<p><strong>ಲ್ಹೋಕ್ಸುಕೊನ್ (ಇಂಡೋನೇಷ್ಯಾ):</strong> ಸುಮಾತ್ರ ದ್ವೀಪದಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 24 ಸಾವಿರ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ, ಅರಣ್ಯನಾಶವೇ ಈ ವಿಪತ್ತಿಗೆ ಕಾರಣ ಎಂದು ಪರಿಸರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ದ್ವೀಪದಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವುದು,ನದಿ ನೀರಿನ ಮಟ್ಟ ಹೆಚ್ಚಾಗಲು ಕಾರಣವಾಗಿದೆ. ಇದರಿಂದಾಗಿ ತೀರ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದ್ದು, ವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ ಎಂದು ರಾಷ್ಟ್ರೀಯ ವಿಪತ್ತು ದಳ ತಿಳಿಸಿದೆ.</p>.<p>'ವರ್ಷದಲ್ಲಿ ಕನಿಷ್ಠ ಐದರಿಂದ ಎಂಟು ಬಾರಿ ಪ್ರವಾಹ ಎದುರಾಗುತ್ತಿರುತ್ತದೆ. ಆದರೆ, ಈ ಬಾರಿ ಗಂಭೀರವಾಗಿದೆ' ಎಂದು 'ಆಚೆ' ಪ್ರಾಂತ್ಯದ ಪಿರಾಕ್ ತಿಮುರ್ನ ಮುಜಾಕ್ಕಿರ್ ಎನ್ನುವವರು ಹೇಳಿದ್ದಾರೆ.</p>.<p>ಇದೇ ಪ್ರಾಂತ್ಯದ ಲ್ಹೋಕ್ಸುಕೊನ್ನವರಾದ ಸೈರಿಫುದ್ದೀನ್, 'ಪ್ರವಾಹ ಹೆಚ್ಚಾಗುತ್ತಲೇ ಇದೆ. ನನ್ನ ಮನೆ ಬಳಿ ಎದೆ ಮಟ್ಟಕ್ಕೆ ನೀರು ನಿಂತಿದೆ' ಎಂದಿದ್ದಾರೆ.</p>.<p>ಸದ್ಯ ಸ್ಥಳಾಂತರಿಸಲಾಗಿರುವವರು ಮತ್ತುಮೃತಪಟ್ಟಿರುವವರೆಲ್ಲ ಇದೇ ಪ್ರಾಂತ್ಯದವರು. ನೀರಿನ ಮಟ್ಟ ತೀವ್ರವಾಗಿ ಏರಿಕೆಯಾಗುತ್ತಿರುವುದರಿಂದ ಹಲವು ಕಟ್ಟಡಗಳಿಗೆ ಮತ್ತು ಬೆಳೆಗಳಿಗೆ ಹಾನಿಯಾಗಿದೆ.ದ್ವೀಪದ ಜಾಂಬಿ ಪ್ರಾಂತ್ಯದಲ್ಲಿಯೂ ಪ್ರವಾಹ ಉಂಟಾಗಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ.</p>.<p>ಪರಿಸರ ಸಂಬಂಧಿ ಸರ್ಕಾರೇತರ ಸಂಸ್ಥೆ (ಎನ್ಜಿಒ) ವಾಲ್ಹಿ, ಬೆಲೆಬಾಳುವ ತಾಳೆ ಮರಗಳನ್ನು ಬೆಳೆಯುವುದಕ್ಕಾಗಿಸುಮಾತ್ರದಲ್ಲಿ ಅರಣ್ಯನಾಶ ಮಾಡುತ್ತಿರುವುದು ಪ್ರವಾಹಕ್ಕೆ ಕಾರಣ ಎಂದು ಕಿಡಿಕಾರಿದೆ.</p>.<p>ಪ್ರವಾಹದ ವಿರುದ್ಧ ಮರಗಳು ಸ್ವಾಭಾವಿಕ ರಕ್ಷಕದಂತೆ ಕಾರ್ಯನಿರ್ವಹಿಸುತ್ತವೆ. ನೀರಿನ ಹರಿವಿನ ವೇಗವನ್ನು ತಗ್ಗಿಸುತ್ತವೆ ಎಂದೂ ಹೇಳಿದೆ.</p>.<p>ನೆರೆಯ ಮಲೇಷಿಯಾದಲ್ಲಿಯೂ ಕಳೆದ ಒಂದು ತಿಂಗಳಿನಿಂದ ಪ್ರವಾಹ ಪರಿಸ್ಥಿತಿ ಇದ್ದು, ಸಾವಿರಾರು ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲ್ಹೋಕ್ಸುಕೊನ್ (ಇಂಡೋನೇಷ್ಯಾ):</strong> ಸುಮಾತ್ರ ದ್ವೀಪದಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 24 ಸಾವಿರ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ, ಅರಣ್ಯನಾಶವೇ ಈ ವಿಪತ್ತಿಗೆ ಕಾರಣ ಎಂದು ಪರಿಸರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ದ್ವೀಪದಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವುದು,ನದಿ ನೀರಿನ ಮಟ್ಟ ಹೆಚ್ಚಾಗಲು ಕಾರಣವಾಗಿದೆ. ಇದರಿಂದಾಗಿ ತೀರ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿದ್ದು, ವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ ಎಂದು ರಾಷ್ಟ್ರೀಯ ವಿಪತ್ತು ದಳ ತಿಳಿಸಿದೆ.</p>.<p>'ವರ್ಷದಲ್ಲಿ ಕನಿಷ್ಠ ಐದರಿಂದ ಎಂಟು ಬಾರಿ ಪ್ರವಾಹ ಎದುರಾಗುತ್ತಿರುತ್ತದೆ. ಆದರೆ, ಈ ಬಾರಿ ಗಂಭೀರವಾಗಿದೆ' ಎಂದು 'ಆಚೆ' ಪ್ರಾಂತ್ಯದ ಪಿರಾಕ್ ತಿಮುರ್ನ ಮುಜಾಕ್ಕಿರ್ ಎನ್ನುವವರು ಹೇಳಿದ್ದಾರೆ.</p>.<p>ಇದೇ ಪ್ರಾಂತ್ಯದ ಲ್ಹೋಕ್ಸುಕೊನ್ನವರಾದ ಸೈರಿಫುದ್ದೀನ್, 'ಪ್ರವಾಹ ಹೆಚ್ಚಾಗುತ್ತಲೇ ಇದೆ. ನನ್ನ ಮನೆ ಬಳಿ ಎದೆ ಮಟ್ಟಕ್ಕೆ ನೀರು ನಿಂತಿದೆ' ಎಂದಿದ್ದಾರೆ.</p>.<p>ಸದ್ಯ ಸ್ಥಳಾಂತರಿಸಲಾಗಿರುವವರು ಮತ್ತುಮೃತಪಟ್ಟಿರುವವರೆಲ್ಲ ಇದೇ ಪ್ರಾಂತ್ಯದವರು. ನೀರಿನ ಮಟ್ಟ ತೀವ್ರವಾಗಿ ಏರಿಕೆಯಾಗುತ್ತಿರುವುದರಿಂದ ಹಲವು ಕಟ್ಟಡಗಳಿಗೆ ಮತ್ತು ಬೆಳೆಗಳಿಗೆ ಹಾನಿಯಾಗಿದೆ.ದ್ವೀಪದ ಜಾಂಬಿ ಪ್ರಾಂತ್ಯದಲ್ಲಿಯೂ ಪ್ರವಾಹ ಉಂಟಾಗಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ.</p>.<p>ಪರಿಸರ ಸಂಬಂಧಿ ಸರ್ಕಾರೇತರ ಸಂಸ್ಥೆ (ಎನ್ಜಿಒ) ವಾಲ್ಹಿ, ಬೆಲೆಬಾಳುವ ತಾಳೆ ಮರಗಳನ್ನು ಬೆಳೆಯುವುದಕ್ಕಾಗಿಸುಮಾತ್ರದಲ್ಲಿ ಅರಣ್ಯನಾಶ ಮಾಡುತ್ತಿರುವುದು ಪ್ರವಾಹಕ್ಕೆ ಕಾರಣ ಎಂದು ಕಿಡಿಕಾರಿದೆ.</p>.<p>ಪ್ರವಾಹದ ವಿರುದ್ಧ ಮರಗಳು ಸ್ವಾಭಾವಿಕ ರಕ್ಷಕದಂತೆ ಕಾರ್ಯನಿರ್ವಹಿಸುತ್ತವೆ. ನೀರಿನ ಹರಿವಿನ ವೇಗವನ್ನು ತಗ್ಗಿಸುತ್ತವೆ ಎಂದೂ ಹೇಳಿದೆ.</p>.<p>ನೆರೆಯ ಮಲೇಷಿಯಾದಲ್ಲಿಯೂ ಕಳೆದ ಒಂದು ತಿಂಗಳಿನಿಂದ ಪ್ರವಾಹ ಪರಿಸ್ಥಿತಿ ಇದ್ದು, ಸಾವಿರಾರು ಜನರು ಮನೆಗಳನ್ನು ಕಳೆದುಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>