<p><strong>ದೋಹಾ:</strong> ಕರ್ನಾಟಕ ಸಂಘ ಕತಾರ್ನ 2026–2028 ಅವಧಿಗೆ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕರಿಸಿದ್ದಾರೆ. ಇದರೊಮದಿಗೆ, ಕತಾರ್ನ ಕನ್ನಡ ಸಮುದಾಯದಲ್ಲಿ ಹೊಸದೊಂದು ಅಧ್ಯಾಯ ಶುರುವಾದಂತಾಗಿದೆ.</p><p>'ವಿನಯ ಹಾಗೂ ಬದ್ಧತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ' ಎಂದು ತಿಳಿಸಿರುವ ಸುಬ್ರಹ್ಮಣ್ಯ, ‘ಸಮುದಾಯಕ್ಕೆ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ಗೌರವದ ಸಂಗತಿ‘ ಎಂದಿದ್ದಾರೆ.</p><p>ನಿಕಟ ಪೂರ್ವ ಅಧ್ಯಕ್ಷ ರವಿ ಶೆಟ್ಟಿ ಮತ್ತು 2024ರಿಂದ 2026ರ ವರೆಗೆ ಇದ್ದ ಆಡಳಿತ ಸಮಿತಿಯ ಕೊಡುಗೆಯನ್ನೂ ಸ್ಮರಿಸಿ, ಸಂಘದ ಅಭಿವೃದ್ದಿಗೆ ಬಲವಾದ ಅಡಿಪಾಯ ಹಾಕಿಕೊಟ್ಟದ್ದಕ್ಕೆ ಶ್ಲಾಘಿಸಿದ್ದಾರೆ.</p><p>ಸಂಘದ ಎಲ್ಲಾ ಸಮಿತಿ ಸದಸ್ಯರು, ಸಮುದಾಯ ಮುಖಂಡರು ಮತ್ತು ಸದಸ್ಯರ ನಿರಂತರ ಸೇವೆ ಹಾಗೂ ಸಮರ್ಪಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p><p>ಮುಂದಿನ ಅವಧಿಯಲ್ಲಿ ಕನ್ನಡ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದು, ಸಂಸ್ಕೃತಿಯನ್ನು ಉತ್ತೇಜಿಸುವುದು ಮತ್ತು ಎಲ್ಲರಿಗೂ ಅರ್ಥಪೂರ್ಣ ಅವಕಾಶಗಳನ್ನು ಸೃಷ್ಟಿಸುವುದು ತಮ್ಮ ಗುರಿಯಾಗಿದೆ ಎಂದು ತಿಳಿಸಿದ್ದಾರೆ.</p><p>'ಒಗ್ಗಟ್ಟಿನಿಂದ ಮತ್ತು ಉದ್ದೇಶಪೂರ್ವಕವಾಗಿ ನಾವು ಮುಂದೆ ಸಾಗಿದರೆ, ಇನ್ನಷ್ಟು ಮೈಲಿಗಲ್ಲುಗಳನ್ನು ಸಾಧಿಸಬಹುದು' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p>ಕರ್ನಾಟಕ ಸಂಘ ಕತಾರ್, ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಾಯಕ ಸಂಸ್ಥೆಯಾಗಿದ್ದು, ಕತಾರ್ನ ಕನ್ನಡಿಗರ ಪ್ರಮುಖ ವೇದಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೋಹಾ:</strong> ಕರ್ನಾಟಕ ಸಂಘ ಕತಾರ್ನ 2026–2028 ಅವಧಿಗೆ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅಧಿಕಾರ ಸ್ವೀಕರಿಸಿದ್ದಾರೆ. ಇದರೊಮದಿಗೆ, ಕತಾರ್ನ ಕನ್ನಡ ಸಮುದಾಯದಲ್ಲಿ ಹೊಸದೊಂದು ಅಧ್ಯಾಯ ಶುರುವಾದಂತಾಗಿದೆ.</p><p>'ವಿನಯ ಹಾಗೂ ಬದ್ಧತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ' ಎಂದು ತಿಳಿಸಿರುವ ಸುಬ್ರಹ್ಮಣ್ಯ, ‘ಸಮುದಾಯಕ್ಕೆ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ಗೌರವದ ಸಂಗತಿ‘ ಎಂದಿದ್ದಾರೆ.</p><p>ನಿಕಟ ಪೂರ್ವ ಅಧ್ಯಕ್ಷ ರವಿ ಶೆಟ್ಟಿ ಮತ್ತು 2024ರಿಂದ 2026ರ ವರೆಗೆ ಇದ್ದ ಆಡಳಿತ ಸಮಿತಿಯ ಕೊಡುಗೆಯನ್ನೂ ಸ್ಮರಿಸಿ, ಸಂಘದ ಅಭಿವೃದ್ದಿಗೆ ಬಲವಾದ ಅಡಿಪಾಯ ಹಾಕಿಕೊಟ್ಟದ್ದಕ್ಕೆ ಶ್ಲಾಘಿಸಿದ್ದಾರೆ.</p><p>ಸಂಘದ ಎಲ್ಲಾ ಸಮಿತಿ ಸದಸ್ಯರು, ಸಮುದಾಯ ಮುಖಂಡರು ಮತ್ತು ಸದಸ್ಯರ ನಿರಂತರ ಸೇವೆ ಹಾಗೂ ಸಮರ್ಪಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p><p>ಮುಂದಿನ ಅವಧಿಯಲ್ಲಿ ಕನ್ನಡ ಸಮುದಾಯದ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದು, ಸಂಸ್ಕೃತಿಯನ್ನು ಉತ್ತೇಜಿಸುವುದು ಮತ್ತು ಎಲ್ಲರಿಗೂ ಅರ್ಥಪೂರ್ಣ ಅವಕಾಶಗಳನ್ನು ಸೃಷ್ಟಿಸುವುದು ತಮ್ಮ ಗುರಿಯಾಗಿದೆ ಎಂದು ತಿಳಿಸಿದ್ದಾರೆ.</p><p>'ಒಗ್ಗಟ್ಟಿನಿಂದ ಮತ್ತು ಉದ್ದೇಶಪೂರ್ವಕವಾಗಿ ನಾವು ಮುಂದೆ ಸಾಗಿದರೆ, ಇನ್ನಷ್ಟು ಮೈಲಿಗಲ್ಲುಗಳನ್ನು ಸಾಧಿಸಬಹುದು' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p><p>ಕರ್ನಾಟಕ ಸಂಘ ಕತಾರ್, ಭಾರತೀಯ ರಾಯಭಾರ ಕಚೇರಿಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಸಹಾಯಕ ಸಂಸ್ಥೆಯಾಗಿದ್ದು, ಕತಾರ್ನ ಕನ್ನಡಿಗರ ಪ್ರಮುಖ ವೇದಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>