<p><strong>ಬೆಂಗಳೂರು: </strong>ಕರ್ತವ್ಯನಿರತ ಕೆಎಸ್ಆರ್ಪಿ (ಕರ್ನಾಟಕ ರಾಜ್ಯ ಮೀಸಲು ಪೊಲೀಸ್) ಮೂರನೇ ಬೆಟಾಲಿಯನ್ ಹೆಡ್ ಕಾನ್ಸ್ಟೆಬಲ್ ಬಂದೂಕಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಗುರುವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಹುಚ್ಚೇಗೌಡ (51) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿ ಮರಣಪತ್ರ ಪತ್ತೆಯಾಗಿಲ್ಲ.</p>.<p>ಮಡಿವಾಳದಲ್ಲಿ ಕೆಎಸ್ಆರ್ಪಿ ಮೂರನೇ ಬೆಟಾಲಿಯನ್ ಹಿಂಭಾಗದಲ್ಲಿರುವ ಶಸ್ತ್ರಾಸ್ತ್ರ, ಮದ್ದು ಗುಂಡುಗಳ ಉಗ್ರಾಣದ ಕಾವಲು ಕರ್ತವ್ಯಕ್ಕೆ ಹುಚ್ಚೇಗೌಡ ಅವರನ್ನು ಬುಧವಾರ ರಾತ್ರಿ ನಿಯೋಜಿಸಲಾಗಿತ್ತು. ಅವರ ಅಧೀನದಲ್ಲಿ ಕಾನ್ಸ್ಟೆಬಲ್ಗಳು ಕರ್ತವ್ಯದಲ್ಲಿದ್ದರು.</p>.<p>ಹುಚ್ಚೇಗೌಡ ಕಚೇರಿಯ ಕೊಠಡಿಯಲ್ಲಿ ಇದ್ದರು. ಕಾನ್ಸ್ಟೆಬಲ್ಗಳು ಹೊರಗಡೆ ಸೆಂಟ್ರಿ ಕೆಲಸದಲ್ಲಿದ್ದರು. ನಸುಕಿನ 4.30 ರ ಸುಮಾರಿಗೆ ಹುಚ್ಚೇಗೌಡ ಅವರಿದ್ದ ಕೊಠಡಿಯಿಂದ ಗುಂಡು ಹಾರಿದ ಶಬ್ದ ಕೇಳಿಸಿದೆ. ಪೊಲೀಸರು ನೋಡಿದಾಗ ತಮ್ಮ ಬಳಿಯಿದ್ದ ಎಸ್ಎಲ್ ಆರ್ ಬಂದೂಕಿನಿಂದ ತಲೆಗೆ ಗುಂಡು ಹೊಡೆದುಕೊಂಡಿರುವುದು ಕಂಡುಬಂದಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ ಎಂದು ಪೊಲೀಸರು ತಿಳಿಸಿದರು.</p>.<p>ಘಟನಾ ಸ್ಥಳಕ್ಕೆಕೆಎಸ್ಆರ್ಪಿಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.</p>.<p>ಕೆಎಸ್ಆರ್ಪಿವಸತಿಗೃಹದಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳ ಜತೆ ಹುಚ್ಚೇಗೌಡ ವಾಸವಿದ್ದರು. ಅವರ ಮಗ ಎಂಟೆಕ್ ಪದವೀಧರ. ಮಗಳು ಎಂಜಿನಿಯರಿಂಗ್ ಓದುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.</p>.<p>’ಹುಚ್ಚೇಗೌಡ ಅತ್ಯಂತ ಸರಳ ಮತ್ತು ಸ್ನೇಹಪರ ವ್ಯಕ್ತಿತ್ವದವರಾಗಿದ್ದರು. ಬೆಟಾಲಿಯನ್ನಲ್ಲೂ ಅವರಿಗೆ ಒಳ್ಳೆಯ ಹೆಸರಿತ್ತು. ಅವರ ಆತ್ಮಹತ್ಯೆ ದಿಗ್ಭ್ರಮೆ ಮೂಡಿಸಿದೆ’ ಎಂದುಕೆಎಸ್ಆರ್ಪಿಅಧಿಕಾರಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕರ್ತವ್ಯನಿರತ ಕೆಎಸ್ಆರ್ಪಿ (ಕರ್ನಾಟಕ ರಾಜ್ಯ ಮೀಸಲು ಪೊಲೀಸ್) ಮೂರನೇ ಬೆಟಾಲಿಯನ್ ಹೆಡ್ ಕಾನ್ಸ್ಟೆಬಲ್ ಬಂದೂಕಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಗುರುವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಹುಚ್ಚೇಗೌಡ (51) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳದಲ್ಲಿ ಮರಣಪತ್ರ ಪತ್ತೆಯಾಗಿಲ್ಲ.</p>.<p>ಮಡಿವಾಳದಲ್ಲಿ ಕೆಎಸ್ಆರ್ಪಿ ಮೂರನೇ ಬೆಟಾಲಿಯನ್ ಹಿಂಭಾಗದಲ್ಲಿರುವ ಶಸ್ತ್ರಾಸ್ತ್ರ, ಮದ್ದು ಗುಂಡುಗಳ ಉಗ್ರಾಣದ ಕಾವಲು ಕರ್ತವ್ಯಕ್ಕೆ ಹುಚ್ಚೇಗೌಡ ಅವರನ್ನು ಬುಧವಾರ ರಾತ್ರಿ ನಿಯೋಜಿಸಲಾಗಿತ್ತು. ಅವರ ಅಧೀನದಲ್ಲಿ ಕಾನ್ಸ್ಟೆಬಲ್ಗಳು ಕರ್ತವ್ಯದಲ್ಲಿದ್ದರು.</p>.<p>ಹುಚ್ಚೇಗೌಡ ಕಚೇರಿಯ ಕೊಠಡಿಯಲ್ಲಿ ಇದ್ದರು. ಕಾನ್ಸ್ಟೆಬಲ್ಗಳು ಹೊರಗಡೆ ಸೆಂಟ್ರಿ ಕೆಲಸದಲ್ಲಿದ್ದರು. ನಸುಕಿನ 4.30 ರ ಸುಮಾರಿಗೆ ಹುಚ್ಚೇಗೌಡ ಅವರಿದ್ದ ಕೊಠಡಿಯಿಂದ ಗುಂಡು ಹಾರಿದ ಶಬ್ದ ಕೇಳಿಸಿದೆ. ಪೊಲೀಸರು ನೋಡಿದಾಗ ತಮ್ಮ ಬಳಿಯಿದ್ದ ಎಸ್ಎಲ್ ಆರ್ ಬಂದೂಕಿನಿಂದ ತಲೆಗೆ ಗುಂಡು ಹೊಡೆದುಕೊಂಡಿರುವುದು ಕಂಡುಬಂದಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ ಎಂದು ಪೊಲೀಸರು ತಿಳಿಸಿದರು.</p>.<p>ಘಟನಾ ಸ್ಥಳಕ್ಕೆಕೆಎಸ್ಆರ್ಪಿಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.</p>.<p>ಕೆಎಸ್ಆರ್ಪಿವಸತಿಗೃಹದಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳ ಜತೆ ಹುಚ್ಚೇಗೌಡ ವಾಸವಿದ್ದರು. ಅವರ ಮಗ ಎಂಟೆಕ್ ಪದವೀಧರ. ಮಗಳು ಎಂಜಿನಿಯರಿಂಗ್ ಓದುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.</p>.<p>’ಹುಚ್ಚೇಗೌಡ ಅತ್ಯಂತ ಸರಳ ಮತ್ತು ಸ್ನೇಹಪರ ವ್ಯಕ್ತಿತ್ವದವರಾಗಿದ್ದರು. ಬೆಟಾಲಿಯನ್ನಲ್ಲೂ ಅವರಿಗೆ ಒಳ್ಳೆಯ ಹೆಸರಿತ್ತು. ಅವರ ಆತ್ಮಹತ್ಯೆ ದಿಗ್ಭ್ರಮೆ ಮೂಡಿಸಿದೆ’ ಎಂದುಕೆಎಸ್ಆರ್ಪಿಅಧಿಕಾರಿಗಳು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>