<p><strong>ಪೇಶಾವರ:</strong> ಇಲ್ಲಿನ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬಜೌರ್ ಬುಡುಕಟ್ಟು ಪ್ರದೇಶದಲ್ಲಿರುವ ನಿಷೇಧಿತ ಭಯೋತ್ಪಾದಕ ಸಂಘಟನೆ ತೆಹ್ರೀಕ್ –ಎ–ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ವಿರುದ್ಧ ಪಾಕಿಸ್ತಾನ ಸೇನೆ ಸೋಮವಾರದಿಂದ ಕಾರ್ಯಾಚರಣೆ ಆರಂಭಿಸಿದೆ. </p>.<p>ಸತತ ಮೂರು ದಿನ ಕಾರ್ಯಾಚರಣೆ ನಡೆಯಲಿದ್ದು, ಇದರ ಭಾಗವಾಗಿ ಈ ಪ್ರದೇಶದಿಂದ 55 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ. ಬಜೌರ್ ಬುಡುಕಟ್ಟು ಪ್ರದೇಶವು ಅಫ್ಗಾನಿಸ್ತಾನದ ಗಡಿ ಭಾಗಕ್ಕೆ ಹೊಂದಿಕೊಂಡಿದ್ದು, ಇಲ್ಲಿನ 27 ಗ್ರಾಮಗಳಲ್ಲಿ ಕೆಲವು ಕಡೆ 72 ಗಂಟೆ ಜನ ಸಂಚಾರವನ್ನು ನಿರ್ಬಂಧಿಸಲಾಗಿದೆ. </p>.<p class="title">‘ಪರ್ಯಾಯ ಸೌಕರ್ಯ ಕಲ್ಪಿಸದೆ ಸುಮಾರು 55 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ. ಕರ್ಫ್ಯೂ ವಿಧಿಸಿರುವುದರಿಂದ ಅಂದಾಜು 4 ಲಕ್ಷದಷ್ಟು ಜನರು ಒತ್ತೆಯಾಳುಗಳಾಗಿದ್ದಾರೆ. ಜನರು ಸುರಕ್ಷಿತ ಸ್ಥಳಕ್ಕೆ ಹೋಗಲು ಸಿದ್ಧರಿರುವಾಗ ಸರ್ಕಾರ ಕರ್ಫ್ಯೂ ಜಾರಿಗೊಳಿಸಿದ್ದು ಯಾಕೆ ಎಂದು ಅವಾಮಿ ನ್ಯಾಷನಲ್ ಪಕ್ಷದ ಶಾಸಕ ನಿಸಾರ್ ಬಾಜ್ ಪ್ರಶ್ನಿಸಿದ್ದಾರೆ. </p>.<p class="title">ಸ್ಥಳಾಂತರಗೊಂಡವರಿಗೆ ಖಾರ್ ಪ್ರಾಂತ್ಯದ 107ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೇಶಾವರ:</strong> ಇಲ್ಲಿನ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಬಜೌರ್ ಬುಡುಕಟ್ಟು ಪ್ರದೇಶದಲ್ಲಿರುವ ನಿಷೇಧಿತ ಭಯೋತ್ಪಾದಕ ಸಂಘಟನೆ ತೆಹ್ರೀಕ್ –ಎ–ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ವಿರುದ್ಧ ಪಾಕಿಸ್ತಾನ ಸೇನೆ ಸೋಮವಾರದಿಂದ ಕಾರ್ಯಾಚರಣೆ ಆರಂಭಿಸಿದೆ. </p>.<p>ಸತತ ಮೂರು ದಿನ ಕಾರ್ಯಾಚರಣೆ ನಡೆಯಲಿದ್ದು, ಇದರ ಭಾಗವಾಗಿ ಈ ಪ್ರದೇಶದಿಂದ 55 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ. ಬಜೌರ್ ಬುಡುಕಟ್ಟು ಪ್ರದೇಶವು ಅಫ್ಗಾನಿಸ್ತಾನದ ಗಡಿ ಭಾಗಕ್ಕೆ ಹೊಂದಿಕೊಂಡಿದ್ದು, ಇಲ್ಲಿನ 27 ಗ್ರಾಮಗಳಲ್ಲಿ ಕೆಲವು ಕಡೆ 72 ಗಂಟೆ ಜನ ಸಂಚಾರವನ್ನು ನಿರ್ಬಂಧಿಸಲಾಗಿದೆ. </p>.<p class="title">‘ಪರ್ಯಾಯ ಸೌಕರ್ಯ ಕಲ್ಪಿಸದೆ ಸುಮಾರು 55 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ. ಕರ್ಫ್ಯೂ ವಿಧಿಸಿರುವುದರಿಂದ ಅಂದಾಜು 4 ಲಕ್ಷದಷ್ಟು ಜನರು ಒತ್ತೆಯಾಳುಗಳಾಗಿದ್ದಾರೆ. ಜನರು ಸುರಕ್ಷಿತ ಸ್ಥಳಕ್ಕೆ ಹೋಗಲು ಸಿದ್ಧರಿರುವಾಗ ಸರ್ಕಾರ ಕರ್ಫ್ಯೂ ಜಾರಿಗೊಳಿಸಿದ್ದು ಯಾಕೆ ಎಂದು ಅವಾಮಿ ನ್ಯಾಷನಲ್ ಪಕ್ಷದ ಶಾಸಕ ನಿಸಾರ್ ಬಾಜ್ ಪ್ರಶ್ನಿಸಿದ್ದಾರೆ. </p>.<p class="title">ಸ್ಥಳಾಂತರಗೊಂಡವರಿಗೆ ಖಾರ್ ಪ್ರಾಂತ್ಯದ 107ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಲ್ಲಿ ಆಶ್ರಯ ಕಲ್ಪಿಸಲಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>