<p><strong>ಪೆಶಾವರ</strong>: ವಾಯುವ್ಯ ಪಾಕಿಸ್ತಾನದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p><p>ಡೇರಾ, ಇಸ್ಮಾಯಿಲ್ ಖಾನ್, ಬನ್ನು, ಮನ್ಸೆಹ್ರಾ ಮತ್ತು ಮೊಹ್ಮಂಡ್ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ (ಪಿಡಿಎಂಎ) ಅಧಿಕಾರಿಗಳು ಹೇಳಿದ್ದಾರೆ.</p>.TVK ಪಕ್ಷದ ಧ್ವಜ ಬಿಡುಗಡೆ ಮಾಡಿದ ವಿಜಯ್: ಚುನಾವಣೆಗೆ ಸಿದ್ಧತೆ ಆರಂಭಿಸಿದ ನಟ.ಆಸ್ತಿ ವಿವಾದ: ಮಾರಕಾಸ್ತ್ರಗಳಿಂದ ಕೊಚ್ಚಿ ತಮ್ಮನನ್ನೇ ಕೊಂದ ಮೂವರು ಅಕ್ಕಂದಿರು. <p>ಬನ್ನುವಿನಲ್ಲಿ ಮನೆ ಮೇಲ್ಛಾವಣಿ ಕುಸಿದು ಸಹೋದರಿಯರಿಬ್ಬರು ಮೃತಪಟ್ಟಿದ್ದಾರೆ. ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ತಾಯಿ ಹಾಗೂ ಬಾಲಕ ಮೃತಪಟ್ಟರೆ, ಮತ್ತೊಂದೆಡೆ ಹರಿಯುವ ನೀರಿನಲ್ಲಿ ಹೆಣ್ಣು ಮಗುವೊಂದು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ.</p><p>ಮಳೆ ಸಂಬಂಧಿತ ಅವಘಡಗಳಲ್ಲಿ ಮೊಹಮಂಡ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಹಾಗೂ ಮನ್ಸೆಹ್ರಾದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ತಂದೆಯೇ ಮಗುವಿನ ಸಹಜ ಕಸ್ಟಡಿಯನ್: ಸುಪ್ರೀಂ ಕೋರ್ಟ್.ಬಾಂಬ್ ಬೆದರಿಕೆ: ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ.<p>ಭಾರಿ ಮಳೆಯಾದ ಪರಿಣಾಮ ಸಾಕಷ್ಟು ಪ್ರಮಾಣದಲ್ಲಿ ಬೆಳೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೆಶಾವರ</strong>: ವಾಯುವ್ಯ ಪಾಕಿಸ್ತಾನದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.</p><p>ಡೇರಾ, ಇಸ್ಮಾಯಿಲ್ ಖಾನ್, ಬನ್ನು, ಮನ್ಸೆಹ್ರಾ ಮತ್ತು ಮೊಹ್ಮಂಡ್ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ (ಪಿಡಿಎಂಎ) ಅಧಿಕಾರಿಗಳು ಹೇಳಿದ್ದಾರೆ.</p>.TVK ಪಕ್ಷದ ಧ್ವಜ ಬಿಡುಗಡೆ ಮಾಡಿದ ವಿಜಯ್: ಚುನಾವಣೆಗೆ ಸಿದ್ಧತೆ ಆರಂಭಿಸಿದ ನಟ.ಆಸ್ತಿ ವಿವಾದ: ಮಾರಕಾಸ್ತ್ರಗಳಿಂದ ಕೊಚ್ಚಿ ತಮ್ಮನನ್ನೇ ಕೊಂದ ಮೂವರು ಅಕ್ಕಂದಿರು. <p>ಬನ್ನುವಿನಲ್ಲಿ ಮನೆ ಮೇಲ್ಛಾವಣಿ ಕುಸಿದು ಸಹೋದರಿಯರಿಬ್ಬರು ಮೃತಪಟ್ಟಿದ್ದಾರೆ. ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ತಾಯಿ ಹಾಗೂ ಬಾಲಕ ಮೃತಪಟ್ಟರೆ, ಮತ್ತೊಂದೆಡೆ ಹರಿಯುವ ನೀರಿನಲ್ಲಿ ಹೆಣ್ಣು ಮಗುವೊಂದು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ.</p><p>ಮಳೆ ಸಂಬಂಧಿತ ಅವಘಡಗಳಲ್ಲಿ ಮೊಹಮಂಡ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಹಾಗೂ ಮನ್ಸೆಹ್ರಾದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.ತಂದೆಯೇ ಮಗುವಿನ ಸಹಜ ಕಸ್ಟಡಿಯನ್: ಸುಪ್ರೀಂ ಕೋರ್ಟ್.ಬಾಂಬ್ ಬೆದರಿಕೆ: ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ.<p>ಭಾರಿ ಮಳೆಯಾದ ಪರಿಣಾಮ ಸಾಕಷ್ಟು ಪ್ರಮಾಣದಲ್ಲಿ ಬೆಳೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>