ಅಬುಧಾಬಿ: ನಟ ರಜನಿಕಾಂತ್ ಅವರು ಅಬುಧಾಬಿಯಲ್ಲಿರುವ ಬಿಎಪಿಎಸ್ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಈ ಕುರಿತು ಬಿಎಪಿಎಸ್ ಸಂಸ್ಥೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಫೋಟೊ, ವಿಡಿಯೊಗಳನ್ನು ಹಂಚಿಕೊಂಡಿದೆ. ವಿಡಿಯೊದಲ್ಲಿ ಅರ್ಚಕರೊಬ್ಬರು ರಜನಿಕಾಂತ್ ಅವರಿಗೆ ದೇವಾಲಯದ ವಿಶೇಷತೆಗಳ ಬಗ್ಗೆ ವಿವರಿಸುವುದನ್ನು ಕಾಣಬಹುದಾಗಿದೆ. ಕೊನೆಯಲ್ಲಿ ರಜನಿಕಾಂತ್ ಅವರ ಕೈಗೆ ದಾರ ಕಟ್ಟಿ, ಪುಸ್ತಕವನ್ನು ಉಡುಗೊರೆಯಾಗಿ ನೀಡಿ ಮಂದಿರದಿಂದ ಬೀಳ್ಕೊಡಲಾಗಿದೆ.