<p><strong>ಢಾಕಾ</strong>: ಬಾಂಗ್ಲಾದೇಶದ ರಾಜ್ಬಾಢಿ ಜಿಲ್ಲೆಯಲ್ಲಿ, ಬಸ್ ನದಿಗೆ ಉರುಳಿ 24 ಮಂದಿ ಸಾವಿಗೀಡಾಗಿದ್ದು, ಹಲವರು ಕಾಣೆಯಾಗಿದ್ದಾರೆ. ಇಲ್ಲಿನ ಪದ್ಮಾ ನದಿಯ ದೌಲಾದಿಯಾ ಟರ್ಮಿನಲ್ನಲ್ಲಿ ಲಾಂಚ್ (ಬಾರ್ಜ್) ಮೇಲೆ ಬಸ್ ಏರುತ್ತಿದ್ದ ವೇಳೆ ಬುಧವಾರ ಅವಘಢ ಸಂಭವಿಸಿದೆ. </p>.<p>ಢಾಕಾಗೆ ತೆರಳುತ್ತಿದ್ದ ಬಸ್ನಲ್ಲಿ 40 ಮಂದಿ ಪ್ರಯಾಣಿಕರಿದ್ದರು ಎಂದು ಅಂದಾಜಿಸಲಾಗಿದೆ. ಹಲವು ಪ್ರಯಾಣಿಕರು ಒಂದೇ ಕುಟುಂಬದ ಸದಸ್ಯರು. 11 ಪ್ರಯಾಣಿಕರು ಈಜಿಕೊಂಡು ಹಾಗೂ ಸ್ಥಳೀಯರ ನೆರವಿನಿಂದ ಜೀವ ಉಳಿಸಿಕೊಂಡಿದ್ದಾರೆ. ಈವರೆಗೆ 24 ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದರು. </p>.<p>ಬಸ್ ಅನ್ನು ನದಿಯಿಂದ ಹೊರತೆಗೆಯಲಾಗಿದ್ದು, ಕಾಣೆಯಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಮೃತರಲ್ಲಿ 11 ಮಹಿಳೆಯರು ಹಾಗೂ ಆರು ಮಕ್ಕಳು ಇದ್ದಾರೆ. </p>.<p>‘ಬಸ್ ಇದ್ದ ಲಾಂಚ್ಗೆ ಬೇರೊಂದು ಸಣ್ಣ ಲಾಂಚ್ ಡಿಕ್ಕಿಯಾಯಿತು. ಈ ವೇಳೆ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಅದು ನದಿಗೆ ಉರುಳಿತು. ನಮ್ಮ ಕಣ್ಣು ಮುಂದೆಯೇ ಈ ಘಟನೆ ನಡೆದಿದೆ. ನಮಗೆ ಏನೂ ಮಾಡಲು ಸಾಧ್ಯವಾಗಲಿಲ್ಲ’ ಎಂದು ಟರ್ಮಿನಲ್ನ ಮೇಲ್ವಿಚಾರಕ ಮೊನೀರ್ ಹುಸೇನ್ ಹೇಳಿದರು. </p>.<p>ಪ್ರಧಾನಿ ಪ್ರಧಾನಿ ತಾರಿಕ್ ರೆಹಮಾನ್ ಅವರು ಜಿಲ್ಲಾಡಳಿತದ ಅಧಿಕಾರಿಗಳಿಗೆ ಕರೆ ಮಾಡಿ, ಘಟನೆ ಕುರಿತು ಮಾಹಿತಿ ಪಡೆದಿದ್ದು, ತನಿಖೆಗೆ ಆದೇಶಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ</strong>: ಬಾಂಗ್ಲಾದೇಶದ ರಾಜ್ಬಾಢಿ ಜಿಲ್ಲೆಯಲ್ಲಿ, ಬಸ್ ನದಿಗೆ ಉರುಳಿ 24 ಮಂದಿ ಸಾವಿಗೀಡಾಗಿದ್ದು, ಹಲವರು ಕಾಣೆಯಾಗಿದ್ದಾರೆ. ಇಲ್ಲಿನ ಪದ್ಮಾ ನದಿಯ ದೌಲಾದಿಯಾ ಟರ್ಮಿನಲ್ನಲ್ಲಿ ಲಾಂಚ್ (ಬಾರ್ಜ್) ಮೇಲೆ ಬಸ್ ಏರುತ್ತಿದ್ದ ವೇಳೆ ಬುಧವಾರ ಅವಘಢ ಸಂಭವಿಸಿದೆ. </p>.<p>ಢಾಕಾಗೆ ತೆರಳುತ್ತಿದ್ದ ಬಸ್ನಲ್ಲಿ 40 ಮಂದಿ ಪ್ರಯಾಣಿಕರಿದ್ದರು ಎಂದು ಅಂದಾಜಿಸಲಾಗಿದೆ. ಹಲವು ಪ್ರಯಾಣಿಕರು ಒಂದೇ ಕುಟುಂಬದ ಸದಸ್ಯರು. 11 ಪ್ರಯಾಣಿಕರು ಈಜಿಕೊಂಡು ಹಾಗೂ ಸ್ಥಳೀಯರ ನೆರವಿನಿಂದ ಜೀವ ಉಳಿಸಿಕೊಂಡಿದ್ದಾರೆ. ಈವರೆಗೆ 24 ಶವಗಳನ್ನು ಹೊರತೆಗೆಯಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದರು. </p>.<p>ಬಸ್ ಅನ್ನು ನದಿಯಿಂದ ಹೊರತೆಗೆಯಲಾಗಿದ್ದು, ಕಾಣೆಯಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಮೃತರಲ್ಲಿ 11 ಮಹಿಳೆಯರು ಹಾಗೂ ಆರು ಮಕ್ಕಳು ಇದ್ದಾರೆ. </p>.<p>‘ಬಸ್ ಇದ್ದ ಲಾಂಚ್ಗೆ ಬೇರೊಂದು ಸಣ್ಣ ಲಾಂಚ್ ಡಿಕ್ಕಿಯಾಯಿತು. ಈ ವೇಳೆ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಅದು ನದಿಗೆ ಉರುಳಿತು. ನಮ್ಮ ಕಣ್ಣು ಮುಂದೆಯೇ ಈ ಘಟನೆ ನಡೆದಿದೆ. ನಮಗೆ ಏನೂ ಮಾಡಲು ಸಾಧ್ಯವಾಗಲಿಲ್ಲ’ ಎಂದು ಟರ್ಮಿನಲ್ನ ಮೇಲ್ವಿಚಾರಕ ಮೊನೀರ್ ಹುಸೇನ್ ಹೇಳಿದರು. </p>.<p>ಪ್ರಧಾನಿ ಪ್ರಧಾನಿ ತಾರಿಕ್ ರೆಹಮಾನ್ ಅವರು ಜಿಲ್ಲಾಡಳಿತದ ಅಧಿಕಾರಿಗಳಿಗೆ ಕರೆ ಮಾಡಿ, ಘಟನೆ ಕುರಿತು ಮಾಹಿತಿ ಪಡೆದಿದ್ದು, ತನಿಖೆಗೆ ಆದೇಶಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>