<p><strong>ಲಾಹೋರ್: </strong>ಪಂಜಾಬ್ ಪ್ರಾಂತ್ಯದಲ್ಲಿನ ಹಿಂದೂ ದೇವಸ್ಥಾನದ ಮೇಲೆ ನಡೆದ ದಾಳಿಗೆ ಸಂಬಂಧಿಸಿ ಪೊಲೀಸ್ ಇಲಾಖೆ 50ಕ್ಕೂ ಹೆಚ್ಚು ಜನರನ್ನು ಶನಿವಾರ ಬಂಧಿಸಿದೆ.</p>.<p>ಘಟನೆಗೆ ಸಂಬಂಧಿಸಿ 150ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಉಸ್ಮಾನ್ ಬುಜ್ದಾರ್ ಟ್ವೀಟ್ ಮಾಡಿದ್ದಾರೆ.</p>.<p>ಈ ಘಟನೆ ರಹೀಮ್ ಯಾರ್ ಖಾನ್ ಜಿಲ್ಲೆಯ ಭೋಂಗ್ ಪಟ್ಟಣದಲ್ಲಿ ಬುಧವಾರ ನಡೆದಿತ್ತು. ಸ್ಥಳೀಯ ಧಾರ್ಮಿಕ ಶಾಲೆಯೊಂದರಲ್ಲಿ 8 ವರ್ಷದ ಹಿಂದೂ ಬಾಲಕನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದ ಎಂದು ಆರೋಪಿಸಲಾಗಿತ್ತು. ಬಾಲಕನನ್ನು ಬಂಧಿಸಿದ್ದ ಅಧಿಕಾರಿಗಳು ನಂತರ ಬಿಡುಗಡೆ ಮಾಡಿದ್ದರು.</p>.<p>ಬಾಲಕನನ್ನು ಬಿಡುಗಡೆ ಮಾಡಿದ್ದನ್ನು ವಿರೋಧಿಸಿದ್ದ ಗುಂಪೊಂದು, ಸ್ಥಳೀಯ ದೇವಸ್ಥಾನದ ಮೇಲೆ ದಾಳಿ ಮಾಡಿತ್ತು.</p>.<p>ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ಅವರು ಈ ಘಟನೆಯನ್ನು ಖಂಡಿಸಿದ್ದರಲ್ಲದೇ, ಪೊಲೀಸರಿಗೆ ಛೀಮಾರಿ ಹಾಕಿದ್ದರು.</p>.<p><a href="https://www.prajavani.net/india-news/amit-shah-says-pm-ensured-pace-of-development-continues-even-during-covid-19-pandemic-855534.html" itemprop="url">ಮೋದಿ ನೇತೃತ್ವದಲ್ಲಿ ಭಾರತ ಕೋವಿಡ್ ಗೆದ್ದಿದೆ: ಅಮಿತ್ ಶಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಾಹೋರ್: </strong>ಪಂಜಾಬ್ ಪ್ರಾಂತ್ಯದಲ್ಲಿನ ಹಿಂದೂ ದೇವಸ್ಥಾನದ ಮೇಲೆ ನಡೆದ ದಾಳಿಗೆ ಸಂಬಂಧಿಸಿ ಪೊಲೀಸ್ ಇಲಾಖೆ 50ಕ್ಕೂ ಹೆಚ್ಚು ಜನರನ್ನು ಶನಿವಾರ ಬಂಧಿಸಿದೆ.</p>.<p>ಘಟನೆಗೆ ಸಂಬಂಧಿಸಿ 150ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಉಸ್ಮಾನ್ ಬುಜ್ದಾರ್ ಟ್ವೀಟ್ ಮಾಡಿದ್ದಾರೆ.</p>.<p>ಈ ಘಟನೆ ರಹೀಮ್ ಯಾರ್ ಖಾನ್ ಜಿಲ್ಲೆಯ ಭೋಂಗ್ ಪಟ್ಟಣದಲ್ಲಿ ಬುಧವಾರ ನಡೆದಿತ್ತು. ಸ್ಥಳೀಯ ಧಾರ್ಮಿಕ ಶಾಲೆಯೊಂದರಲ್ಲಿ 8 ವರ್ಷದ ಹಿಂದೂ ಬಾಲಕನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದ ಎಂದು ಆರೋಪಿಸಲಾಗಿತ್ತು. ಬಾಲಕನನ್ನು ಬಂಧಿಸಿದ್ದ ಅಧಿಕಾರಿಗಳು ನಂತರ ಬಿಡುಗಡೆ ಮಾಡಿದ್ದರು.</p>.<p>ಬಾಲಕನನ್ನು ಬಿಡುಗಡೆ ಮಾಡಿದ್ದನ್ನು ವಿರೋಧಿಸಿದ್ದ ಗುಂಪೊಂದು, ಸ್ಥಳೀಯ ದೇವಸ್ಥಾನದ ಮೇಲೆ ದಾಳಿ ಮಾಡಿತ್ತು.</p>.<p>ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ಅವರು ಈ ಘಟನೆಯನ್ನು ಖಂಡಿಸಿದ್ದರಲ್ಲದೇ, ಪೊಲೀಸರಿಗೆ ಛೀಮಾರಿ ಹಾಕಿದ್ದರು.</p>.<p><a href="https://www.prajavani.net/india-news/amit-shah-says-pm-ensured-pace-of-development-continues-even-during-covid-19-pandemic-855534.html" itemprop="url">ಮೋದಿ ನೇತೃತ್ವದಲ್ಲಿ ಭಾರತ ಕೋವಿಡ್ ಗೆದ್ದಿದೆ: ಅಮಿತ್ ಶಾ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>