<p><strong>ಸುರಿನ್/ಬ್ಯಾಂಕಾಕ್:</strong> ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವಿನ ಸಂಘರ್ಷ ಮತ್ತೆ ತೀವ್ರಗೊಂಡಿದೆ. ‘ಕಾಂಬೋಡಿಯಾ ಶನಿವಾರ ನಡೆಸಿದ ದಾಳಿಯಲ್ಲಿ ನಮ್ಮ ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ’ ಎಂದು ಥಾಯ್ಲೆಂಡ್ ಹೇಳಿದೆ.</p>.<p>ಇದೇ ಜುಲೈನಲ್ಲಿ ಈ ಎರಡೂ ದೇಶಗಳ ಮಧ್ಯೆ ಸಂಘರ್ಷ ನಡೆದಿತ್ತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತನ್ನ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳು ಕದನವಿರಾಮಕ್ಕೆ ಒಪ್ಪಿರುವುದಾಗಿಯೂ ಹೇಳಿದ್ದರು.</p>.<p>ಕನದವಿರಾಮ ಪ್ರಸ್ತಾವಕ್ಕೆ ತಾವು ಒಪ್ಪಿಗೆ ನೀಡಿಲ್ಲ ಎಂದು ಥಾಯ್ಲೆಂಡ್ ಹೇಳಿದ್ದು, ಕಾಂಬೋಡಿಯಾ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಂಘರ್ಷ ಅಂತ್ಯಗೊಳಿಸದಿದ್ದರೆ, ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಅವರು ಒತ್ತಡ ಹೇರಿದ್ದರಿಂದ ಮಲೇಷ್ಯಾವು ಕದನವಿರಾಮ ಪ್ರಸ್ತಾವಕ್ಕೆ ಎರಡೂ ದೇಶಗಳೊಂದಿಗೆ ಮಾತುಕತೆ ನಡೆಸಿತ್ತು.</p>.<p>‘ಮತ್ತೊಮ್ಮೆ ಕದನವಿರಾಮ ಜಾರಿಗೊಳಿಸುವ ಬಗ್ಗೆ ಥಾಯ್ಲೆಂಡ್ ಪ್ರಧಾನಿ ಅನುಟಿನ್ ಚರ್ನ್ವಿರಕುಲ್ ಮತ್ತು ಕಾಂಬೋಡಿಯಾ ಪ್ರಧಾನಿ ಹು ಮಾನೇಟ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಇಬ್ಬರು ಇದಕ್ಕೆ ಒಪ್ಪಿಕೊಂಡಿದ್ದಾರೆ’ ಎಂದು ಟ್ರಂಪ್ ಶುಕ್ರವಾರ ಘೋಷಿಸಿದರು. ಆದರೆ, ಈ ಘೋಷಣೆ ಬಗ್ಗೆ ಇಬ್ಬರೂ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<p>ಡಿಸೆಂಬರ್ 7ರಂದು ಆರಂಭಗೊಂಡ ಸಂಘರ್ಷದಲ್ಲಿ ಎರಡೂ ದೇಶಗಳ ಸುಮಾರು 12 ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ನಿರಾಶ್ರಿತರಾಗಿದ್ದಾರೆ. ತಮ್ಮ ಸೈನಿಕರು ಮೃತಪಟ್ಟ ಬಗ್ಗೆ ಕಾಂಬೋಡಿಯಾ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ. ಆದರೆ, 11 ನಾಗರಿಕರು ಮೃತಪಟ್ಟು, 76 ಮಂದಿ ಗಾಯಗೊಂಡಿದ್ದಾರೆ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಿನ್/ಬ್ಯಾಂಕಾಕ್:</strong> ಥಾಯ್ಲೆಂಡ್ ಮತ್ತು ಕಾಂಬೋಡಿಯಾ ನಡುವಿನ ಸಂಘರ್ಷ ಮತ್ತೆ ತೀವ್ರಗೊಂಡಿದೆ. ‘ಕಾಂಬೋಡಿಯಾ ಶನಿವಾರ ನಡೆಸಿದ ದಾಳಿಯಲ್ಲಿ ನಮ್ಮ ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ’ ಎಂದು ಥಾಯ್ಲೆಂಡ್ ಹೇಳಿದೆ.</p>.<p>ಇದೇ ಜುಲೈನಲ್ಲಿ ಈ ಎರಡೂ ದೇಶಗಳ ಮಧ್ಯೆ ಸಂಘರ್ಷ ನಡೆದಿತ್ತು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತನ್ನ ಮಧ್ಯಸ್ಥಿಕೆಯಲ್ಲಿ ಎರಡೂ ದೇಶಗಳು ಕದನವಿರಾಮಕ್ಕೆ ಒಪ್ಪಿರುವುದಾಗಿಯೂ ಹೇಳಿದ್ದರು.</p>.<p>ಕನದವಿರಾಮ ಪ್ರಸ್ತಾವಕ್ಕೆ ತಾವು ಒಪ್ಪಿಗೆ ನೀಡಿಲ್ಲ ಎಂದು ಥಾಯ್ಲೆಂಡ್ ಹೇಳಿದ್ದು, ಕಾಂಬೋಡಿಯಾ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಂಘರ್ಷ ಅಂತ್ಯಗೊಳಿಸದಿದ್ದರೆ, ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಅವರು ಒತ್ತಡ ಹೇರಿದ್ದರಿಂದ ಮಲೇಷ್ಯಾವು ಕದನವಿರಾಮ ಪ್ರಸ್ತಾವಕ್ಕೆ ಎರಡೂ ದೇಶಗಳೊಂದಿಗೆ ಮಾತುಕತೆ ನಡೆಸಿತ್ತು.</p>.<p>‘ಮತ್ತೊಮ್ಮೆ ಕದನವಿರಾಮ ಜಾರಿಗೊಳಿಸುವ ಬಗ್ಗೆ ಥಾಯ್ಲೆಂಡ್ ಪ್ರಧಾನಿ ಅನುಟಿನ್ ಚರ್ನ್ವಿರಕುಲ್ ಮತ್ತು ಕಾಂಬೋಡಿಯಾ ಪ್ರಧಾನಿ ಹು ಮಾನೇಟ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಇಬ್ಬರು ಇದಕ್ಕೆ ಒಪ್ಪಿಕೊಂಡಿದ್ದಾರೆ’ ಎಂದು ಟ್ರಂಪ್ ಶುಕ್ರವಾರ ಘೋಷಿಸಿದರು. ಆದರೆ, ಈ ಘೋಷಣೆ ಬಗ್ಗೆ ಇಬ್ಬರೂ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.</p>.<p>ಡಿಸೆಂಬರ್ 7ರಂದು ಆರಂಭಗೊಂಡ ಸಂಘರ್ಷದಲ್ಲಿ ಎರಡೂ ದೇಶಗಳ ಸುಮಾರು 12 ಮಂದಿ ಮೃತಪಟ್ಟಿದ್ದಾರೆ. ನೂರಾರು ಜನರು ನಿರಾಶ್ರಿತರಾಗಿದ್ದಾರೆ. ತಮ್ಮ ಸೈನಿಕರು ಮೃತಪಟ್ಟ ಬಗ್ಗೆ ಕಾಂಬೋಡಿಯಾ ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ. ಆದರೆ, 11 ನಾಗರಿಕರು ಮೃತಪಟ್ಟು, 76 ಮಂದಿ ಗಾಯಗೊಂಡಿದ್ದಾರೆ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>