<p><strong>ಢಾಕಾ: </strong>ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ (72) ಅವರಿಗೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.</p>.<p>ಇಲ್ಲಿನ ವಿಶೇಷ ನ್ಯಾಯಾಲಯ ಗುರುವಾರ ಈ ತೀರ್ಪು ನೀಡಿದೆ. ಇದರಿಂದ ಖಲೀದಾ ಜಿಯಾ ಅವರು ಡಿಸೆಂಬರ್ನಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳ್ಳುವ ಸಾಧ್ಯತೆಗಳಿವೆ. ವಿರೋಧ ಪಕ್ಷವಾಗಿರುವ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷಕ್ಕೆ (ಬಿಎನ್ಪಿ) ಈ ಬೆಳವಣಿಗೆಯಿಂದ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ.</p>.<p>‘ಜಿಯಾ ಅನಾಥಾಶ್ರಮ ಟ್ರಸ್ಟ್’ ಹೆಸರಿನಲ್ಲಿ ದೇಣಿಗೆ ಪಡೆಯಲಾಗಿದ್ದ ₹16.21 ಕೋಟಿ ಮೊತ್ತವನ್ನು ಖಲೀದಾ ಜಿಯಾ ಮತ್ತು ಇತರರು ದುರ್ಬಳಕೆ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿತ್ತು.</p>.<p>ಇದೇ ಪ್ರಕರಣದಲ್ಲಿ ಜಿಯಾ ಅವರ ಪುತ್ರ ಮತ್ತು ಬಿಎನ್ಪಿ ಹಿರಿಯ ಉಪಾಧ್ಯಕ್ಷ ತಾರೀಖ್ ರೆಹಮಾನ್ ಹಾಗೂ ಇತರ ನಾಲ್ವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 632 ಪುಟಗಳ ತೀರ್ಪಿನ ಮುಖ್ಯ ಸಾರಾಂಶವನ್ನು 10 ನಿಮಿಷಗಳಲ್ಲಿ ನ್ಯಾಯಾಧೀಶರು ಓದಿದರು.</p>.<p>ನಾಲ್ಕು ವರ್ಷಗಳ ಹಿಂದೆಯೇ ಜಿಯಾ ಮತ್ತು ಇತರರು ತಪ್ಪಿತಸ್ಥರು ಎಂದು ತೀರ್ಪು ನೀಡಲಾಗಿತ್ತು. ಭ್ರಷ್ಟಾಚಾರ ನಿಗ್ರಹ ಆಯೋಗ ಜಿಯಾ ಮತ್ತು ಇತರರ ವಿರುದ್ಧ ಸಲ್ಲಿಸಿದ್ದ ದೋಷಾರೋಪಣೆಯನ್ನು ಪರಿಗಣಿಸಿ 2014ರ ಮಾರ್ಚ್ 19ರಂದು ನ್ಯಾಯಾಲಯ ಈ ಬಗ್ಗೆ ತೀರ್ಪು ನೀಡಿತ್ತು.</p>.<p>ದೇಣಿಗೆ ಪಡೆಯಲು ಎರಡು ಟ್ರಸ್ಟ್ಗಳನ್ನು ಸ್ಥಾಪಿಸಲಾಗಿತ್ತು. ಆದರೆ, ‘ಜಿಯಾ ಚಾರಿಟೆಬಲ್ ಟ್ರಸ್ಟ್’ ಎನ್ನುವುದು ಅಸ್ತಿತ್ವದಲ್ಲಿ ಇರಲೇ ಇಲ್ಲ. ಈ ಟ್ರಸ್ಟ್ಗಳ ಹೆಸರಿನಲ್ಲಿ ಅಪಾರ ಹಣ ದುರ್ಬಳಕೆ ಮಾಡಿಕೊಳ್ಳಲಾಗಿತ್ತು ಎಂದು ಭ್ರಷ್ಟಾಚಾರ ನಿಗ್ರಹ ಆಯೋಗ ದೋಷಾರೋಪಣೆಯಲ್ಲಿ ಉಲ್ಲೇಖಿಸಿತ್ತು.</p>.<p>ವಿಶೇಷ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ಜಿಯಾ ಪರ ವಕೀಲರ ಖೋಂಡ್ಕೆರ್ ಮಹಬೂಬ್ ಹುಸೇನ್ ತಿಳಿಸಿದ್ದಾರೆ.</p>.<p>**</p>.<p><strong>ಪೊಲೀಸರ ಜತೆ ಘರ್ಷಣೆ</strong></p>.<p>ಜಿಯಾ ಅವರಿಗೆ ಶಿಕ್ಷೆ ವಿಧಿಸಬಹುದು ಎನ್ನುವ ಕಾರಣಕ್ಕೆ ಬಾಂಗ್ಲಾದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಢಾಕಾದಲ್ಲಿ ಪೊಲೀಸರು ಮತ್ತು ಬಿಎನ್ಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಕಾರ್ಯಕರ್ತರ ಗುಂಪು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದರು. ನಗರದ ರಸ್ತೆಗಳಲ್ಲೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>**</p>.<p>ವಯಸ್ಸು, ಆರೋಗ್ಯ ಮತ್ತು ಸಾಮಾಜಿಕ ಸ್ಥಾನಮಾನವನ್ನು ಪರಿಗಣಿಸಿ ಜಿಯಾ ಅವರಿಗೆ ಕಡಿಮೆ ಶಿಕ್ಷೆ ವಿಧಿಸಲಾಗಿದೆ.</p>.<p><em><strong>–ಮೊಹಮ್ಮದ್ ಅಖ್ತರುಝಮಾನ್, ನ್ಯಾಯಾಧೀಶ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ: </strong>ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ (72) ಅವರಿಗೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.</p>.<p>ಇಲ್ಲಿನ ವಿಶೇಷ ನ್ಯಾಯಾಲಯ ಗುರುವಾರ ಈ ತೀರ್ಪು ನೀಡಿದೆ. ಇದರಿಂದ ಖಲೀದಾ ಜಿಯಾ ಅವರು ಡಿಸೆಂಬರ್ನಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳ್ಳುವ ಸಾಧ್ಯತೆಗಳಿವೆ. ವಿರೋಧ ಪಕ್ಷವಾಗಿರುವ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷಕ್ಕೆ (ಬಿಎನ್ಪಿ) ಈ ಬೆಳವಣಿಗೆಯಿಂದ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಲಾಗಿದೆ.</p>.<p>‘ಜಿಯಾ ಅನಾಥಾಶ್ರಮ ಟ್ರಸ್ಟ್’ ಹೆಸರಿನಲ್ಲಿ ದೇಣಿಗೆ ಪಡೆಯಲಾಗಿದ್ದ ₹16.21 ಕೋಟಿ ಮೊತ್ತವನ್ನು ಖಲೀದಾ ಜಿಯಾ ಮತ್ತು ಇತರರು ದುರ್ಬಳಕೆ ಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿತ್ತು.</p>.<p>ಇದೇ ಪ್ರಕರಣದಲ್ಲಿ ಜಿಯಾ ಅವರ ಪುತ್ರ ಮತ್ತು ಬಿಎನ್ಪಿ ಹಿರಿಯ ಉಪಾಧ್ಯಕ್ಷ ತಾರೀಖ್ ರೆಹಮಾನ್ ಹಾಗೂ ಇತರ ನಾಲ್ವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 632 ಪುಟಗಳ ತೀರ್ಪಿನ ಮುಖ್ಯ ಸಾರಾಂಶವನ್ನು 10 ನಿಮಿಷಗಳಲ್ಲಿ ನ್ಯಾಯಾಧೀಶರು ಓದಿದರು.</p>.<p>ನಾಲ್ಕು ವರ್ಷಗಳ ಹಿಂದೆಯೇ ಜಿಯಾ ಮತ್ತು ಇತರರು ತಪ್ಪಿತಸ್ಥರು ಎಂದು ತೀರ್ಪು ನೀಡಲಾಗಿತ್ತು. ಭ್ರಷ್ಟಾಚಾರ ನಿಗ್ರಹ ಆಯೋಗ ಜಿಯಾ ಮತ್ತು ಇತರರ ವಿರುದ್ಧ ಸಲ್ಲಿಸಿದ್ದ ದೋಷಾರೋಪಣೆಯನ್ನು ಪರಿಗಣಿಸಿ 2014ರ ಮಾರ್ಚ್ 19ರಂದು ನ್ಯಾಯಾಲಯ ಈ ಬಗ್ಗೆ ತೀರ್ಪು ನೀಡಿತ್ತು.</p>.<p>ದೇಣಿಗೆ ಪಡೆಯಲು ಎರಡು ಟ್ರಸ್ಟ್ಗಳನ್ನು ಸ್ಥಾಪಿಸಲಾಗಿತ್ತು. ಆದರೆ, ‘ಜಿಯಾ ಚಾರಿಟೆಬಲ್ ಟ್ರಸ್ಟ್’ ಎನ್ನುವುದು ಅಸ್ತಿತ್ವದಲ್ಲಿ ಇರಲೇ ಇಲ್ಲ. ಈ ಟ್ರಸ್ಟ್ಗಳ ಹೆಸರಿನಲ್ಲಿ ಅಪಾರ ಹಣ ದುರ್ಬಳಕೆ ಮಾಡಿಕೊಳ್ಳಲಾಗಿತ್ತು ಎಂದು ಭ್ರಷ್ಟಾಚಾರ ನಿಗ್ರಹ ಆಯೋಗ ದೋಷಾರೋಪಣೆಯಲ್ಲಿ ಉಲ್ಲೇಖಿಸಿತ್ತು.</p>.<p>ವಿಶೇಷ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ಜಿಯಾ ಪರ ವಕೀಲರ ಖೋಂಡ್ಕೆರ್ ಮಹಬೂಬ್ ಹುಸೇನ್ ತಿಳಿಸಿದ್ದಾರೆ.</p>.<p>**</p>.<p><strong>ಪೊಲೀಸರ ಜತೆ ಘರ್ಷಣೆ</strong></p>.<p>ಜಿಯಾ ಅವರಿಗೆ ಶಿಕ್ಷೆ ವಿಧಿಸಬಹುದು ಎನ್ನುವ ಕಾರಣಕ್ಕೆ ಬಾಂಗ್ಲಾದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಢಾಕಾದಲ್ಲಿ ಪೊಲೀಸರು ಮತ್ತು ಬಿಎನ್ಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಕಾರ್ಯಕರ್ತರ ಗುಂಪು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದರು. ನಗರದ ರಸ್ತೆಗಳಲ್ಲೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>**</p>.<p>ವಯಸ್ಸು, ಆರೋಗ್ಯ ಮತ್ತು ಸಾಮಾಜಿಕ ಸ್ಥಾನಮಾನವನ್ನು ಪರಿಗಣಿಸಿ ಜಿಯಾ ಅವರಿಗೆ ಕಡಿಮೆ ಶಿಕ್ಷೆ ವಿಧಿಸಲಾಗಿದೆ.</p>.<p><em><strong>–ಮೊಹಮ್ಮದ್ ಅಖ್ತರುಝಮಾನ್, ನ್ಯಾಯಾಧೀಶ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>