<p><strong>ದಾವಣಗೆರೆ: </strong>ರಾಷ್ಟ್ರಕವಿ ಸ್ಥಾನಕ್ಕೆ ಯಾರೂ ಅರ್ಹರಿಲ್ಲ, ರಾಷ್ಟ್ರಕವಿ ಹುದ್ದೆಯೇ ಅನಾವಶ್ಯಕ ಹಾಗೂ ಸಂವಿಧಾನ ವಿರೋಧಿ ಎಂಬ ರಾಜ್ಯ ಸರ್ಕಾರದ ಧೋರಣೆ ಸರಿಯಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪುಂಡಲೀಕ ಹಾಲಂಬಿ ಅಭಿಪ್ರಾಯಪಟ್ಟರು.<br /> <br /> ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದಾವಣಗೆರೆಯ ಕನ್ನಡ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಕನ್ನಡ ರಂಗಭೂಮಿ ಮರುಚಿಂತನೆ’ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕುವೆಂಪು ಅವರ ನಂತರವೂ ರಾಷ್ಟ್ರಕವಿಯ ಸ್ಥಾನವನ್ನು ತುಂಬಬಲ್ಲ ಹಾಗೂ ಅರ್ಹತೆ ಇರುವ ಅನೇಕರು ನಮ್ಮ ನಾಡಿನಲ್ಲಿದ್ದಾರೆ.</p>.<p>ಅವರಲ್ಲಿ ಒಬ್ಬರನ್ನು ರಾಷ್ಟ್ರಕವಿಯನ್ನಾಗಿ ಆಯ್ಕೆ ಮಾಡುವ ಮೂಲಕ ಆ ಸ್ಥಾನದ ಘನತೆಯನ್ನು ಹೆಚ್ಚಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.<br /> <br /> <strong>ಕನ್ನಡ ಮಾಧ್ಯಮ ಕಡ್ಡಾಯ:</strong> ಕನ್ನಡ ಭಾಷೆಗೆ ಆತಂಕದ ದಿನಗಳು ಎದುರಾಗುತ್ತಿವೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮವನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಲೇಬೇಕಿದೆ. ಈ ವಿಚಾರವಾಗಿ ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳಲೇಬೇಕು.<br /> <br /> ಇಲ್ಲವಾದರೆ, ಮುಂದಿನ ಪೀಳಿಗೆಯ ಹೊತ್ತಿಗೆ ಕನ್ನಡ ಭಾಷೆ ನೇಪಥ್ಯಕ್ಕೆ ಸರಿಯುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದರು. ಸಾಹಿತಿ ಬಿ.ಟಿ.ಲಲಿತಾನಾಯಕ ಅವರಿಗೆ ‘ಸಂಗೊಳ್ಳಿ ರಾಯಣ್ಣ ಪ್ರಶಸ್ತಿ’ ನೀಡಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ರಾಷ್ಟ್ರಕವಿ ಸ್ಥಾನಕ್ಕೆ ಯಾರೂ ಅರ್ಹರಿಲ್ಲ, ರಾಷ್ಟ್ರಕವಿ ಹುದ್ದೆಯೇ ಅನಾವಶ್ಯಕ ಹಾಗೂ ಸಂವಿಧಾನ ವಿರೋಧಿ ಎಂಬ ರಾಜ್ಯ ಸರ್ಕಾರದ ಧೋರಣೆ ಸರಿಯಲ್ಲ ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪುಂಡಲೀಕ ಹಾಲಂಬಿ ಅಭಿಪ್ರಾಯಪಟ್ಟರು.<br /> <br /> ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದಾವಣಗೆರೆಯ ಕನ್ನಡ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಕನ್ನಡ ರಂಗಭೂಮಿ ಮರುಚಿಂತನೆ’ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕುವೆಂಪು ಅವರ ನಂತರವೂ ರಾಷ್ಟ್ರಕವಿಯ ಸ್ಥಾನವನ್ನು ತುಂಬಬಲ್ಲ ಹಾಗೂ ಅರ್ಹತೆ ಇರುವ ಅನೇಕರು ನಮ್ಮ ನಾಡಿನಲ್ಲಿದ್ದಾರೆ.</p>.<p>ಅವರಲ್ಲಿ ಒಬ್ಬರನ್ನು ರಾಷ್ಟ್ರಕವಿಯನ್ನಾಗಿ ಆಯ್ಕೆ ಮಾಡುವ ಮೂಲಕ ಆ ಸ್ಥಾನದ ಘನತೆಯನ್ನು ಹೆಚ್ಚಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.<br /> <br /> <strong>ಕನ್ನಡ ಮಾಧ್ಯಮ ಕಡ್ಡಾಯ:</strong> ಕನ್ನಡ ಭಾಷೆಗೆ ಆತಂಕದ ದಿನಗಳು ಎದುರಾಗುತ್ತಿವೆ. ಈ ನಿಟ್ಟಿನಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮವನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಲೇಬೇಕಿದೆ. ಈ ವಿಚಾರವಾಗಿ ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳಲೇಬೇಕು.<br /> <br /> ಇಲ್ಲವಾದರೆ, ಮುಂದಿನ ಪೀಳಿಗೆಯ ಹೊತ್ತಿಗೆ ಕನ್ನಡ ಭಾಷೆ ನೇಪಥ್ಯಕ್ಕೆ ಸರಿಯುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದರು. ಸಾಹಿತಿ ಬಿ.ಟಿ.ಲಲಿತಾನಾಯಕ ಅವರಿಗೆ ‘ಸಂಗೊಳ್ಳಿ ರಾಯಣ್ಣ ಪ್ರಶಸ್ತಿ’ ನೀಡಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>