<p><strong>ಬೆಂಗಳೂರು:</strong> ಕಾಡುಗೊಲ್ಲ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಸೇರಿಸುವ ಪ್ರಸ್ತಾವ ಸರ್ಕಾರದ ಮುಂದಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ತಿಳಿಸಿದರು.<br /> <br /> ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಕೇಂದ್ರ ಸರ್ಕಾರ ಸಹ ಈ ಪ್ರಕ್ರಿಯೆಗೆ ಅನುಮೋದನೆ ನೀಡಬೇಕು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ‘ಗೊಲ್ಲರಹಟ್ಟಿಗಳಿಗೆ ನಾನು ಭೇಟಿ ನೀಡಿ ಅಲ್ಲಿನ ವಾಸ್ತವ ಸಮಸ್ಯೆಗಳನ್ನು ಅರಿತುಕೊಂಡಿದ್ದೇನೆ. ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿರುವ ಈ ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಪ್ರಗತಿ ಸಾಧಿಸಬೇಕಾಗಿದೆ. ಈ ಜನಾಂಗವನ್ನು ಸಮಾಜದ ಮುಖ್ಯವಾಹಿನಿಗೆ ತರಲು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗೊಲ್ಲರಹಟ್ಟಿಗಳ ಅಭಿವೃದ್ಧಿಗೆ ₨25 ಕೋಟಿ ಮೀಸಲಿಡಲಾಗಿದೆ’ ಎಂದು ತಿಳಿಸಿದರು.<br /> <br /> ಗೊಲ್ಲರಹಟ್ಟಿಗಳಲ್ಲಿನ ಮಹಿಳೆಯರ ವಿವಿಧ ಚಟುವಟಿಕೆಗಳಿಗಾಗಿ ಇಂದಿರಾ ಭವನಗಳನ್ನು ನಿರ್ಮಿಸಲಾಗುವುದು. ಪ್ರತಿಯೊಂದು ಭವನಕ್ಕೂ ರೂ.6 ಲಕ್ಷ ವೆಚ್ಚವಾಗಲಿದೆ. ಈ ವರ್ಷ 100 ಭವನಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಪ್ರತಿಯೊಂದು ಜಿಲ್ಲೆಯಲ್ಲಿ 10 ಭವನಗಳನ್ನು ನಿರ್ಮಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಗೊಲ್ಲ ಜನಾಂಗ ಇರುವ ಚಿತ್ರದುರ್ಗ ಜಿಲ್ಲೆಯಲ್ಲಿ 50 ಭವನಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.<br /> <br /> ಇದೇ 16ರಂದು ಚಿತ್ರದುರ್ಗದಲ್ಲಿ ಕಾಡುಗೊಲ್ಲ ಜನಾಂಗದ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಈ ಜನಾಂಗದ ಬಗ್ಗೆ ಅಧ್ಯಯನ ಮಾಡಿರುವ ತಜ್ಞರು ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾಡುಗೊಲ್ಲ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಸೇರಿಸುವ ಪ್ರಸ್ತಾವ ಸರ್ಕಾರದ ಮುಂದಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ತಿಳಿಸಿದರು.<br /> <br /> ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಕೇಂದ್ರ ಸರ್ಕಾರ ಸಹ ಈ ಪ್ರಕ್ರಿಯೆಗೆ ಅನುಮೋದನೆ ನೀಡಬೇಕು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ‘ಗೊಲ್ಲರಹಟ್ಟಿಗಳಿಗೆ ನಾನು ಭೇಟಿ ನೀಡಿ ಅಲ್ಲಿನ ವಾಸ್ತವ ಸಮಸ್ಯೆಗಳನ್ನು ಅರಿತುಕೊಂಡಿದ್ದೇನೆ. ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿರುವ ಈ ಜನಾಂಗ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಪ್ರಗತಿ ಸಾಧಿಸಬೇಕಾಗಿದೆ. ಈ ಜನಾಂಗವನ್ನು ಸಮಾಜದ ಮುಖ್ಯವಾಹಿನಿಗೆ ತರಲು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗೊಲ್ಲರಹಟ್ಟಿಗಳ ಅಭಿವೃದ್ಧಿಗೆ ₨25 ಕೋಟಿ ಮೀಸಲಿಡಲಾಗಿದೆ’ ಎಂದು ತಿಳಿಸಿದರು.<br /> <br /> ಗೊಲ್ಲರಹಟ್ಟಿಗಳಲ್ಲಿನ ಮಹಿಳೆಯರ ವಿವಿಧ ಚಟುವಟಿಕೆಗಳಿಗಾಗಿ ಇಂದಿರಾ ಭವನಗಳನ್ನು ನಿರ್ಮಿಸಲಾಗುವುದು. ಪ್ರತಿಯೊಂದು ಭವನಕ್ಕೂ ರೂ.6 ಲಕ್ಷ ವೆಚ್ಚವಾಗಲಿದೆ. ಈ ವರ್ಷ 100 ಭವನಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಪ್ರತಿಯೊಂದು ಜಿಲ್ಲೆಯಲ್ಲಿ 10 ಭವನಗಳನ್ನು ನಿರ್ಮಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಗೊಲ್ಲ ಜನಾಂಗ ಇರುವ ಚಿತ್ರದುರ್ಗ ಜಿಲ್ಲೆಯಲ್ಲಿ 50 ಭವನಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.<br /> <br /> ಇದೇ 16ರಂದು ಚಿತ್ರದುರ್ಗದಲ್ಲಿ ಕಾಡುಗೊಲ್ಲ ಜನಾಂಗದ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಈ ಜನಾಂಗದ ಬಗ್ಗೆ ಅಧ್ಯಯನ ಮಾಡಿರುವ ತಜ್ಞರು ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>