<p><strong>ಶಿಗ್ಗಾವಿ (ಹಾವೇರಿ ಜಿಲ್ಲೆ)</strong>: ಮರುಳಸಿದ್ಧರು ನೀಡಿರುವ ವಿಶ್ವಬಂಧುತ್ವದ ಸಂದೇಶವನ್ನು ಸಾಕಾರಗೊಳಿಸುವುದರ ಜೊತೆಗೆ ಅದನ್ನು ಜಗತ್ತಿಗೆ ಸಾರುತ್ತಿರುವುದು ತರಳಬಾಳು ಹುಣ್ಣಿಮೆ ಹೆಗ್ಗಳಿಕೆಯಾಗಿದೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ಅಭಿಪ್ರಾಯಪಟ್ಟರು.ಗುರುವಾರ ಆರಂಭವಾದ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಅವರು ಆಶೀರ್ವಚನ ನೀಡಿದರು.<br /> <br /> ಮನುಷ್ಯ– ಮನುಷ್ಯರಲ್ಲಿ ಸಂಬಂಧಗಳು ಕಡಿದು ಹೋಗುತ್ತಿರುವ ಇಂದಿನ ದಿನಗಳಲ್ಲಿ ಜಗತ್ತಿನಲ್ಲಿರುವ ಪ್ರತಿಯೊಬ್ಬರೂ ಒಂದೇ ಎನ್ನುವ ವಿಶ್ವಬಂಧುತ್ವ ಸಂದೇಶ ಹೆಚ್ಚು ಪ್ರಸ್ತುತವಾಗಿದೆ ಎಂದರು.<br /> <br /> ಪ್ರಾಣಿ ಬಲಿಯಂತಹ ಹೀನ ಕೃತ್ಯವನ್ನು 12ನೇ ಶತಮಾನದಲ್ಲಿ ನಿಯಂತ್ರಿಸಿದ ಶ್ರೇಯಸ್ಸು ಮರುಳಸಿದ್ಧರಿಗೆ ಸಲ್ಲುತ್ತದೆ. ಅವರು ಹಾಕಿಕೊಟ್ಟ ಮಾರ್ಗವನ್ನು ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಸರ್ಕಾರಗಳು ಚಿಂತನೆ ನಡಸಬೇಕು ಎಂದು ಸಲಹೆ ಮಾಡಿದರು.<br /> <br /> ಅಜ್ಞಾನ, ಅಂಧಃಕಾರ, ಮೂಢನಂಬಿಕೆಯಂತಹ ಸಾಮಾಜಿಕ ಪಿಡುಗುಗಳಿಂದ ಹೊರಬಂದು, ಪರಿಪೂರ್ಣತೆಯಡೆಗೆ ಸಾಗಿ ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ತರಳಬಾಳು ಹುಣ್ಣಿಮೆ ಸಹಕಾರಿಯಾಗಿದೆ. ಈ ಸಂದೇಶವನ್ನು 21ನೇ ಶತಮಾನದಲ್ಲಿ ಜಗತ್ತಿಗೆ ಪಸರಿಸುವಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯರ ಶ್ರೀಗಳ ಪಾತ್ರ ದೊಡ್ಡದು ಎಂದರು.<br /> <br /> ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಮಾತನಾಡಿ, ಸರ್ವರನ್ನೂ ಮಾನವೀಯ ದೃಷ್ಟಿಯಲ್ಲಿ ಒಂದುಗೂಡಿಸಿ ಈ ಜಗತ್ತಿಗೆ ಸದ್ಧರ್ಮ, ಸಂಸ್ಕಾರವನ್ನು ಸಿರಿಗೆರೆ ಶ್ರೀಮಠ ನೀಡಿದೆ. ಕೇವಲ ಧಾರ್ಮಿಕ ಕ್ಷೇತ್ರಕ್ಕೆ ಅಷ್ಟೇ ಅಲ್ಲ. ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಜೀವ ತುಂಬಿ, ನಮ್ಮಂತಹ ನೂರಾರು ಕಲಾವಿರಿಗೆ ಬದುಕು ಕಟ್ಟಿಕೊಟ್ಟಿದೆ ಎಂದರು.<br /> <br /> ತರಳು–ಬಾಳು ವಿಷಯ ಕುರಿತು ಡಾ. ಲೋಕೇಶ ಅಗಸನಕಟ್ಟಿ ಉಪನ್ಯಾಸ ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರು 9 ದಿನಗಳ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಚಾಲನೆ ನೀಡಿದರು. ಸಾಣೆಹಳ್ಳಿ ಶ್ರೀಗಳು, ಸಂಗನಬಸವ ಶ್ರೀಗಳು, ಸಚಿವ ಎಚ್.ಆಂಜನೇಯ, ಮಾಜಿ ಸಚಿವರಾದ ಸಿ.ಎಂ.ಉದಾಸಿ, ವಿ.ಸೋಮಣ್ಣ ಮುಂತಾದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ (ಹಾವೇರಿ ಜಿಲ್ಲೆ)</strong>: ಮರುಳಸಿದ್ಧರು ನೀಡಿರುವ ವಿಶ್ವಬಂಧುತ್ವದ ಸಂದೇಶವನ್ನು ಸಾಕಾರಗೊಳಿಸುವುದರ ಜೊತೆಗೆ ಅದನ್ನು ಜಗತ್ತಿಗೆ ಸಾರುತ್ತಿರುವುದು ತರಳಬಾಳು ಹುಣ್ಣಿಮೆ ಹೆಗ್ಗಳಿಕೆಯಾಗಿದೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ಅಭಿಪ್ರಾಯಪಟ್ಟರು.ಗುರುವಾರ ಆರಂಭವಾದ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಅವರು ಆಶೀರ್ವಚನ ನೀಡಿದರು.<br /> <br /> ಮನುಷ್ಯ– ಮನುಷ್ಯರಲ್ಲಿ ಸಂಬಂಧಗಳು ಕಡಿದು ಹೋಗುತ್ತಿರುವ ಇಂದಿನ ದಿನಗಳಲ್ಲಿ ಜಗತ್ತಿನಲ್ಲಿರುವ ಪ್ರತಿಯೊಬ್ಬರೂ ಒಂದೇ ಎನ್ನುವ ವಿಶ್ವಬಂಧುತ್ವ ಸಂದೇಶ ಹೆಚ್ಚು ಪ್ರಸ್ತುತವಾಗಿದೆ ಎಂದರು.<br /> <br /> ಪ್ರಾಣಿ ಬಲಿಯಂತಹ ಹೀನ ಕೃತ್ಯವನ್ನು 12ನೇ ಶತಮಾನದಲ್ಲಿ ನಿಯಂತ್ರಿಸಿದ ಶ್ರೇಯಸ್ಸು ಮರುಳಸಿದ್ಧರಿಗೆ ಸಲ್ಲುತ್ತದೆ. ಅವರು ಹಾಕಿಕೊಟ್ಟ ಮಾರ್ಗವನ್ನು ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಸರ್ಕಾರಗಳು ಚಿಂತನೆ ನಡಸಬೇಕು ಎಂದು ಸಲಹೆ ಮಾಡಿದರು.<br /> <br /> ಅಜ್ಞಾನ, ಅಂಧಃಕಾರ, ಮೂಢನಂಬಿಕೆಯಂತಹ ಸಾಮಾಜಿಕ ಪಿಡುಗುಗಳಿಂದ ಹೊರಬಂದು, ಪರಿಪೂರ್ಣತೆಯಡೆಗೆ ಸಾಗಿ ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ತರಳಬಾಳು ಹುಣ್ಣಿಮೆ ಸಹಕಾರಿಯಾಗಿದೆ. ಈ ಸಂದೇಶವನ್ನು 21ನೇ ಶತಮಾನದಲ್ಲಿ ಜಗತ್ತಿಗೆ ಪಸರಿಸುವಲ್ಲಿ ಡಾ.ಶಿವಮೂರ್ತಿ ಶಿವಾಚಾರ್ಯರ ಶ್ರೀಗಳ ಪಾತ್ರ ದೊಡ್ಡದು ಎಂದರು.<br /> <br /> ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಮಾತನಾಡಿ, ಸರ್ವರನ್ನೂ ಮಾನವೀಯ ದೃಷ್ಟಿಯಲ್ಲಿ ಒಂದುಗೂಡಿಸಿ ಈ ಜಗತ್ತಿಗೆ ಸದ್ಧರ್ಮ, ಸಂಸ್ಕಾರವನ್ನು ಸಿರಿಗೆರೆ ಶ್ರೀಮಠ ನೀಡಿದೆ. ಕೇವಲ ಧಾರ್ಮಿಕ ಕ್ಷೇತ್ರಕ್ಕೆ ಅಷ್ಟೇ ಅಲ್ಲ. ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಜೀವ ತುಂಬಿ, ನಮ್ಮಂತಹ ನೂರಾರು ಕಲಾವಿರಿಗೆ ಬದುಕು ಕಟ್ಟಿಕೊಟ್ಟಿದೆ ಎಂದರು.<br /> <br /> ತರಳು–ಬಾಳು ವಿಷಯ ಕುರಿತು ಡಾ. ಲೋಕೇಶ ಅಗಸನಕಟ್ಟಿ ಉಪನ್ಯಾಸ ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗ್ಗಡೆ ಅವರು 9 ದಿನಗಳ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಚಾಲನೆ ನೀಡಿದರು. ಸಾಣೆಹಳ್ಳಿ ಶ್ರೀಗಳು, ಸಂಗನಬಸವ ಶ್ರೀಗಳು, ಸಚಿವ ಎಚ್.ಆಂಜನೇಯ, ಮಾಜಿ ಸಚಿವರಾದ ಸಿ.ಎಂ.ಉದಾಸಿ, ವಿ.ಸೋಮಣ್ಣ ಮುಂತಾದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>