<p><strong>ಕೊಲಂಬೊ:</strong> ಪ್ರತಿಕೂಲ ಹವಾಮಾನದಿಂದ ಶ್ರೀಲಂಕಾದಲ್ಲಿ 15 ಮಂದಿ ಸಾವಿಗೀಡಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ (ಡಿಎಂಸಿ) ಶನಿವಾರ ತಿಳಿಸಿದೆ.</p>.<p>ದೇಶದಲ್ಲಿ ಪ್ರವಾಹ, ಬಿರುಗಾಳಿ ಹಾಗೂ ಭೂಕುಸಿತದಂತಹ ಅವಘಡಗಲ್ಲಿ 4,50,000ಕ್ಕೂ ಹೆಚ್ಚು ಜನ ತೊಂದರೆಗೀಡಾಗಿದ್ದಾರೆ ಎಂದು ಡಿಎಂಸಿ ಹೇಳಿದೆ.</p>.<p>ನವೆಂಬರ್ 21ರಿಂದ ಈವರೆಗೆ 15 ಮಂದಿ ಮೃತಪಟ್ಟಿದ್ದಾರೆ. ಪೂರ್ವ ಪ್ರಾಂತ್ಯದಲ್ಲಿ ಅತಿ ಹೆಚ್ಚು (10) ಸಾವುಗಳು ವರದಿಯಾಗಿವೆ.</p>.<p>ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ತೀವ್ರ ವಾಯು ಭಾರ ಕುಸಿತದಿಂದ ಶ್ರಿಲಂಕಾದಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿ ಸೃಷ್ಟಿಯಾಗಿದೆ.</p>.<p>ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ‘ಫೆಂಗಲ್’ ಚಂಡಮಾರುತವು ಶನಿವಾರ ಮಧ್ಯಾಹ್ನ ದಕ್ಷಿಣ ಭಾರತದ ತಮಿಳುನಾಡಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 90 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p> .ಶ್ರೀಲಂಕಾ | ಭಾರಿ ಮಳೆ: 12 ಮಂದಿ ಸಾವು, 3.30 ಲಕ್ಷ ಮಂದಿ ಸಂಕಷ್ಟದಲ್ಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲಂಬೊ:</strong> ಪ್ರತಿಕೂಲ ಹವಾಮಾನದಿಂದ ಶ್ರೀಲಂಕಾದಲ್ಲಿ 15 ಮಂದಿ ಸಾವಿಗೀಡಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ (ಡಿಎಂಸಿ) ಶನಿವಾರ ತಿಳಿಸಿದೆ.</p>.<p>ದೇಶದಲ್ಲಿ ಪ್ರವಾಹ, ಬಿರುಗಾಳಿ ಹಾಗೂ ಭೂಕುಸಿತದಂತಹ ಅವಘಡಗಲ್ಲಿ 4,50,000ಕ್ಕೂ ಹೆಚ್ಚು ಜನ ತೊಂದರೆಗೀಡಾಗಿದ್ದಾರೆ ಎಂದು ಡಿಎಂಸಿ ಹೇಳಿದೆ.</p>.<p>ನವೆಂಬರ್ 21ರಿಂದ ಈವರೆಗೆ 15 ಮಂದಿ ಮೃತಪಟ್ಟಿದ್ದಾರೆ. ಪೂರ್ವ ಪ್ರಾಂತ್ಯದಲ್ಲಿ ಅತಿ ಹೆಚ್ಚು (10) ಸಾವುಗಳು ವರದಿಯಾಗಿವೆ.</p>.<p>ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ತೀವ್ರ ವಾಯು ಭಾರ ಕುಸಿತದಿಂದ ಶ್ರಿಲಂಕಾದಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿ ಸೃಷ್ಟಿಯಾಗಿದೆ.</p>.<p>ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ‘ಫೆಂಗಲ್’ ಚಂಡಮಾರುತವು ಶನಿವಾರ ಮಧ್ಯಾಹ್ನ ದಕ್ಷಿಣ ಭಾರತದ ತಮಿಳುನಾಡಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಈ ವೇಳೆ ಗಂಟೆಗೆ 90 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p> .ಶ್ರೀಲಂಕಾ | ಭಾರಿ ಮಳೆ: 12 ಮಂದಿ ಸಾವು, 3.30 ಲಕ್ಷ ಮಂದಿ ಸಂಕಷ್ಟದಲ್ಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>