<p><strong>ಪೇಶಾವರ:</strong> ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಹಠಾತ್ ಪ್ರವಾಹ ಉಂಟಾಗಿದೆ. ಪ್ರವಾಹದ ನೀರು ಮನೆಯೊಂದರ ತಳಮಹಡಿಗೆ ನುಗಿದ ಪರಿಣಾಮ 6 ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪೇಶಾವರದಿಂದ ದಕ್ಷಿಣಕ್ಕೆ 35 ಕಿಲೋಮೀಟರ್ ದೂರದಲ್ಲಿರುವ ಕೊಹತ್ ಜಿಲ್ಲೆಯ ದರ್ರಾ ಆದಮ್ ಖೇಲ್ ತೆಹಸಿಲ್ನಲ್ಲಿ ಈ ಘಟನೆ ನಡೆದಿದೆ.</p>.<p>ಪ್ರವಾಹದ ಸಂದರ್ಭದಲ್ಲಿ ಕುಟುಂಬವು ತಳಮಹಡಿಯಲ್ಲಿ ಸಿಲುಕಿತ್ತು. ನಂತರ ಹೊರಬರಲು ಸಾಧ್ಯವಾಗದೆ ದುರಂತ ಸಂಭವಿಸಿದೆ. 6 ಮಕ್ಕಳು, ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತಪಟ್ಟಿದ್ದಾರೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.</p>.<p>ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡಗಳು ಮೃತದೇಹಗಳನ್ನು ಹೊರತೆಗೆದ್ದಿದ್ದು, ಕೊಹತ್ನಲ್ಲಿರುವ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಅಲಿ ಅಮೀನ್ ಗಂದಪುರ್ ಸಾವಿನ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.</p>.ಪಾಕಿಸ್ತಾನ: ಧಾರಾಕಾರ ಮಳೆಗೆ 19 ಬಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೇಶಾವರ:</strong> ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಹಠಾತ್ ಪ್ರವಾಹ ಉಂಟಾಗಿದೆ. ಪ್ರವಾಹದ ನೀರು ಮನೆಯೊಂದರ ತಳಮಹಡಿಗೆ ನುಗಿದ ಪರಿಣಾಮ 6 ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಪೇಶಾವರದಿಂದ ದಕ್ಷಿಣಕ್ಕೆ 35 ಕಿಲೋಮೀಟರ್ ದೂರದಲ್ಲಿರುವ ಕೊಹತ್ ಜಿಲ್ಲೆಯ ದರ್ರಾ ಆದಮ್ ಖೇಲ್ ತೆಹಸಿಲ್ನಲ್ಲಿ ಈ ಘಟನೆ ನಡೆದಿದೆ.</p>.<p>ಪ್ರವಾಹದ ಸಂದರ್ಭದಲ್ಲಿ ಕುಟುಂಬವು ತಳಮಹಡಿಯಲ್ಲಿ ಸಿಲುಕಿತ್ತು. ನಂತರ ಹೊರಬರಲು ಸಾಧ್ಯವಾಗದೆ ದುರಂತ ಸಂಭವಿಸಿದೆ. 6 ಮಕ್ಕಳು, ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮೃತಪಟ್ಟಿದ್ದಾರೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.</p>.<p>ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡಗಳು ಮೃತದೇಹಗಳನ್ನು ಹೊರತೆಗೆದ್ದಿದ್ದು, ಕೊಹತ್ನಲ್ಲಿರುವ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿ ಅಲಿ ಅಮೀನ್ ಗಂದಪುರ್ ಸಾವಿನ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.</p>.ಪಾಕಿಸ್ತಾನ: ಧಾರಾಕಾರ ಮಳೆಗೆ 19 ಬಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>