<p><strong>ತಿರುವನಂತಪುರ: </strong>‘ರಾಜ್ಯದ ಹಲವಾರು ಯುವಕರನ್ನು ಐಎಸ್ಐಎಸ್ ಸಂಘಟನೆ ತೀವ್ರಗಾಮಿಗಳನ್ನಾಗಿ ಮಾಡಿರುವುದು ವಾಸ್ತವ ಸಂಗತಿ. ಸಂಘಟನೆಯನ್ನು ಸೇರಿರುವ ಕೆಲವರನ್ನು ಪೊಲೀಸರು ಪತ್ತೆ ಮಾಡಿದ್ದಾರೆ’ ಎಂದು ಕೇರಳ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹೆರಾ ಹೇಳಿದರು.</p>.<p>ಕೇರಳ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಐಎಸ್ ಸಂಘಟನೆಗೆ ಸೇರಿದ ಉಗ್ರರು ಗಣನೀಯ ಸಂಖ್ಯೆಯಲ್ಲಿದ್ದಾರೆ ಎಂಬ ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಭಯೋತ್ಪಾದನೆ ಕುರಿತ ವರದಿಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/india-news/significant-numbers-of-isis-terrorists-in-kerala-karnataka-748007.html" itemprop="url">ಕೇರಳ, ಕರ್ನಾಟಕ ಉಗ್ರರ ನೆಲೆ: ವಿಶ್ವಸಂಸ್ಥೆ ವರದಿ</a></p>.<p>‘ಬಹಳಷ್ಟು ಸಂಖ್ಯೆಯ ಯುವಕರು ರಾಜ್ಯವನ್ನು ತೊರೆದಿದ್ದಾರೆ. ಕೆಲವರು ಮೃತಪಟ್ಟಿದ್ದಾರೆ. ಹಾಗಂತ, ನಾವು ಈ ವಿಷಯವನ್ನು ಅಲಕ್ಷ್ಯ ಮಾಡಿಲ್ಲ. ಐಎಸ್ಐಎಸ್ ಸಂಘಟನೆ ಸೇರಿದವರ ಹಾಗೂ ಸೇರುತ್ತಿರುವವರನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರಿಸಿದ್ದೇವೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕಳೆದ ಕೆಲವು ವರ್ಷಗಳ ಅವಧಿಯಲ್ಲಿ 98 ಜನ ಮಲಯಾಳಿಗಳು ಐಎಸ್ಐಎಸ್ ಸೇರಿದ್ದಾರೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ ಕೇರಳಿಗರೂ ಈ ಸಂಘಟನೆ ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳುತ್ತವೆ. ಅಲ್ಲದೇ, ಎನ್ಕೌಂಟರ್ನಲ್ಲಿ 28 ಜನರು ಸಾವನ್ನಪ್ಪಿದ್ದಾರೆ ಎಂದು ಇವೇ ಮೂಲಗಳು ಹೇಳುತ್ತವೆ.</p>.<p>‘ಉಗ್ರ ಸಂಘಟನೆ ಸೇರುತ್ತಿರುವವರ ಮೇಲೆ ತನಿಖಾ ಸಂಸ್ಥೆಗಳು ನಿಗಾ ಇಟ್ಟಿವೆ. ತೀವ್ರವಾದನ್ನು ಬಿಟ್ಟು, ಮುಖ್ಯವಾಹಿನಿಗೆ ಬರುವಂತೆ ಯುವಕರಿಗೆ ತಿಳಿ ಹೇಳುವ ಕೆಲಸವನ್ನು ಸಹ ಇಲಾಖೆಮಾಡುತ್ತಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ: </strong>‘ರಾಜ್ಯದ ಹಲವಾರು ಯುವಕರನ್ನು ಐಎಸ್ಐಎಸ್ ಸಂಘಟನೆ ತೀವ್ರಗಾಮಿಗಳನ್ನಾಗಿ ಮಾಡಿರುವುದು ವಾಸ್ತವ ಸಂಗತಿ. ಸಂಘಟನೆಯನ್ನು ಸೇರಿರುವ ಕೆಲವರನ್ನು ಪೊಲೀಸರು ಪತ್ತೆ ಮಾಡಿದ್ದಾರೆ’ ಎಂದು ಕೇರಳ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹೆರಾ ಹೇಳಿದರು.</p>.<p>ಕೇರಳ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಐಎಸ್ ಸಂಘಟನೆಗೆ ಸೇರಿದ ಉಗ್ರರು ಗಣನೀಯ ಸಂಖ್ಯೆಯಲ್ಲಿದ್ದಾರೆ ಎಂಬ ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಭಯೋತ್ಪಾದನೆ ಕುರಿತ ವರದಿಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/india-news/significant-numbers-of-isis-terrorists-in-kerala-karnataka-748007.html" itemprop="url">ಕೇರಳ, ಕರ್ನಾಟಕ ಉಗ್ರರ ನೆಲೆ: ವಿಶ್ವಸಂಸ್ಥೆ ವರದಿ</a></p>.<p>‘ಬಹಳಷ್ಟು ಸಂಖ್ಯೆಯ ಯುವಕರು ರಾಜ್ಯವನ್ನು ತೊರೆದಿದ್ದಾರೆ. ಕೆಲವರು ಮೃತಪಟ್ಟಿದ್ದಾರೆ. ಹಾಗಂತ, ನಾವು ಈ ವಿಷಯವನ್ನು ಅಲಕ್ಷ್ಯ ಮಾಡಿಲ್ಲ. ಐಎಸ್ಐಎಸ್ ಸಂಘಟನೆ ಸೇರಿದವರ ಹಾಗೂ ಸೇರುತ್ತಿರುವವರನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರಿಸಿದ್ದೇವೆ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕಳೆದ ಕೆಲವು ವರ್ಷಗಳ ಅವಧಿಯಲ್ಲಿ 98 ಜನ ಮಲಯಾಳಿಗಳು ಐಎಸ್ಐಎಸ್ ಸೇರಿದ್ದಾರೆ. ಕೊಲ್ಲಿ ರಾಷ್ಟ್ರಗಳಲ್ಲಿ ಇರುವ ಕೇರಳಿಗರೂ ಈ ಸಂಘಟನೆ ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳುತ್ತವೆ. ಅಲ್ಲದೇ, ಎನ್ಕೌಂಟರ್ನಲ್ಲಿ 28 ಜನರು ಸಾವನ್ನಪ್ಪಿದ್ದಾರೆ ಎಂದು ಇವೇ ಮೂಲಗಳು ಹೇಳುತ್ತವೆ.</p>.<p>‘ಉಗ್ರ ಸಂಘಟನೆ ಸೇರುತ್ತಿರುವವರ ಮೇಲೆ ತನಿಖಾ ಸಂಸ್ಥೆಗಳು ನಿಗಾ ಇಟ್ಟಿವೆ. ತೀವ್ರವಾದನ್ನು ಬಿಟ್ಟು, ಮುಖ್ಯವಾಹಿನಿಗೆ ಬರುವಂತೆ ಯುವಕರಿಗೆ ತಿಳಿ ಹೇಳುವ ಕೆಲಸವನ್ನು ಸಹ ಇಲಾಖೆಮಾಡುತ್ತಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>