‘ಲಷ್ಕರ್ ಎ– ತಯಬಾ ಮತ್ತು ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರು ಪಾಕಿಸ್ತಾನದ ಸೇನೆ ಜತೆಗೂಡಿ ಭಾರತದ ಭೂಪ್ರದೇಶಕ್ಕೆ ನುಸುಳಿದ್ದಾರೆ ಎಂಬ ವರದಿಗಳಿವೆ. ಆದರೆ, ಇದಾವುದಕ್ಕೂ ಅವಕಾಶ ನೀಡದಂತೆ ಭಾರತೀಯ ಸೇನೆ ಮತ್ತು ಬಿಎಸ್ಎಫ್ ಸಿಬ್ಬಂದಿ ಎಲ್ಒಸಿ ಉದ್ದಕ್ಕೂ ಬಿಗಿಭದ್ರತೆ ವ್ಯವಸ್ಥೆ ಕಲ್ಪಿಸಿವೆ. ಗಡಿಯಲ್ಲಿ ಯಾರೂ ನುಸುಳದಂತೆ ಎಲ್ಲಾ ರೀತಿಯ ಕ್ರಮಗಳನ್ನೂ ಕೈಗೊಂಡಿವೆ’ ಎಂದು ಮೂಲಗಳು ತಿಳಿಸಿವೆ.