<p><strong>ಢಾಕಾ:</strong> ಯಾವುದೇ ರೀತಿಯ ಅಕ್ರಮ ಮತ್ತು ಭ್ರಷ್ಟಾಚಾರ ಸಾಬೀತಾದರೆ ಭಾರತದ ಅದಾನಿ ಸಮೂಹದೊಂದಿಗಿನ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸುವುದಾಗಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಹೇಳಿದೆ.</p>.<p>‘ಒಪ್ಪಂದದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಭಷ್ಟಾಚಾರ ನಡೆದಿರುವುದು ಸಾಬೀತಾದರೆ ಒಪ್ಪಂದವೇ ರದ್ದುಗೊಳ್ಳುವ ಸಾಧ್ಯತೆಗಳಿವೆ’ ಎಂದು ಬಾಂಗ್ಲಾದ ಇಂಧನ ವ್ಯವಹಾರಗಳ ಸಲಹೆಗಾರ ಮೊಹಮ್ಮದ್ ಫೌಝುಲ್ ಕಬೀರ್ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>.<p>ಹಸೀನಾ ಆಡಳಿತದಲ್ಲಿ ನಡೆದಿರುವ ವಿದ್ಯುತ್ ಒಪ್ಪಂದಗಳ ಬಗ್ಗೆ ಪರಿಶೀಲನೆ ನಡೆಸಿರುವ ರಾಷ್ಟ್ರೀಯ ಪರಿಶೀಲನಾ ಸಮಿತಿಯು ಸಲ್ಲಿಸಿರುವ ಮಧ್ಯಂತರ ವರದಿಯ ಬಗ್ಗೆ ಕಬೀರ್ ಪ್ರತಿಕ್ರಿಯಿಸಿದರು. </p>.<p>2017ರಲ್ಲಿ ಅದಾನಿ ಸಮೂಹ ಮತ್ತು ಬಾಂಗ್ಲಾದೇಶದ ನಡುವೆ ಆಗಿದ್ದ ಒಪ್ಪಂದದ ಕುರಿತು, ಮಾಜಿ ಪ್ರಧಾನಿ ಶೇಖ್ ಹಸೀನಾ ಸರ್ಕಾರ ಪತನಗೊಂಡ ಬಳಿಕ ಪರಿಶೀಲನೆ ನಡೆಸಲಾಗುತ್ತಿದೆ.</p>.<p>‘ಹಸೀನಾ ಆಡಳಿತಾವಧಿಯಲ್ಲಿ ಇಂಧನ ವಲಯದಲ್ಲಿ ಸರ್ಕಾರದ ವೈಫಲ್ಯ ಮತ್ತು ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ’ ಎಂದು ಸಮಿತಿಯ ಮುಖ್ಯಸ್ಥರು ತಿಳಿಸಿದ್ದಾರೆ. ಸಮಿತಿಯು ಅಂತಿಮ ವರದಿಯನ್ನು 2026ರ ಜನವರಿಯಲ್ಲಿ ನೀಡುವ ಸಾಧ್ಯತೆಯಿದೆ.</p>.<p>ಅದಾನಿ ಸಮೂಹದ ಜೊತೆಗಿನ ವಿದ್ಯುತ್ ಖರೀದಿ ಒಪ್ಪಂದದ ಬಗ್ಗೆ ಪ್ರತ್ಯೇಕ ವರದಿ ತಯಾರಿಸಿರುವುದಾಗಿ ಸಮಿತಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ:</strong> ಯಾವುದೇ ರೀತಿಯ ಅಕ್ರಮ ಮತ್ತು ಭ್ರಷ್ಟಾಚಾರ ಸಾಬೀತಾದರೆ ಭಾರತದ ಅದಾನಿ ಸಮೂಹದೊಂದಿಗಿನ ವಿದ್ಯುತ್ ಒಪ್ಪಂದವನ್ನು ರದ್ದುಗೊಳಿಸುವುದಾಗಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಹೇಳಿದೆ.</p>.<p>‘ಒಪ್ಪಂದದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಭಷ್ಟಾಚಾರ ನಡೆದಿರುವುದು ಸಾಬೀತಾದರೆ ಒಪ್ಪಂದವೇ ರದ್ದುಗೊಳ್ಳುವ ಸಾಧ್ಯತೆಗಳಿವೆ’ ಎಂದು ಬಾಂಗ್ಲಾದ ಇಂಧನ ವ್ಯವಹಾರಗಳ ಸಲಹೆಗಾರ ಮೊಹಮ್ಮದ್ ಫೌಝುಲ್ ಕಬೀರ್ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.</p>.<p>ಹಸೀನಾ ಆಡಳಿತದಲ್ಲಿ ನಡೆದಿರುವ ವಿದ್ಯುತ್ ಒಪ್ಪಂದಗಳ ಬಗ್ಗೆ ಪರಿಶೀಲನೆ ನಡೆಸಿರುವ ರಾಷ್ಟ್ರೀಯ ಪರಿಶೀಲನಾ ಸಮಿತಿಯು ಸಲ್ಲಿಸಿರುವ ಮಧ್ಯಂತರ ವರದಿಯ ಬಗ್ಗೆ ಕಬೀರ್ ಪ್ರತಿಕ್ರಿಯಿಸಿದರು. </p>.<p>2017ರಲ್ಲಿ ಅದಾನಿ ಸಮೂಹ ಮತ್ತು ಬಾಂಗ್ಲಾದೇಶದ ನಡುವೆ ಆಗಿದ್ದ ಒಪ್ಪಂದದ ಕುರಿತು, ಮಾಜಿ ಪ್ರಧಾನಿ ಶೇಖ್ ಹಸೀನಾ ಸರ್ಕಾರ ಪತನಗೊಂಡ ಬಳಿಕ ಪರಿಶೀಲನೆ ನಡೆಸಲಾಗುತ್ತಿದೆ.</p>.<p>‘ಹಸೀನಾ ಆಡಳಿತಾವಧಿಯಲ್ಲಿ ಇಂಧನ ವಲಯದಲ್ಲಿ ಸರ್ಕಾರದ ವೈಫಲ್ಯ ಮತ್ತು ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ನಡೆದಿರುವುದು ತನಿಖೆಯಲ್ಲಿ ಪತ್ತೆಯಾಗಿದೆ’ ಎಂದು ಸಮಿತಿಯ ಮುಖ್ಯಸ್ಥರು ತಿಳಿಸಿದ್ದಾರೆ. ಸಮಿತಿಯು ಅಂತಿಮ ವರದಿಯನ್ನು 2026ರ ಜನವರಿಯಲ್ಲಿ ನೀಡುವ ಸಾಧ್ಯತೆಯಿದೆ.</p>.<p>ಅದಾನಿ ಸಮೂಹದ ಜೊತೆಗಿನ ವಿದ್ಯುತ್ ಖರೀದಿ ಒಪ್ಪಂದದ ಬಗ್ಗೆ ಪ್ರತ್ಯೇಕ ವರದಿ ತಯಾರಿಸಿರುವುದಾಗಿ ಸಮಿತಿ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>