ಹೊಸಕೋಟೆ: ತಾಲ್ಲೂಕಿನ ಪ್ರಮುಖ ಹೋಬಳಿ ಕೇಂದ್ರವಾಗಿರುವ ನಂದಗುಡಿಯಲ್ಲಿ ಸಾರ್ವಜನಿಕ ಶೌಚಾಲಯವಿಲ್ಲದೆ ಜನರು ಪರದಾಡುವಂತಾಗಿದೆ.
ದೇಶದ ಪ್ರತಿಯೊಂದು ಮನೆಯೂ ಶೌಚಾಲಯವನ್ನು ಹೊಂದಿರಬೇಕು ಎಂಬ ಆಶಯದಂತೆ ಸ್ವಚ್ಛ ಭಾರತ್ ಮಿಷನ್ ಯೋಜನೆಯ ಅಡಿಯಲ್ಲಿ ನಗರ, ಗ್ರಾಮೀಣ ಭಾಗದ ಪ್ರತಿ ಮನೆಗೂ ಶೌಚಾಲಯ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಆದರೆ, ಹೋಬಳಿ ಕೇಂದ್ರ ಎನಿಸಿಕೊಂಡಿರುವ ನಂದಗುಡಿಯಲ್ಲಿ ಸಾರ್ವಜನಿಕರಿಗೆ ಶೌಚಾಲಯವೇ ಇಲ್ಲದಂತಾಗಿದ್ದು, ಇದರಿಂದ ಮಲ ಮೂತ್ರ ವಿಸರ್ಜನೆಗೆ ಬಯಲೇ ಗತಿ ಎನ್ನುವಂತಾಗಿದೆ.