<p><strong>ಬರ್ಲಿನ್ನ ಹರ್ಟೀ:</strong> ಜರ್ಮನಿಯ ಪ್ರವಾಸದಲ್ಲಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಅಲ್ಲಿನ ಚಿಂತಕರು, ತಜ್ಞರೊಂದಿಗೆ ಸಂವಾದ ನಡೆಸಿದರು. ವೇಗವಾಗಿ ಬದಲಾಗುತ್ತಿರುವ ಜಾಗತಿಕ ಸನ್ನಿವೇಶದಲ್ಲಿ ಭಾರತದ ಪಥದ ಬಗ್ಗೆ ಮಾತನಾಡಿದರು.</p>.<p>ಬರ್ಲಿನ್ನ ಹರ್ಟೀ ಶಾಲೆಯಲ್ಲಿ ವಿದ್ಯಾರ್ಥಿಗಳು, ವಿದ್ವಾಂಸರು ಮತ್ತು ಶಿಕ್ಷಣ ತಜ್ಞರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ‘ಪ್ರಜಾಪ್ರಭುತ್ವವು ಕೇವಲ ಸರ್ಕಾರಿ ವ್ಯವಸ್ಥೆಯಲ್ಲ, ಅದು ತೊಡಗಿಸಿಕೊಳ್ಳುವಿಕೆ, ಜವಾಬ್ದಾರಿ ಮತ್ತು ಹೊಣೆಗಾರಿಕೆಯ ನಿರಂತರ ಪ್ರಕ್ರಿಯೆಯಾಗಿದೆ’ ಎಂದು ಹೇಳಿದರು.</p>.<p>ಸದ್ಯದ ಜಾಗತಿಕ ಸನ್ನಿವೇಶದಲ್ಲಿ ನಾಯಕತ್ವ ಮತ್ತು ಪ್ರಜಾಪ್ರಭುತ್ವದ ಪ್ರಾಮುಖ್ಯದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸಮಗ್ರ ಮತ್ತು ಸಮಾನ ಶಿಕ್ಷಣದ ಮಹತ್ವ ಹಾಗೂ ಆಳವಾಗಿ ಬೇರೂರಿರುವ ಅಸಮಾನತೆಗಳನ್ನು ಪರಿಹರಿಸಲು ಜಾಗತಿಕ ಸಹಕಾರದ ಅಗತ್ಯವನ್ನು ಒತ್ತಿ ಹೇಳಿದರು.</p>.<p>ಬರ್ಲಿನ್ನಲ್ಲಿ ಸಾಗರೋತ್ತರ ಭಾರತೀಯ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪಕ್ಷವು ಸತ್ಯದ ಪರವಾಗಿ ನಿಂತಿದೆ. ಭಾರತದ ಸತ್ಯವನ್ನು ಸಮರ್ಥಿಸಿಕೊಂಡಿದೆ’ ಎಂದರು.</p>.<p>‘ಸಂಸ್ಕೃತಿಗಳ ಬೆಸುಗೆ’ ಕಾರ್ಯಕ್ರಮದಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಸತ್ಯ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ತಮ್ಮ ಪಕ್ಷಕ್ಕಿರುವ ಬದ್ಧತೆಯನ್ನು ಪುನರುಚ್ಚರಿಸಿದರು.</p>.<p>ರಾಹುಲ್ ಅವರು ಜರ್ಮನಿಯ ಮಾಜಿ ಚಾನ್ಸೆಲರ್ ಒಲಾಫ್ ಶ್ಕೋಲ್ಜ್ ಅವರೊಂದಿಗೆ ಔತಣಕೂಟದ ಬಳಿಕ ಚರ್ಚೆ ನಡೆಸಿದರು.</p>.<p>ಇಬ್ಬರು ನಾಯಕರು ಜಾಗತಿಕ ವ್ಯವಹಾರಗಳು, ವ್ಯಾಪಾರ ಮತ್ತು ಬದಲಾಗುತ್ತಿರುವ ಜಗತ್ತಿನಲ್ಲಿ ಭಾರತ–ಜರ್ಮನಿ ಸಂಬಂಧಗಳನ್ನು ಬಲಪಡಿಸುವ ಬಗ್ಗೆ ಸುದೀರ್ಘವಾಗಿ ಮಾತನಾಡಿದರು ಎಂದು ಸಾಗರೋತ್ತರ ಭಾರತೀಯ ಕಾಂಗ್ರೆಸ್ ‘ಎಕ್ಸ್’ನಲ್ಲಿ ತಿಳಿಸಿದೆ.</p>.<p>ಜರ್ಮನಿಯ ಪರಿಸರ ಮತ್ತು ಹವಾಮಾನ ಸಂರಕ್ಷಣಾ ಸಚಿವ ಕರ್ಸ್ಟನ್ ಶ್ನೇಯ್ಡರ್ ಅವರೊಂದಿಗೂ ಚರ್ಚಿಸಿದರು. ಹವಾಮಾನ ಬದಲಾವಣೆ ಸವಾಲುಗಳನ್ನು ಮತ್ತು ಭವಿಷ್ಯಕ್ಕೆ ಸುಸ್ಥಿರ, ಜನ–ಕೇಂದ್ರಿತ ಪರಿಹಾರಗಳು ಎಷ್ಟು ನಿರ್ಣಾಯಕವಾಗಿವೆ ಎಂಬುದರ ಕುರಿತು ಚರ್ಚಿಸಿದರು ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬರ್ಲಿನ್ನ ಹರ್ಟೀ:</strong> ಜರ್ಮನಿಯ ಪ್ರವಾಸದಲ್ಲಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಅಲ್ಲಿನ ಚಿಂತಕರು, ತಜ್ಞರೊಂದಿಗೆ ಸಂವಾದ ನಡೆಸಿದರು. ವೇಗವಾಗಿ ಬದಲಾಗುತ್ತಿರುವ ಜಾಗತಿಕ ಸನ್ನಿವೇಶದಲ್ಲಿ ಭಾರತದ ಪಥದ ಬಗ್ಗೆ ಮಾತನಾಡಿದರು.</p>.<p>ಬರ್ಲಿನ್ನ ಹರ್ಟೀ ಶಾಲೆಯಲ್ಲಿ ವಿದ್ಯಾರ್ಥಿಗಳು, ವಿದ್ವಾಂಸರು ಮತ್ತು ಶಿಕ್ಷಣ ತಜ್ಞರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ‘ಪ್ರಜಾಪ್ರಭುತ್ವವು ಕೇವಲ ಸರ್ಕಾರಿ ವ್ಯವಸ್ಥೆಯಲ್ಲ, ಅದು ತೊಡಗಿಸಿಕೊಳ್ಳುವಿಕೆ, ಜವಾಬ್ದಾರಿ ಮತ್ತು ಹೊಣೆಗಾರಿಕೆಯ ನಿರಂತರ ಪ್ರಕ್ರಿಯೆಯಾಗಿದೆ’ ಎಂದು ಹೇಳಿದರು.</p>.<p>ಸದ್ಯದ ಜಾಗತಿಕ ಸನ್ನಿವೇಶದಲ್ಲಿ ನಾಯಕತ್ವ ಮತ್ತು ಪ್ರಜಾಪ್ರಭುತ್ವದ ಪ್ರಾಮುಖ್ಯದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಸಮಗ್ರ ಮತ್ತು ಸಮಾನ ಶಿಕ್ಷಣದ ಮಹತ್ವ ಹಾಗೂ ಆಳವಾಗಿ ಬೇರೂರಿರುವ ಅಸಮಾನತೆಗಳನ್ನು ಪರಿಹರಿಸಲು ಜಾಗತಿಕ ಸಹಕಾರದ ಅಗತ್ಯವನ್ನು ಒತ್ತಿ ಹೇಳಿದರು.</p>.<p>ಬರ್ಲಿನ್ನಲ್ಲಿ ಸಾಗರೋತ್ತರ ಭಾರತೀಯ ಕಾಂಗ್ರೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪಕ್ಷವು ಸತ್ಯದ ಪರವಾಗಿ ನಿಂತಿದೆ. ಭಾರತದ ಸತ್ಯವನ್ನು ಸಮರ್ಥಿಸಿಕೊಂಡಿದೆ’ ಎಂದರು.</p>.<p>‘ಸಂಸ್ಕೃತಿಗಳ ಬೆಸುಗೆ’ ಕಾರ್ಯಕ್ರಮದಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಸತ್ಯ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳಿಗೆ ತಮ್ಮ ಪಕ್ಷಕ್ಕಿರುವ ಬದ್ಧತೆಯನ್ನು ಪುನರುಚ್ಚರಿಸಿದರು.</p>.<p>ರಾಹುಲ್ ಅವರು ಜರ್ಮನಿಯ ಮಾಜಿ ಚಾನ್ಸೆಲರ್ ಒಲಾಫ್ ಶ್ಕೋಲ್ಜ್ ಅವರೊಂದಿಗೆ ಔತಣಕೂಟದ ಬಳಿಕ ಚರ್ಚೆ ನಡೆಸಿದರು.</p>.<p>ಇಬ್ಬರು ನಾಯಕರು ಜಾಗತಿಕ ವ್ಯವಹಾರಗಳು, ವ್ಯಾಪಾರ ಮತ್ತು ಬದಲಾಗುತ್ತಿರುವ ಜಗತ್ತಿನಲ್ಲಿ ಭಾರತ–ಜರ್ಮನಿ ಸಂಬಂಧಗಳನ್ನು ಬಲಪಡಿಸುವ ಬಗ್ಗೆ ಸುದೀರ್ಘವಾಗಿ ಮಾತನಾಡಿದರು ಎಂದು ಸಾಗರೋತ್ತರ ಭಾರತೀಯ ಕಾಂಗ್ರೆಸ್ ‘ಎಕ್ಸ್’ನಲ್ಲಿ ತಿಳಿಸಿದೆ.</p>.<p>ಜರ್ಮನಿಯ ಪರಿಸರ ಮತ್ತು ಹವಾಮಾನ ಸಂರಕ್ಷಣಾ ಸಚಿವ ಕರ್ಸ್ಟನ್ ಶ್ನೇಯ್ಡರ್ ಅವರೊಂದಿಗೂ ಚರ್ಚಿಸಿದರು. ಹವಾಮಾನ ಬದಲಾವಣೆ ಸವಾಲುಗಳನ್ನು ಮತ್ತು ಭವಿಷ್ಯಕ್ಕೆ ಸುಸ್ಥಿರ, ಜನ–ಕೇಂದ್ರಿತ ಪರಿಹಾರಗಳು ಎಷ್ಟು ನಿರ್ಣಾಯಕವಾಗಿವೆ ಎಂಬುದರ ಕುರಿತು ಚರ್ಚಿಸಿದರು ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>