ಚಿತ್ರನಟ ಹಾಗೂ ನಿರ್ದೇಶಕ ರವಿತೇಜ ಮಾತನಾಡಿ, ‘ಪೋಷಕರು ಮಕ್ಕಳಿಗೆ ಓದಿನ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಕ್ರೀಡೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹ ನೀಡಬೇಕಿದೆ. ಆ ಕ್ಷೇತ್ರದಲ್ಲಿಯೂ ಕೂಡ ಬದುಕು ರೂಪಿಸಿಕೊಳ್ಳಲು ಈಗ ವಿಪುಲ ಅವಕಾಶಗಳಿವೆ. ಪೋಷಕರ ಹೆಸರು ತಂದುಕೊಡುವಂತಹ ಸಾಧನೆಗಳನ್ನು ಮಾಡಲು ಮಕ್ಕಳಲ್ಲಿ ಸ್ಫೂರ್ತಿ ತುಂಬಬೇಕಿದೆ’ ಎಂದರು.
ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವೇದಿಕೆಯ ಗಣ್ಯರು ಬೆಳ್ಳಿ ಮಹೋತ್ಸವದ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದರು.ಬೆಳ್ಳಿ ಮಹೋತ್ಸವದ ಪ್ರಯುಕ್ತ ಬೆಳಿಗ್ಗೆ ನಡೆದ ಪೂಜಾ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಬಿಷಪ್ ಡಾ.ಟಿ.ಅಂತೋನಿ ಸ್ವಾಮಿ ಅವರು ಇತರ ಧರ್ಮಗುರುಗಳೊಂದಿಗೆ ದಿವ್ಯ ಬಲಿಪೂಜೆ ಅರ್ಪಿಸಿದರು.
ಬಣಕಲ್ ಚರ್ಚ್ನ ಧರ್ಮಗುರುಗಳಾದ ಫಾದರ್ ಪ್ರೇಮ್ ಲಾರೆನ್ಸ್ ಡಿಸೋಜ, ಪ್ರಾಂಶುಪಾಲೆ ಹಿಲ್ಡಾ ಲೋಬೊ, ನಿಕಟಪೂರ್ವ ಪ್ರಾಂಶುಪಾಲೆ ಸಿಸ್ಟರ್ ಜಯರಾಣಿ, ಬ್ಲ್ಯಾಂಚ್ ಕೊರೆಯ, ಸಿಸ್ಟರ್ ದೀಪ್ತಿ, ಸಿಸ್ಟರ್ ಮೇರಿ ಮಾರ್ಗರೇಟ್, ಸಿಸ್ಟರ್ ನಿರ್ಮಲ, ಸಿಸ್ಟರ್ ಎಲಿಜಬೆತ್ ಲೋಬೊ, ಸಿಸ್ಟರ್ ವಿಮಲರಾಣಿ ಇದ್ದರು.