾಸ ಸಾಹಿತ್ಯ ದೇಶ ಹಾಗೂ ವಿದೇಶಿ ಭಾಷೆಗಳಿಗೆ ಭಾಷಾಂತರವಾಗಬೇಕು’ ಎಂದರು.<br /> <br /> 2013ನೇ ಸಾಲಿನ ಪ್ರಶಸ್ತಿಯನ್ನು ಡಾ.ಕೃಷ್ಣ ಕೊಲ್ಹಾರ ಕುಲಕರ್ಣಿ ಅವರಿಗೆ ಮತ್ತು 2012ನೇ ಸಾಲಿನ ಪ್ರಶಸ್ತಿಯನ್ನು ಕಾ.ತ.ಚಿಕ್ಕಣ್ಣ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ರೂ 5 ಲಕ್ಷ ನಗದು, ಕನಕದಾಸರ ಪುತ್ಥಳಿ, ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>