<p><strong>ಕೊಲಂಬೊ</strong>: ಶ್ರೀಲಂಕಾದ ಜಲ ಪ್ರದೇಶದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ 18 ಮಂದಿ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದು, 3 ಮೀನುಗಾರಿಕಾ ಹಡಗುಗಳನ್ನು ಜಪ್ತಿ ಮಾಡಲಾಗಿದೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ.</p><p>ಶನಿವಾರ ರಾತ್ರಿಯ ಶೋಧ ಕಾರ್ಯಾಚರಣೆ ವೇಳೆ ಉತ್ತರ ಸಮುದ್ರದ ನೆಡುಂತೀವು ದ್ವೀಪದ ಸಮೀಪ ಮೀನುಗಾರರನ್ನು ಬಂಧಿಸಲಾಗಿದೆ. </p><p>ಬಂಧಿತರನ್ನು ಕಂಕೆಸಂತುರೈ ಮೀನುಗಾರಿಕಾ ಬಂದರಿಗೆ ಕರೆದೊಯ್ದು ಮುಂದಿನ ಕಾನೂನು ಪ್ರಕ್ರಿಯೆ ನಡೆಸುವುದಾಗಿ ನೌಕಾಪಡೆಯ ವಕ್ತಾರ ಕ್ಯಾಪ್ಟನ್ ಗಯನ್ ವಿಕ್ರಮಸೂರ್ಯ ತಿಳಿಸಿದ್ದಾರೆ.</p><p>ತಮ್ಮ ದೇಶಕ್ಕೆ ಸೇರಿದ ಜಲ ಪ್ರದೇಶದಲ್ಲಿ ಮೀನುಗಾರಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಳೆದ ವಾರ ನಾಲ್ವರು ಭಾರತೀಯ ಮೀನುಗಾರರನ್ನು ಶ್ರೀಲಂಕಾ ಬಂಧಿಸಿತ್ತು.</p><p>ಈ ಹೊಸ ಪ್ರಕರಣಗಳನ್ನು ಹೊರತುಪಡಿಸಿ, ಅಕ್ರಮ ಮೀನುಗಾರಿಕೆ ಆರೋಪದಡಿ ಈ ವರ್ಷ 180 ಮೀನುಗಾರರನ್ನು ಬಂಧಿಸಲಾಗಿದ್ದು, 25 ಮೀನುಗಾರಿಕಾ ಬೋಟ್ಗಳನ್ನು ಶ್ರೀಲಂಕಾ ನೌಕಾಪಡೆ ವಶಕ್ಕೆ ಪಡೆದಿದೆ ಎಂದು ಶ್ರೀಲಂಕಾ ಅಧಿಕಾರಿಗಳು ತಿಳಿಸಿದ್ದಾರೆ.</p><p>2023ರಲ್ಲೂ 240 ಮಂದಿ ಬಂಧನವಾಗಿದ್ದರು ಎಂದು ಅವರು ತಿಳಿಸಿದ್ದಾರೆ.</p><p>ಈ ಎಲ್ಲರನ್ನು ತಮಿಳುನಾಡು ಮತ್ತು ಶ್ರೀಲಂಕಾವನ್ನು ಬೇರ್ಪಡಿಸುವ ಪಾಕ್ ಜಲಸಂಧಿ ಬಳಿಯೇ ಬಂಧಿಸಲಾಗಿದೆ. ಎರಡೂ ರಾಷ್ಟ್ರಗಳ ಮೀನುಗಾರಿಕೆಗೆ ಸಮೃದ್ಧ ಪ್ರದೇಶ ಇದಾಗಿದೆ.</p><p>ಮೀನುಗಾರರ ವಿವಾದವು ಭಾರತ ಮತ್ತು ಶ್ರೀಲಂಕಾ ಬಾಂಧವ್ಯಕ್ಕೆ ತೊಡಲಾಗಿದೆ ಎಂದು ವರದಿ ತಿಳಿಸಿದೆ. ಕೆಲವೊಮ್ಮೆ, ಶ್ರೀಲಂಕಾದ ನೌಕಾ ಪಡೆ ಅಧಿಕಾರಿಗಳು ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿರುವ ಪ್ರಕರಣಗಳೂ ವರದಿಯಾಗಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ</strong>: ಶ್ರೀಲಂಕಾದ ಜಲ ಪ್ರದೇಶದಲ್ಲಿ ಅಕ್ರಮವಾಗಿ ಮೀನುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ 18 ಮಂದಿ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದು, 3 ಮೀನುಗಾರಿಕಾ ಹಡಗುಗಳನ್ನು ಜಪ್ತಿ ಮಾಡಲಾಗಿದೆ ಎಂದು ಮಾಧ್ಯಮಗಳ ವರದಿ ತಿಳಿಸಿದೆ.</p><p>ಶನಿವಾರ ರಾತ್ರಿಯ ಶೋಧ ಕಾರ್ಯಾಚರಣೆ ವೇಳೆ ಉತ್ತರ ಸಮುದ್ರದ ನೆಡುಂತೀವು ದ್ವೀಪದ ಸಮೀಪ ಮೀನುಗಾರರನ್ನು ಬಂಧಿಸಲಾಗಿದೆ. </p><p>ಬಂಧಿತರನ್ನು ಕಂಕೆಸಂತುರೈ ಮೀನುಗಾರಿಕಾ ಬಂದರಿಗೆ ಕರೆದೊಯ್ದು ಮುಂದಿನ ಕಾನೂನು ಪ್ರಕ್ರಿಯೆ ನಡೆಸುವುದಾಗಿ ನೌಕಾಪಡೆಯ ವಕ್ತಾರ ಕ್ಯಾಪ್ಟನ್ ಗಯನ್ ವಿಕ್ರಮಸೂರ್ಯ ತಿಳಿಸಿದ್ದಾರೆ.</p><p>ತಮ್ಮ ದೇಶಕ್ಕೆ ಸೇರಿದ ಜಲ ಪ್ರದೇಶದಲ್ಲಿ ಮೀನುಗಾರಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಳೆದ ವಾರ ನಾಲ್ವರು ಭಾರತೀಯ ಮೀನುಗಾರರನ್ನು ಶ್ರೀಲಂಕಾ ಬಂಧಿಸಿತ್ತು.</p><p>ಈ ಹೊಸ ಪ್ರಕರಣಗಳನ್ನು ಹೊರತುಪಡಿಸಿ, ಅಕ್ರಮ ಮೀನುಗಾರಿಕೆ ಆರೋಪದಡಿ ಈ ವರ್ಷ 180 ಮೀನುಗಾರರನ್ನು ಬಂಧಿಸಲಾಗಿದ್ದು, 25 ಮೀನುಗಾರಿಕಾ ಬೋಟ್ಗಳನ್ನು ಶ್ರೀಲಂಕಾ ನೌಕಾಪಡೆ ವಶಕ್ಕೆ ಪಡೆದಿದೆ ಎಂದು ಶ್ರೀಲಂಕಾ ಅಧಿಕಾರಿಗಳು ತಿಳಿಸಿದ್ದಾರೆ.</p><p>2023ರಲ್ಲೂ 240 ಮಂದಿ ಬಂಧನವಾಗಿದ್ದರು ಎಂದು ಅವರು ತಿಳಿಸಿದ್ದಾರೆ.</p><p>ಈ ಎಲ್ಲರನ್ನು ತಮಿಳುನಾಡು ಮತ್ತು ಶ್ರೀಲಂಕಾವನ್ನು ಬೇರ್ಪಡಿಸುವ ಪಾಕ್ ಜಲಸಂಧಿ ಬಳಿಯೇ ಬಂಧಿಸಲಾಗಿದೆ. ಎರಡೂ ರಾಷ್ಟ್ರಗಳ ಮೀನುಗಾರಿಕೆಗೆ ಸಮೃದ್ಧ ಪ್ರದೇಶ ಇದಾಗಿದೆ.</p><p>ಮೀನುಗಾರರ ವಿವಾದವು ಭಾರತ ಮತ್ತು ಶ್ರೀಲಂಕಾ ಬಾಂಧವ್ಯಕ್ಕೆ ತೊಡಲಾಗಿದೆ ಎಂದು ವರದಿ ತಿಳಿಸಿದೆ. ಕೆಲವೊಮ್ಮೆ, ಶ್ರೀಲಂಕಾದ ನೌಕಾ ಪಡೆ ಅಧಿಕಾರಿಗಳು ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿರುವ ಪ್ರಕರಣಗಳೂ ವರದಿಯಾಗಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>