ವಾಷಿಂಗ್ಟನ್: 2008ರಲ್ಲಿ ನಡೆದ ಮುಂಬೈ ದಾಳಿ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹಾವುರ್ ರಾಣಾ ತಮ್ಮನ್ನು ಭಾರತಕ್ಕೆ ಗಡೀಪಾರು ಮಾಡಲು ಆದೇಶಿಸಿರುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ.
ಅಮೆರಿಕದ ನ್ಯಾಯಾಲಯವೊಂದು ಕಳೆದ ತಿಂಗಳು ರಾಣಾ ಅವರನ್ನು ಭಾರತಕ್ಕೆ ಗಡೀಪಾರು ಮಾಡಲು ಒಪ್ಪಿಗೆ ನೀಡಿತ್ತು. ಇದನ್ನು ಪ್ರಶ್ನಿಸಿ ತಮ್ಮ ವಕೀಲರ ಮೂಲಕ ರಾಣಾ ಅರ್ಜಿ ಸಲ್ಲಿಸಿದ್ದಾರೆ. ರಾಣಾ ಗಡೀಪಾರು ಮಾಡಿದರೆ ಅಮೆರಿಕ–ಭಾರತ ನಡುವಿನ ಒಪ್ಪಂದವನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ವಕೀಲರು ವಾದಿಸಿದ್ದಾರೆ.