<p><strong>ಬೆಂಗಳೂರು</strong>: ಭಾರಿ ಮಳೆಯಿಂದಾಗಿ ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಏಳು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 80 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ಆ ದೇಶದ ಪ್ರಾಕೃತಿಕ ವಿಪತ್ತುಗಳ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.</p><p>ಇಂಡೋನೇಷ್ಯಾ ರಾಜಧಾನಿ ಜಕಾರ್ತಾದ ಆಗ್ನೇಯದಲ್ಲಿರುವ ಪಶ್ಚಿಮ ಬಂಡಂಗ್ ಪ್ರದೇಶದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ತೀವ್ರ ಮಳೆಯ ನಂತರ ಶನಿವಾರ ಬೆಳಿಗ್ಗೆ 2 ಗಂಟೆ ಸುಮಾರು ಭಾರಿ ಭೂಕುಸಿತ ಸಂಭವಿಸಿದೆ.</p><p>ಭೂಕುಸಿತದಲ್ಲಿ ಮೃತರ ಸಂಖ್ಯೆ ಏರಿಕೆಯಾಗಬಹುದು ಎಂದು ಸ್ಥಳದಲ್ಲಿರುವ ರಕ್ಷಣಾ ಪಡೆ ಹಾಗೂ ಅಧಿಕಾರಿಗಳು ಅಂದಾಜು ಮಾಡಿದ್ದಾರೆ.</p><p>ಬಂಡಂಗ್ ಪ್ರದೇಶದಲ್ಲಿ ವಸತಿ ಪ್ರದೇಶಗಳ ಮೇಲೆ ಭೂಕುಸಿತ ಉಂಟಾಗಿದೆ. ಇದೇ ಪ್ರದೇಶದಲ್ಲಿ ಇನ್ನೂ ಹಲವು ಪ್ರದೇಶಗಳಿಗೆ ಭೂಕುಸಿತ, ಪ್ರವಾಹ, ಪ್ರತಿಕೂಲ ಹವಾಮಾನದ ಎಚ್ಚರಿಕೆಗಳನ್ನು ಸಹ ನೀಡಲಾಗಿದೆ.</p><p>ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಆಗಾಗ ಭಾರಿ ಮಳೆಯಿಂದ ಕಾರ್ಯಾಚರಣೆಗೆ ಅಡ್ಡಿಯೂ ಉಂಟಾಗುತ್ತಿದೆ ಎಂದು ತಿಳಿದು ಬಂದಿದೆ.</p><p>ಬಂಡಂಗ್ ಪ್ರದೇಶದಲ್ಲಿ ಬಹುತೇಕ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪ್ರಾಕೃತಿಕ ವಿಪತ್ತುಗಳ ನಿರ್ವಹಣಾ ಪ್ರಾಧಿಕಾರದ ಅಧಿಕಾರಿ ಅಬ್ದುಲ್ ಮುಹಾರಿ ಬಿಬಿಸಿ ವಾಹಿನಿಗೆ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಭಾರಿ ಮಳೆಯಿಂದಾಗಿ ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಏಳು ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 80 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ಆ ದೇಶದ ಪ್ರಾಕೃತಿಕ ವಿಪತ್ತುಗಳ ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.</p><p>ಇಂಡೋನೇಷ್ಯಾ ರಾಜಧಾನಿ ಜಕಾರ್ತಾದ ಆಗ್ನೇಯದಲ್ಲಿರುವ ಪಶ್ಚಿಮ ಬಂಡಂಗ್ ಪ್ರದೇಶದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ತೀವ್ರ ಮಳೆಯ ನಂತರ ಶನಿವಾರ ಬೆಳಿಗ್ಗೆ 2 ಗಂಟೆ ಸುಮಾರು ಭಾರಿ ಭೂಕುಸಿತ ಸಂಭವಿಸಿದೆ.</p><p>ಭೂಕುಸಿತದಲ್ಲಿ ಮೃತರ ಸಂಖ್ಯೆ ಏರಿಕೆಯಾಗಬಹುದು ಎಂದು ಸ್ಥಳದಲ್ಲಿರುವ ರಕ್ಷಣಾ ಪಡೆ ಹಾಗೂ ಅಧಿಕಾರಿಗಳು ಅಂದಾಜು ಮಾಡಿದ್ದಾರೆ.</p><p>ಬಂಡಂಗ್ ಪ್ರದೇಶದಲ್ಲಿ ವಸತಿ ಪ್ರದೇಶಗಳ ಮೇಲೆ ಭೂಕುಸಿತ ಉಂಟಾಗಿದೆ. ಇದೇ ಪ್ರದೇಶದಲ್ಲಿ ಇನ್ನೂ ಹಲವು ಪ್ರದೇಶಗಳಿಗೆ ಭೂಕುಸಿತ, ಪ್ರವಾಹ, ಪ್ರತಿಕೂಲ ಹವಾಮಾನದ ಎಚ್ಚರಿಕೆಗಳನ್ನು ಸಹ ನೀಡಲಾಗಿದೆ.</p><p>ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಆಗಾಗ ಭಾರಿ ಮಳೆಯಿಂದ ಕಾರ್ಯಾಚರಣೆಗೆ ಅಡ್ಡಿಯೂ ಉಂಟಾಗುತ್ತಿದೆ ಎಂದು ತಿಳಿದು ಬಂದಿದೆ.</p><p>ಬಂಡಂಗ್ ಪ್ರದೇಶದಲ್ಲಿ ಬಹುತೇಕ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಪ್ರಾಕೃತಿಕ ವಿಪತ್ತುಗಳ ನಿರ್ವಹಣಾ ಪ್ರಾಧಿಕಾರದ ಅಧಿಕಾರಿ ಅಬ್ದುಲ್ ಮುಹಾರಿ ಬಿಬಿಸಿ ವಾಹಿನಿಗೆ ಪ್ರತಿಕ್ರಿಯೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>