<p><strong>ಢಾಕಾ:</strong> ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ 44 ಮಂದಿ ಪೊಲೀಸರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>ಜುಲೈ 20ರಿಂದ ಆಗಸ್ಟ್ 14ರ ನಡುವೆ ದೇಶದಲ್ಲಿ ನಡೆದ ಹಿಂಸಾಚಾರದಲ್ಲಿ 44 ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಪ್ರಧಾನ ಕಛೇರಿಯ ಮಾಧ್ಯಮ ವಿಭಾಗ ತಿಳಿಸಿದೆ ಎಂದು ಪ್ರಮುಖ ಬಂಗಾಳಿ ಭಾಷೆಯ ಪತ್ರಿಕೆ ಪ್ರೋಥೋಮ್ ಅಲೋ ವರದಿ ಮಾಡಿದೆ.</p>.<p>ಹಸೀನಾ ಅವರು ಭಾರತಕ್ಕೆ ಪಲಾಯನ ಮಾಡಿದ್ದ ದಿನದಂದು (ಆಗಸ್ಟ್ 5 ರಂದು) ಸುಮಾರು 25 ಪೊಲೀಸ್ ಸಿಬ್ಬಂದಿ ಸಾವಿಗೀಡಾಗಿದ್ದಾರೆ. ಆಗಸ್ಟ್ 4ರಂದು 15 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದಲ್ಲದೆ, ಆಗಸ್ಟ್ 20ರಂದು ಇಬ್ಬರು, ಆಗಸ್ಟ್ 21 ರಂದು ಒಬ್ಬರು ಹಾಗೂ ಚಿಕಿತ್ಸೆ ಪಡೆಯುತ್ತಿದ್ದ ಒಬ್ಬರು ಆಗಸ್ಟ್ 14ರಂದು ಮೃತಪಟ್ಟಿದ್ದಾರೆ.</p>.<p>ಹತ್ಯೆಗೀಡಾದವರಲ್ಲಿ 11 ಸಬ್ಇನ್ಸ್ಪೆಕ್ಟರ್ಗಳು, ಮೂವರು ಇನ್ಸ್ಪೆಕ್ಟರ್ಗಳು ಮತ್ತು ಒಬ್ಬರು ಕಾನ್ಸ್ಟೆಬಲ್ ಸೇರಿದ್ದಾರೆ.</p>.<p>ವಿವಾದಾತ್ಮಕ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ದೇಶದಲ್ಲಿ ಸೃಷ್ಟಿಯಾದ ಅರಾಜಕತೆಗೆ ನಲುಗಿದ ಶೇಖ್ ಹಸೀನಾ ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಆಗಸ್ಟ್ 5 ರಂದು ಭಾರತಕ್ಕೆ ಪಲಾಯನ ಮಾಡಿದ್ದರು. </p>.ಬಾಂಗ್ಲಾ | ಅರ್ಹತೆ ಆಧರಿಸಿ ಉದ್ಯೋಗಕ್ಕಾಗಿ ರ್ಯಾಲಿ; ಹಿಂಸಾಚಾರ: 400 ಮಂದಿಗೆ ಗಾಯ.<p>ಬಾಂಗ್ಲಾ ಸ್ವಾತಂತ್ರ್ಯ ಸಮರದಲ್ಲಿ ಭಾಗಿಯಾಗಿದ್ದವರ ಸಂಬಂಧಿಕರಿಗೆ ಸರ್ಕಾರದ ಹುದ್ದೆಗಳಲ್ಲಿ ಶೇ 30ರಷ್ಟು ಮೀಸಲಾತಿ ಕಲ್ಪಿಸುವ ವಿವಾದಾತ್ಮಕ ಮೀಸಲು ವ್ಯವಸ್ಥೆಯನ್ನು ಕೊನೆಗೊಳಿಸಬೇಕು ಎಂಬುದು ಪ್ರತಿಭಟನಾಕಾರರ ಬೇಡಿಕೆಯಾಗಿತ್ತು.</p>.<p>ಹಸೀನಾ ದೇಶ ಬಿಟ್ಟ ಬಳಿಕವೂ ಕೆಲಕಾಲ ಹಿಂಸಾಚಾರ ಮುಂದುವರಿದಿತ್ತು. ಹಿಂಸಾಚಾರದ ಸುಮಾರು 600ಕ್ಕೂ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. </p>.<p>ಹಸೀನಾ ನೇತೃತ್ವದ ಸರ್ಕಾರದ ಪತನದ ನಂತರ ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ.</p>.ಬಾಂಗ್ಲಾ ಹಿಂಸಾಚಾರ | ಈವರೆಗೆ 650 ಮಂದಿ ಸಾವು: UN ವರದಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ 44 ಮಂದಿ ಪೊಲೀಸರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.</p>.<p>ಜುಲೈ 20ರಿಂದ ಆಗಸ್ಟ್ 14ರ ನಡುವೆ ದೇಶದಲ್ಲಿ ನಡೆದ ಹಿಂಸಾಚಾರದಲ್ಲಿ 44 ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಪ್ರಧಾನ ಕಛೇರಿಯ ಮಾಧ್ಯಮ ವಿಭಾಗ ತಿಳಿಸಿದೆ ಎಂದು ಪ್ರಮುಖ ಬಂಗಾಳಿ ಭಾಷೆಯ ಪತ್ರಿಕೆ ಪ್ರೋಥೋಮ್ ಅಲೋ ವರದಿ ಮಾಡಿದೆ.</p>.<p>ಹಸೀನಾ ಅವರು ಭಾರತಕ್ಕೆ ಪಲಾಯನ ಮಾಡಿದ್ದ ದಿನದಂದು (ಆಗಸ್ಟ್ 5 ರಂದು) ಸುಮಾರು 25 ಪೊಲೀಸ್ ಸಿಬ್ಬಂದಿ ಸಾವಿಗೀಡಾಗಿದ್ದಾರೆ. ಆಗಸ್ಟ್ 4ರಂದು 15 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದಲ್ಲದೆ, ಆಗಸ್ಟ್ 20ರಂದು ಇಬ್ಬರು, ಆಗಸ್ಟ್ 21 ರಂದು ಒಬ್ಬರು ಹಾಗೂ ಚಿಕಿತ್ಸೆ ಪಡೆಯುತ್ತಿದ್ದ ಒಬ್ಬರು ಆಗಸ್ಟ್ 14ರಂದು ಮೃತಪಟ್ಟಿದ್ದಾರೆ.</p>.<p>ಹತ್ಯೆಗೀಡಾದವರಲ್ಲಿ 11 ಸಬ್ಇನ್ಸ್ಪೆಕ್ಟರ್ಗಳು, ಮೂವರು ಇನ್ಸ್ಪೆಕ್ಟರ್ಗಳು ಮತ್ತು ಒಬ್ಬರು ಕಾನ್ಸ್ಟೆಬಲ್ ಸೇರಿದ್ದಾರೆ.</p>.<p>ವಿವಾದಾತ್ಮಕ ಉದ್ಯೋಗ ಮೀಸಲಾತಿಗೆ ಸಂಬಂಧಿಸಿದಂತೆ ದೇಶದಲ್ಲಿ ಸೃಷ್ಟಿಯಾದ ಅರಾಜಕತೆಗೆ ನಲುಗಿದ ಶೇಖ್ ಹಸೀನಾ ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಆಗಸ್ಟ್ 5 ರಂದು ಭಾರತಕ್ಕೆ ಪಲಾಯನ ಮಾಡಿದ್ದರು. </p>.ಬಾಂಗ್ಲಾ | ಅರ್ಹತೆ ಆಧರಿಸಿ ಉದ್ಯೋಗಕ್ಕಾಗಿ ರ್ಯಾಲಿ; ಹಿಂಸಾಚಾರ: 400 ಮಂದಿಗೆ ಗಾಯ.<p>ಬಾಂಗ್ಲಾ ಸ್ವಾತಂತ್ರ್ಯ ಸಮರದಲ್ಲಿ ಭಾಗಿಯಾಗಿದ್ದವರ ಸಂಬಂಧಿಕರಿಗೆ ಸರ್ಕಾರದ ಹುದ್ದೆಗಳಲ್ಲಿ ಶೇ 30ರಷ್ಟು ಮೀಸಲಾತಿ ಕಲ್ಪಿಸುವ ವಿವಾದಾತ್ಮಕ ಮೀಸಲು ವ್ಯವಸ್ಥೆಯನ್ನು ಕೊನೆಗೊಳಿಸಬೇಕು ಎಂಬುದು ಪ್ರತಿಭಟನಾಕಾರರ ಬೇಡಿಕೆಯಾಗಿತ್ತು.</p>.<p>ಹಸೀನಾ ದೇಶ ಬಿಟ್ಟ ಬಳಿಕವೂ ಕೆಲಕಾಲ ಹಿಂಸಾಚಾರ ಮುಂದುವರಿದಿತ್ತು. ಹಿಂಸಾಚಾರದ ಸುಮಾರು 600ಕ್ಕೂ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. </p>.<p>ಹಸೀನಾ ನೇತೃತ್ವದ ಸರ್ಕಾರದ ಪತನದ ನಂತರ ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾಗಿದೆ.</p>.ಬಾಂಗ್ಲಾ ಹಿಂಸಾಚಾರ | ಈವರೆಗೆ 650 ಮಂದಿ ಸಾವು: UN ವರದಿ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>