<p><strong>ಖಾರ್ಟೊಮ್: </strong>ಇಲ್ಲಿನ ಸೆರಾಮಿಕ್ ಕಾರ್ಖಾನೆಯಲ್ಲಿ ಎಲ್ಪಿಜಿ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ 18 ಭಾರತೀಯರೂ ಸೇರಿದಂತೆ 23 ಮಂದಿ ಮೃತಪಟ್ಟಿದ್ದಾರೆ ಎಂದು ಸುಡಾನ್ ಪೊಲೀಸರು ತಿಳಿಸಿದ್ದಾರೆ.</p>.<p>ಈ ದುರಂತದಲ್ಲಿ18 ಭಾರತೀಯರು ಮೃತಪಟ್ಟಿರುವುದನ್ನು ಸುಡಾನ್ ಭಾರತೀಯ ರಾಯಭಾರಿ ಕಚೇರಿ ಖಚಿತಪಡಿಸಿದೆ. ಈ ಕಾರ್ಖಾನೆಯಲ್ಲಿ 50ಕ್ಕೂ ಹೆಚ್ಚು ಭಾರತೀಯ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು ಕೆಲ ಭಾರತೀಯ ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಭಾರತೀಯ ಕಾರ್ಮಿಕರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ರಾಯಭಾರಿ ಕಚೇರಿ ಮೂಲಗಳು ತಿಳಿಸಿವೆ.</p>.<p>ಘಟನೆಯಲ್ಲಿ 130 ಜನರು ಗಾಯಗೊಂಡಿದ್ದಾರೆ. ಇವರಲ್ಲಿ 7 ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸುಡಾನ್ನ ಸರ್ಕಾರಿ ವಕ್ತಾರರು ತಿಳಿಸಿದ್ದಾರೆ. ಮೃತ ಭಾರತೀಯರನ್ನು ಗುರುತು ಹಚ್ಚುವ ಕಾರ್ಯ ನಡೆಯತ್ತಿದೆ ಎಂದು ರಾಯಭಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ದುರಂತ ನಡೆದ ಸ್ಥಳದಲ್ಲಿ ಅಗ್ನಿ ಸುರಕ್ಷತಾ ಕ್ರಮ ಇರದಿದ್ದ ಕಾರಣ ಹೆಚ್ಚಿನ ಅನಾಹುತ ಸಂಭವಿಸಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.</p>.<p>ಸುಲಭವಾಗಿ ಬೆಂಕಿಗೆ ಹೊತ್ತಿಕೊಳ್ಳುವ ವಸ್ತುಗಳನ್ನು ಯಾವುದೇ ಸುರಕ್ಷತೆಯಿಲ್ಲದೆ ಸಂಗ್ರಹಿಸಿಟ್ಟಿದ್ದು ಈ ದುರಂತಕ್ಕೆ ಕಾರಣ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಾರ್ಟೊಮ್: </strong>ಇಲ್ಲಿನ ಸೆರಾಮಿಕ್ ಕಾರ್ಖಾನೆಯಲ್ಲಿ ಎಲ್ಪಿಜಿ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ 18 ಭಾರತೀಯರೂ ಸೇರಿದಂತೆ 23 ಮಂದಿ ಮೃತಪಟ್ಟಿದ್ದಾರೆ ಎಂದು ಸುಡಾನ್ ಪೊಲೀಸರು ತಿಳಿಸಿದ್ದಾರೆ.</p>.<p>ಈ ದುರಂತದಲ್ಲಿ18 ಭಾರತೀಯರು ಮೃತಪಟ್ಟಿರುವುದನ್ನು ಸುಡಾನ್ ಭಾರತೀಯ ರಾಯಭಾರಿ ಕಚೇರಿ ಖಚಿತಪಡಿಸಿದೆ. ಈ ಕಾರ್ಖಾನೆಯಲ್ಲಿ 50ಕ್ಕೂ ಹೆಚ್ಚು ಭಾರತೀಯ ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು ಕೆಲ ಭಾರತೀಯ ಕಾರ್ಮಿಕರು ನಾಪತ್ತೆಯಾಗಿದ್ದಾರೆ. ಭಾರತೀಯ ಕಾರ್ಮಿಕರ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ರಾಯಭಾರಿ ಕಚೇರಿ ಮೂಲಗಳು ತಿಳಿಸಿವೆ.</p>.<p>ಘಟನೆಯಲ್ಲಿ 130 ಜನರು ಗಾಯಗೊಂಡಿದ್ದಾರೆ. ಇವರಲ್ಲಿ 7 ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸುಡಾನ್ನ ಸರ್ಕಾರಿ ವಕ್ತಾರರು ತಿಳಿಸಿದ್ದಾರೆ. ಮೃತ ಭಾರತೀಯರನ್ನು ಗುರುತು ಹಚ್ಚುವ ಕಾರ್ಯ ನಡೆಯತ್ತಿದೆ ಎಂದು ರಾಯಭಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ದುರಂತ ನಡೆದ ಸ್ಥಳದಲ್ಲಿ ಅಗ್ನಿ ಸುರಕ್ಷತಾ ಕ್ರಮ ಇರದಿದ್ದ ಕಾರಣ ಹೆಚ್ಚಿನ ಅನಾಹುತ ಸಂಭವಿಸಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.</p>.<p>ಸುಲಭವಾಗಿ ಬೆಂಕಿಗೆ ಹೊತ್ತಿಕೊಳ್ಳುವ ವಸ್ತುಗಳನ್ನು ಯಾವುದೇ ಸುರಕ್ಷತೆಯಿಲ್ಲದೆ ಸಂಗ್ರಹಿಸಿಟ್ಟಿದ್ದು ಈ ದುರಂತಕ್ಕೆ ಕಾರಣ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>