ವಿಶ್ವಸಂಸ್ಥೆ: ಕೊರೊನಾ ಸಾಂಕ್ರಾಮಿಕದಿಂದ ಉಂಟಾದ ಹಣದುಬ್ಬರ, ಉಕ್ರೇನ್–ರಷ್ಯಾ ಯುದ್ಧದಿಂದಾಗಿ ಕಳೆದ ಮೂರು ವರ್ಷಗಳಲ್ಲಿ 16.5 ಕೋಟಿ ಜನರು ಬಡತನದ ಕೂಪಕ್ಕೆ ತಳ್ಳಲ್ಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಗುರುವಾರ ತಿಳಿಸಿದೆ. ಹಾಗೆಯೇ ಅಭಿವೃದ್ಧಿಶೀಲ ದೇಶಗಳು ಸಾಲದ ಮರುಪಾವತಿಗೆ ಸ್ವಲ್ಪ ಕಾಲ ವಿರಾಮ ನೀಡಬೇಕು ಮತ್ತು ಆ ಹಣವನ್ನು ಆರ್ಥಿಕ ಸಾಮಾಜಿಕ ಖರ್ಚುವೆಚ್ಚಕ್ಕೆ ವಿನಿಯೋಗ ಮಾಡಬೇಕು ಎಂದು ಸಲಹೆ ನೀಡಿದೆ.