<p>ಬೊಗೊಟಾ:‘ಕೊಲಂಬಿಯಾದಲ್ಲಿ ಎರಡು ವಾರಗಳ ಹಿಂದೆ ಆರಂಭವಾದ ಸರ್ಕಾರಿ ವಿರೋಧಿ ಪ್ರತಿಭಟನೆಯಲ್ಲಿ 42 ಮಂದಿ ಮೃತಪಟ್ಟಿದ್ದಾರೆ’ ಎಂದು ಅಲ್ಲಿನ ಮಾನವ ಹಕ್ಕುಗಳ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದರು.</p>.<p>‘ಕೋವಿಡ್ ಪಿಡುಗಿನಿಂದಾಗಿ ಹೆಚ್ಚಿದ ಬಡತನ ಮತ್ತು ಅಸಮಾನತೆಯನ್ನು ವಿರೋಧಿಸಿ ಬುಧವಾರವೂ ಪ್ರತಿಭಟನೆ ಮುಂದುವರಿದಿದೆ. ಇದರಲ್ಲಿ ಈವರೆಗೆ 168 ಮಂದಿ ನಾಪತ್ತೆಯಾಗಿದ್ದಾರೆ’ ಎಂದು ಸರ್ಕಾರಿ ಸಂಸ್ಥೆಯೊಂದು ಹೇಳಿದೆ.</p>.<p>‘ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ನಡೆಸಿದ ಹಿಂಸಾಚಾರದಲ್ಲಿ 40 ಮಂದಿ ಮೃತಪಟ್ಟಿದ್ದಾರೆ. ಒಬ್ಬ ಪೊಲೀಸ್ ಅಧಿಕಾರಿಯೂ ಸಾವಿಗೀಡಾಗಿದ್ದಾರೆ’ ಎಂದು ಟೆಂಬ್ಲೋರ್ಸ್ ಸಂಸ್ಥೆಯು ಹೇಳಿದೆ.</p>.<p>ಸಾಮಾಜಿಕ ಮತ್ತು ಆರೋಗ್ಯ ಸೇವೆಗಳಿಗಾಗಿ ಹಣವನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಸರ್ಕಾರವು ತೆರಿಗೆಯನ್ನು ಹೆಚ್ಚು ಮಾಡಿತ್ತು. ಇದನ್ನು ವಿರೋಧಿಸಿಏಪ್ರಿಲ್ 28ರಂದು ಪ್ರತಿಭಟನೆ ಆರಂಭವಾಯಿತು. ಈ ಪ್ರತಿಭಟನೆ ಹತ್ತಿಕ್ಕಲು ಕೊಲಂಬಿಯಾದ ಪೊಲೀಸರು ಬಲಪ್ರಯೋಗ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.</p>.<p>ಮೇ 2ರಂದು ಸರ್ಕಾರವು ತನ್ನ 6.2 ಶತಕೋಟಿ ಡಾಲರ್ ತೆರಿಗೆ ಯೋಜನೆಯನ್ನು ವಾಪಾಸು ಪಡೆಯಿತು. ಅಲ್ಲದೆ ಹಣಕಾಸು ಸಚಿವರು ರಾಜೀನಾಮೆಯನ್ನು ಕೂಡ ಕೊಟ್ಟರು. ಆದರೂ ಕೊಲಂಬಿಯಾದ ಹಲವೆಡೆ ಪ್ರತಿಭಟನೆಗಳು ಮುಂದುವರಿದಿದೆ. ದೇಶದ 1 ಕೋಟಿ ಜನರಿಗೆ ಮೂಲ ಆದಾಯ ಯೋಜನೆ ಜಾರಿಗೆ ತರಬೇಕು, ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಉಚಿತ ಶಿಕ್ಷಣ ನೀಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಯುತ್ತಿದೆ.</p>.<p>ಕೊಲಂಬಿಯಾದಲ್ಲಿ ಕೋವಿಡ್ನಿಂದ 78 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೊಗೊಟಾ:‘ಕೊಲಂಬಿಯಾದಲ್ಲಿ ಎರಡು ವಾರಗಳ ಹಿಂದೆ ಆರಂಭವಾದ ಸರ್ಕಾರಿ ವಿರೋಧಿ ಪ್ರತಿಭಟನೆಯಲ್ಲಿ 42 ಮಂದಿ ಮೃತಪಟ್ಟಿದ್ದಾರೆ’ ಎಂದು ಅಲ್ಲಿನ ಮಾನವ ಹಕ್ಕುಗಳ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದರು.</p>.<p>‘ಕೋವಿಡ್ ಪಿಡುಗಿನಿಂದಾಗಿ ಹೆಚ್ಚಿದ ಬಡತನ ಮತ್ತು ಅಸಮಾನತೆಯನ್ನು ವಿರೋಧಿಸಿ ಬುಧವಾರವೂ ಪ್ರತಿಭಟನೆ ಮುಂದುವರಿದಿದೆ. ಇದರಲ್ಲಿ ಈವರೆಗೆ 168 ಮಂದಿ ನಾಪತ್ತೆಯಾಗಿದ್ದಾರೆ’ ಎಂದು ಸರ್ಕಾರಿ ಸಂಸ್ಥೆಯೊಂದು ಹೇಳಿದೆ.</p>.<p>‘ಪ್ರತಿಭಟನೆಯನ್ನು ನಿಯಂತ್ರಿಸಲು ಪೊಲೀಸರು ನಡೆಸಿದ ಹಿಂಸಾಚಾರದಲ್ಲಿ 40 ಮಂದಿ ಮೃತಪಟ್ಟಿದ್ದಾರೆ. ಒಬ್ಬ ಪೊಲೀಸ್ ಅಧಿಕಾರಿಯೂ ಸಾವಿಗೀಡಾಗಿದ್ದಾರೆ’ ಎಂದು ಟೆಂಬ್ಲೋರ್ಸ್ ಸಂಸ್ಥೆಯು ಹೇಳಿದೆ.</p>.<p>ಸಾಮಾಜಿಕ ಮತ್ತು ಆರೋಗ್ಯ ಸೇವೆಗಳಿಗಾಗಿ ಹಣವನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಸರ್ಕಾರವು ತೆರಿಗೆಯನ್ನು ಹೆಚ್ಚು ಮಾಡಿತ್ತು. ಇದನ್ನು ವಿರೋಧಿಸಿಏಪ್ರಿಲ್ 28ರಂದು ಪ್ರತಿಭಟನೆ ಆರಂಭವಾಯಿತು. ಈ ಪ್ರತಿಭಟನೆ ಹತ್ತಿಕ್ಕಲು ಕೊಲಂಬಿಯಾದ ಪೊಲೀಸರು ಬಲಪ್ರಯೋಗ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.</p>.<p>ಮೇ 2ರಂದು ಸರ್ಕಾರವು ತನ್ನ 6.2 ಶತಕೋಟಿ ಡಾಲರ್ ತೆರಿಗೆ ಯೋಜನೆಯನ್ನು ವಾಪಾಸು ಪಡೆಯಿತು. ಅಲ್ಲದೆ ಹಣಕಾಸು ಸಚಿವರು ರಾಜೀನಾಮೆಯನ್ನು ಕೂಡ ಕೊಟ್ಟರು. ಆದರೂ ಕೊಲಂಬಿಯಾದ ಹಲವೆಡೆ ಪ್ರತಿಭಟನೆಗಳು ಮುಂದುವರಿದಿದೆ. ದೇಶದ 1 ಕೋಟಿ ಜನರಿಗೆ ಮೂಲ ಆದಾಯ ಯೋಜನೆ ಜಾರಿಗೆ ತರಬೇಕು, ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಉಚಿತ ಶಿಕ್ಷಣ ನೀಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಯುತ್ತಿದೆ.</p>.<p>ಕೊಲಂಬಿಯಾದಲ್ಲಿ ಕೋವಿಡ್ನಿಂದ 78 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>